ಶಾಸಕ ಯತ್ನಾಳ್ ನಡೆ ಬಗ್ಗೆ ಪಕ್ಷದ ಆಂತರಿಕ ಸಭೆಯಲ್ಲಿ ಚರ್ಚಿಸಿದೆ: ಸಿ.ಟಿ ರವಿ

Public TV
1 Min Read
CT Ravi

ನವದೆಹಲಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basana Gauda Patil Yatnal) ವಿವಾದಾತ್ಮಕ ಹೇಳಿಕೆ ಮತ್ತು ಅವರ ನಡವಳಿಕೆ ಬಗ್ಗೆ ಪಕ್ಷದ ಆಂತರಿಕ ಸಭೆಯಲ್ಲಿ ಚರ್ಚಿಸಿದ್ದು, ಹೈಕಮಾಂಡ್‍ಗೆ ವರದಿ ನೀಡಲಾಗಿದೆ. ಈ ಬಗ್ಗೆ ಪಕ್ಷ ಗಮನ ಹರಿಸಲಿದ್ದು, ಶೀಘ್ರದಲ್ಲಿ ಒಂದು ನಿರ್ಣಯವನ್ನು ತೆಗೆದುಕೊಳ್ಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಹೇಳಿದ್ದಾರೆ.

bjp flag

ನವದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆ ಭಾಗಿಯಾಗಿರುವ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ ಯತ್ನಾಳ್ ಹೇಳಿಕೆಯನ್ನು ಗಮನಿಸಿದೆ, ಇದು ಪಕ್ಷದ ಹಿತದೃಷ್ಟಿಯಿಂದ ಸರಿಯಲ್ಲ. ಬಿಜೆಪಿ (Bharatiya Janata Party) ಶಿಸ್ತಿಗೆ ಪಕ್ಷ ಇಲ್ಲಿ ಎಲ್ಲರೂ ಪಕ್ಷಕ್ಕೆ ಬದ್ಧವಾಗಿರಬೇಕು ಎಂದರು. ಇದನ್ನೂ ಓದಿ: ಹಣದ ಮಳೆ ಸುರಿಸಿದ ಮುಸ್ಲಿಂ ಮುಖಂಡರು

Basangouda Patil Yatnal 1

ಕಾರ್ಯಕಾರಿಣಿ ಸಭೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆ (Vidhanasabha Election) ಗಳ ಬಗ್ಗೆ ಚರ್ಚೆ ನಡೆದಿದೆ. ಗುಜರಾತ್ ರೀತಿಯ ಗೆಲುವು ಪಡೆಯಲು ಏನು ಮಾಡಬೇಕು ಎನ್ನುವ ಬಗ್ಗೆ ಸಮಾಲೋಚನೆ ನಡೆದಿದೆ. ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಭರವಸೆ ಇದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ವರದಿ ನೀಡಿದ್ದಾರೆ ಎಂದು ಹೇಳಿದರು.

BASAVARAJ BOMMAI 8

ಸಿಎಂ ಘೋಷಣೆ ಮಾಡಿರುವ ರಥಯಾತ್ರೆ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆಯಾಗಿಲ್ಲ. ಬಹಿರಂಗ ಸಭೆಯಲ್ಲಿ ಮಾತನಾಡುವಂತ ವಿಷಯವಲ್ಲ ಇದು, ಪಕ್ಷದ ಪ್ರಮುಖ ನಾಯಕರು ನಿರ್ಧಾರ ಕೈಗೊಂಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ (Cabinet Expansion) ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ಈ ಬಗ್ಗೆ ಸಿಎಂ ಕೇಳಬೇಕು ಎಂದು ತಿಳಿಸಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *