Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕನ್ನಡ ಕೋಟ್ಯಧಿಪತಿಯಲ್ಲಿ 50 ಲಕ್ಷ ಬಹುಮಾನ – ವಾಲ್ಮೀಕಿ ಹಗರಣದಲ್ಲಿ 50 ಲಕ್ಷ‌ ಪಡೆದರೇ?

Public TV
Last updated: July 11, 2024 1:20 pm
Public TV
Share
2 Min Read
MLA Basanagouda Daddal PA Pampanna Had Won 50 Lakh Rupees In Kannadada Kotyadhipati 1
SHARE

– ಬಸನಗೌಡ ದದ್ದಲ ಮಾಜಿ ಪಿಎ ಪಂಪಣ್ಣ ಮನೆ ಮೇಲೆ ಇಡಿ ದಾಳಿ

ರಾಯಚೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ(Karnataka Maharshi Valmiki Scheduled Tribe Development Corporation Ltd) 187 ಕೋಟಿ ರೂ. ಹಗರಣ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ನಡೆದಿರುವ ಜಾರಿ ನಿರ್ದೇಶನಾಲಯ (ED) ದಾಳಿ ಎರಡನೇ ದಿನವೂ ಮುಂದುವರಿದಿದೆ.

ವಾಲ್ಮೀಕಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ದದ್ದಲ (Basanagouda Daddal) ಹಾಗೂ ಅವರ ಮಾಜಿ ಪಿಎ ಪಂಪಣ್ಣ (Pampanna) ಮನೆಯಲ್ಲಿ ಇಡಿ ಅಧಿಕಾರಿಗಳು ಬೀಡು ಬಿಟ್ಟಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ರಾಯಚೂರು ತಾಲೂಕು ಪಂಚಾಯತ್‌ನಲ್ಲಿ ಕೇಸ್ ವರ್ಕರ್ ಆಗಿ ಕೆಲಸ‌ ಮಾಡುತ್ತಿರುವ ಪಂಪಣ್ಣ ರಾಥೋಡ್ ಕತೆ ನಿಜಕ್ಕೂ ರೋಚಕವಾಗಿದೆ. ಕಡು ಬಡತನದಲ್ಲಿ ಬೆಳೆದು ಬಂದ ಪಂಪಣ್ಣ ತಾನು ಮಹಾ ಬುದ್ದಿವಂತ ಎನ್ನುವುದನ್ನು ಈ ಹಿಂದೆಯೇ ಸಾಬೀತು ಮಾಡಿದ್ದಾರೆ. ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ನಲ್ಲಿ 50 ಲಕ್ಷ ಗೆಲ್ಲುವ ಮೂಲಕ ಪಂಪಣ್ಣ ಇಡೀ ಕರ್ನಾಟಕಕ್ಕೆ ಪರಿಚಯವಾಗಿದ್ದರು.  ಇದನ್ನೂ ಓದಿ: ಕೇವಲ ನಾಮ್‌ಕಾವಸ್ತೆ ಹೋರಾಟ – ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್‌ ಗರಂ

ದೇವದುರ್ಗ ಮೂಲದ ಪಂಪಣ್ಣ ಸ್ಮಶಾನದಲ್ಲಿ ಇಡುವ ಎಡೆಯನ್ನು ತಿಂದು ಬೆಳೆದವರು ಅನ್ನೋ ವಿಚಾರ ಸಂಚಲನ ಮೂಡಿಸಿತ್ತು.

2012 ರಲ್ಲಿ ನಟ ಪುನೀತ್ ರಾಜ್ ಕುಮಾರ್ (Puneeth Rajkumar) ನಡೆಸಿಕೊಡ್ತಿದ್ದ ಕನ್ನಡ ಕೋಟ್ಯಧಿಪತಿ (Kannada Kotyadipathi) ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಪಂಪಣ್ಣ ಕೊನೆಯವರೆಗೂ ಉಳಿದಿದ್ದರು. ಈ ಶೋ ನಲ್ಲಿ 50 ಲಕ್ಷ ರೂ. ಗೆದ್ದಿದ್ದರು. ಒಂದು ಕೋಟಿ ರೂಪಾಯಿಗೆ ಕೇಳಿದ ಕೊನೆ ಪ್ರಶ್ನೆವರೆಗೂ ಸೇಫ್ ಆಗಿ ಆಡಿದ್ದ ಪಂಪಣ್ಣ ಬಳಿಕ ಕನ್ನಡ ಕೋಟ್ಯಧಿಪತಿಯಾಗಲು ಇದ್ದ ಕೊನೆ ಪ್ರಶ್ನೆಗೆ ಉತ್ತರಿಸಲು ಆಗದೇ ಆಟದಿಂದ ನಿರ್ಗಮಿಸಿ 50 ಲಕ್ಷ ರೂಪಾಯಿ ಪಡೆದಿದ್ದರು.

2012 ರಲ್ಲಿ ಶಿಕ್ಷಕ ವೃತ್ತಿಯಲ್ಲಿದ್ದ ಪಂಪಣ್ಣ 50 ಲಕ್ಷ‌ ರೂ. ಗೆದ್ದ ಬಳಿಕ ಅಂದಿನ ರಾಯಚೂರು ಸಂಸದರಿಗೆ ಸರ್ಕಾರಿ ಆಪ್ತ ಸಹಾಯಕರಾಗಿ ಸೇರಿಕೊಂಡರು. ಬಳಿಕ ಪಿಡಿಓ ಹುದ್ದೆಗೆ ನಿಯೋಜನೆಗೊಂಡರು. ಕಾರ್ಯಕ್ಕೆ ಹಾಜರಾಗದೇ ಜನಪ್ರತಿನಿಧಿಗಳ ಆಪ್ತ ಸಹಾಯಕ ಕೆಲಸವನ್ನೇ ಹುಡುಕಿಕೊಂಡು ಮಾಡತೊಡಗಿದ್ದರು. ಶಾಸಕ ಬಸನಗೌಡ ದದ್ದಲ್‌ ಅವರಿಗೂ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದರು.

 

ಸದ್ಯ ರಾಯಚೂರಿನ (Raichuru) ಬಿಚ್ಚಾಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. ಆದರೆ ಇಲ್ಲೂ ಕೆಲಸಕ್ಕೆ ಹಾಜರಾಗದೇ ತಾಲೂಕು ಪಂಚಾಯತಿ ಕಚೇರಿಯಲ್ಲಿ ಕೇಸ್ ವರ್ಕರ್ ಆಗಿ ಉಳಿದಿದ್ದಾರೆ. ರಾಯಚೂರಿನ ನೂತನ ವಿಧಾನ ಪರಿಷತ್ ಸದಸ್ಯರೊಬ್ಬರಿಗೆ ಆಪ್ತ ಸಹಾಯಕರಾಗಿ ಹೋಗಲು ಪ್ರಯತ್ನ ನಡೆಸಿದ್ದರು. ಆದರೆ ವಾಲ್ಮೀಕಿ ನಿಗಮದ ಹಗರಣದಲ್ಲಿ ಹೆಸರು ಕೇಳಿ ಬಂದಿದ್ದರಿಂದ ಆ ನೂತನ ಎಂಎಲ್‌ಸಿ ಪಂಪಣ್ಣನನ್ನ ತಮ್ಮ ಪಿಎ ಆಗಿ ಸೇರಿಸಿಕೊಂಡಿಲ್ಲ.

ವಾಲ್ಮೀಕಿ ನಿಗಮದ ಹಗರಣದಲ್ಲಿ 50 ಲಕ್ಷ ರೂಪಾಯಿ ಪಡೆದಿರುವ ಆರೋಪ ಹಿನ್ನೆಲೆ ನಗರದ ಆಜಾದ್ ನಗರದಲ್ಲಿರುವ ರಾಯಲ್ ಫೋರ್ಟ್ ಅಪಾರ್ಟ್ಮೆಂಟ್‌ನ ಪಂಪಣ್ಣ ಫ್ಲಾಟ್ ಮೇಲೆ ದಾಳಿ ಮಾಡಿರುವ ಇಡಿ ಅಧಿಕಾರಿಗಳು ಬುಧವಾರದಿಂದ ತಪಾಸಣೆ ನಡೆಸುತ್ತಿದ್ದಾರೆ. ಪಂಪಣ್ಣನ ಫ್ಲಾಟ್ ‌ನಲ್ಲಿ ಮಹತ್ವದ ದಾಖಲೆಗಳು ಸಿಕ್ಕಿದ್ದು ಅಧಿಕಾರಿಗಳು ದಾಖಲೆಗಳನ್ನ ಸ್ಕ್ಯಾನ್ ಮಾಡಿ ಹಿರಿಯ ಅಧಿಕಾರಿಗಳಿಗೆ ರವಾನಿಸಿದ್ದಾರೆ.

 

TAGGED:basanagouda daddalcorruptionEDPampannaಇಂಡಿಪಂಪಣ್ಣಬಸನಗೌಡ ದದ್ದಲಭ್ರಷ್ಟಾಚಾರ
Share This Article
Facebook Whatsapp Whatsapp Telegram

Cinema Updates

Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
58 minutes ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
2 hours ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
4 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
20 hours ago

You Might Also Like

Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
10 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
27 minutes ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
55 minutes ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
1 hour ago
vidyapeeta
Bengaluru City

ನಾಳೆಯಿಂದ 2 ದಿನ ಪಬ್ಲಿಕ್‌ ಟಿವಿ ‘ವಿದ್ಯಾಪೀಠ’

Public TV
By Public TV
1 hour ago
Dinesh Gundu Rao 4
Bengaluru City

ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?