Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದರಾಮಯ್ಯಗೆ ಕಾರ್ ಗಿಫ್ಟ್ ಕೊಟ್ಟ ‘ಶಿಷ್ಯ’ ಭೈರತಿ ಸುರೇಶ್ – ಸಿದ್ದು ಉತ್ತರಾಧಿಕಾರಿ ಆಗ್ತಾರಾ?

Public TV
Last updated: January 20, 2019 12:54 pm
Public TV
Share
3 Min Read
siddaramaiah car 1 copy
SHARE

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಕೆಜೆ ಜಾರ್ಜ್ ಅವರಿಂದ ಭರ್ಜರಿ ಗಿಫ್ಟ್ ಲಭಿಸಿತ್ತು. ಆದಾದ ಬಳಿಕ ಸದ್ಯ ಸಿದ್ದರಾಮಯ್ಯ ಅವರ ರಾಜಕೀಯ ಶಿಷ್ಯರೆಂದೇ ಗುರುತಿಸಿಕೊಂಡಿರುವ ಹೆಬ್ಬಾಳ ಶಾಸಕ ಭೈರತಿ ಸುರೇಶ್ ಅವರು ಕೋಟಿ ರೂ. ಮೌಲ್ಯದ ಕಾರು ಉಡುಗೊರೆಯಾಗಿ ನೀಡಿದ್ದಾರೆ.

ರಾಜಕೀಯದಲ್ಲಿ ತಮ್ಮ ಮಗನನ್ನು ಬೆಳೆಸುವ ಬದಲು ತಮ್ಮ ಶಿಷ್ಯಂದಿರಗೆ ಉತ್ತಮ ರಾಜಕೀಯ ಜೀವನ ರೂಪಿಸಲು ಸಿದ್ದರಾಮಯ್ಯ ಮುಂದಾಗಿದ್ದರು ಎಂಬ ಸುದ್ದಿ ಈ ಹಿಂದೆಯೇ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಅವರ ಶಿಷ್ಯರ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಭೈರತಿ ಸುರೇಶ್ ಅವರು ಹೊಸ ಕಾರು ನೀಡಿದ್ದಾರೆ.

SIDDAGANGA car copy

ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಭೈರತಿ ಸುರೇಶ್ ಅವರು ವಿಧಾನ ಪರಿಷತ್ ಅಭ್ಯರ್ಥಿಯಾಗಿ ಸ್ವತಂತ್ರ್ಯವಾಗಿ ಸ್ಪಧಿಸಿದ್ರು. ಬಳಿಕ ಹೆಬ್ಬಾಳ ಕ್ಷೇತ್ರದಲ್ಲಿ ಗೆದ್ದು ಶಾಸಕ ಸ್ಥಾನ ಪಡೆದಿದ್ದರು. ಇದನ್ನೂ ಓದಿ: ಮಾಜಿ ಸಿಎಂ ಮನೆಗೆ ಬಂತು ಕೋಟಿ ಮೌಲ್ಯದ ಬೆಂಜ್ ಕಾರ್! –  ವಿಶೇಷತೆ ಏನು?

ಮಾಜಿ ಸಿಎಂ ಸಿದ್ದರಾಮಯ್ಯ ನಂತರ ಕಾಂಗ್ರೆಸ್ ನಲ್ಲಿ ಅವರ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಈ ಹಿಂದೆಯೇ ಸಂದೇಶ ನೀಡಿದ್ದರು. ಸಾಮಾನ್ಯವಾಗಿ ತಂದೆ ಸಕ್ರಿಯ ರಾಜಕಾರಣದಲ್ಲಿದ್ದರೆ ಅವರ ಮಗ ಉತ್ತರಾಧಿಕಾರಿ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ಸಿಎಂ ತಮ್ಮ ಮಗನ ಬಗ್ಗೆ ಹೆಚ್ಚು ಒಲವು ತೋರಿಸದೇ ತಮ್ಮದೇ ಸಮುದಾಯ ಶಾಸಕರದ ಭೈರತಿ ಸುರೇಶ್ ಅವರನ್ನು ಸದ್ದಿಲ್ಲದೇ ಪ್ರಚಾರಕ್ಕೆ ತರಲು ಮುಂದಾಗಿದ್ದರು. ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ತಮ್ಮ ಮಗನಿಗೆ ಮಂತ್ರಿಗಿರಿ ಕೊಡಿಸುವಂತೆ ಒತ್ತಡ ಹೇರದೆ ಭೈರತಿ ಸುರೇಶ್ ಅವರ ಪರವಾಗಿ ಸಿದ್ದರಾಮಯ್ಯ ಹೆಚ್ಚಿನ ಒಲವು ತೋರಿದ್ದರು.

CAR copy

ಪಕ್ಷದ ಕಷ್ಟಕಾಲದಲ್ಲಿ ಸಹಾಯಕ್ಕೆ ಬಂದ ಭೈರತಿ ಸುರೇಶ್ ರನ್ನು ಸಚಿವರನ್ನಾಗಿ ಮಾಡಲು ಸಿದ್ದರಾಮಯ್ಯ ಆಸಕ್ತಿ ಹೊಂದಿದ್ದರು. ಆದ್ದರಿಂದ ಅವರನ್ನೇ ಸಿದ್ದರಾಮಯ್ಯ ನಂತರದ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದಲ್ಲಿ ಇನ್ನುಳಿದ ಕುರುಬ ಸಮುದಾಯದ ನಾಯಕ ಅಸಮಾಧಾನಕ್ಕೂ ಕಾರಣವಾಗಿತ್ತು. ಪ್ರಮುಖವಾಗಿ ಹೆಚ್.ಎಂ.ರೇವಣ್ಣ, ಶಾಸಕರಾದ ಶಿವಳ್ಳಿ, ಎಂ.ಟಿ.ಬಿ.ನಾಗರಾಜ್ ಪಕ್ಷದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಭಯ ಪಡುವಂತಾಗಿತ್ತು. ಈ ಕಾರಣಕ್ಕೆ ಸಿದ್ದರಾಮಯ್ಯನವರೇ ನಮ್ಮ ಪಾಲಿಗೆ ವಿಲನ್ ಆಗಿದ್ದು, ಮಂತ್ರಿ ಸ್ಥಾನಕ್ಕೆ ಸಿಎಂ ತಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂದು ಕುರುಬ ಸಮಾಜದ ಶಾಸಕರು ತಮ್ಮ ಆಪ್ತರ ಜೊತೆ ಮಾತನಾಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿತ್ತು. ಇದನ್ನೂ ಓದಿ: ಸಿದ್ದರಾಮಯ್ಯಗೆ ಮತ್ತೆ ಸುತ್ತಿಕೊಂಡ `ವಾಚ್’ ಕಂಟಕ!

ಯಾಕೆ ನೀವು ಭೈರತಿ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿದ್ದೀರಿ ಎಂದು ಸಿದ್ದರಾಮಯ್ಯನವರನ್ನು ಕೇಳಿದ್ದಕ್ಕೆ ತಮ್ಮ ಆಪ್ತರ ಬಳಿ, ಭೈರತಿ ಸುರೇಶ್ ತಮ್ಮ ಸಾಮಥ್ರ್ಯದಿಂದಲೇ ಪರಿಷತ್ ಸದಸ್ಯರಾಗಿದ್ದಾರೆ. ಹೆಬ್ಬಾಳ ಉಪ ಚುನಾವಣೆಯಲ್ಲಿ ಟಿಕೆಟ್ ತಪ್ಪಿದರೂ ನಿಷ್ಟೆಯಿಂದಲೇ ಪಕ್ಷಕ್ಕಾಗಿ ದುಡಿದಿದ್ದಾರೆ. ಯಾವುದೇ ಅಪಸ್ವರ ಎತ್ತದೇ ಶಿಸ್ತಿನಿಂದ ಪಕ್ಷ ಕಟ್ಟಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಕ್ಕಾಗ ಅವರಿಗೆ ಎಲ್ಲಾ ರೀತಿಯ ನೆರವು ನೀಡಿದ್ದಾರೆ. ಸಮುದಾಯದ ಉಳಿದ ಶಾಸಕರುಗಳು ಅವರವರ ಗೆಲುವಿಗಷ್ಟೆ ಸೀಮಿತರಾದರು. ಕಷ್ಟದಲ್ಲಿದ್ದಾಗ ಯಾರೂ ನೆರವಿಗೂ ಬರಲಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನುವ ವಿಚಾರ ತಿಳಿದುಬಂದಿತ್ತು.

SIDDU CAR 1

ಇದೇ ಕಾರಣಕ್ಕೆ ಭೈರತಿ ಸುರೇಶ್ ಗೆ ಮಂತ್ರಿ ಸ್ಥಾನ ನೀಡಬೇಕು ಅಂತಾ ಸ್ವತಃ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಕೂಡಾ ಮಾಡಿದ್ದರು ಎನ್ನಲಾಗಿತ್ತು. ತಮ್ಮ ಪುತ್ರನಿಗಿಂತ ಹೆಚ್ಚು ಪ್ರೀತಿ ತೋರಿಸಿ ಭವಿಷ್ಯದ ಸಮುದಾಯದ ನಾಯಕನನ್ನಾಗಿಸುವ ಯತ್ನದಲ್ಲಿದ್ದಾರೆ ಎನ್ನುವ ಮಾತುಗಳು ಸಿದ್ದರಾಮಯ್ಯ ಆಪ್ತ ವಲಯದಲ್ಲೇ ಈಗ ಕೇಳಿ ಬಂದಿತ್ತು. ಸದ್ಯ ಬೈರತಿ ಸುರೇಶ್ ಅವರು ತಮ್ಮ ರಾಜಕೀಯ ಬೆಳವಣಿಗೆಗೆ ಕಾರಣರಾದ ಸಿದ್ದರಾಮಯ್ಯ ಅವರಿಗೆ ದುಬಾರಿ ಬೆಲೆಯ ಕಾರು ಗಿಫ್ಟ್ ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengalurubuycarPublic TVsiddaramaiahಕಾರುಖರೀದಿಗಿಫ್ಟ್ಚುನಾವಣೆಪಬ್ಲಿಕ್ ಟಿವಿಬೆಂಗಳೂರುಮಂತ್ರಿ ಸ್ಥಾನಶಾಸಕ ಭೈತರಿ ಸುರೇಶ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

ramya 5
ರಮ್ಯಾ ವಿರುದ್ಧ `ಡಿ’ ಫ್ಯಾನ್ಸ್‌ನಿಂದ ಕೆಟ್ಟ ಕಾಮೆಂಟ್ಸ್; ಕಾನೂನು ಹೋರಾಟಕ್ಕೆ ಮುಂದಾದ ಮೋಹಕ ತಾರೆ
Cinema Latest Main Post Sandalwood
rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories

You Might Also Like

R Ashok 1
Bengaluru City

ಪರಿಶಿಷ್ಟರ 11.8 ಸಾವಿರ ಕೋಟಿಯನ್ನು `ಗ್ಯಾರಂಟಿ’ಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ: ಅಶೋಕ್ ಕಿಡಿ

Public TV
By Public TV
27 minutes ago
Donald Trump
Latest

ಯುರೋಪಿಯನ್‌ ಒಕ್ಕೂಟದೊಂದಿಗೆ ಟ್ರಂಪ್‌ ಬಿಗ್‌ ಡೀಲ್‌ – ಆಮದುಗಳ ಮೇಲೆ 15% ಸುಂಕ

Public TV
By Public TV
31 minutes ago
Uttar pradesh police constable wife
Crime

ಪೊಲೀಸಪ್ಪನ ಪತ್ನಿಗೆ ಅತ್ತೆ, ಮಾವನಿಂದ ಕಿರುಕುಳ – ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ

Public TV
By Public TV
57 minutes ago
Mandya Maddur Sadhana Samavesha
Districts

ಇಂದು ಮದ್ದೂರಿನಲ್ಲಿ ಬೃಹತ್ ಸಾಧನಾ ಸಮಾವೇಶ – 1,146.76 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ

Public TV
By Public TV
1 hour ago
UP Temple Stampede
Latest

UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

Public TV
By Public TV
2 hours ago
Bengaluru Youth Suicide
Bengaluru City

Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?