ರಾಯಚೂರು: ನಗರದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ಮಾಲಾಧಾರಿಗಳ ಜೊತೆ ಸಖತ್ ಸ್ಟೆಪ್ ಹಾಕಿದ್ದಾರೆ.
ಬುಧವಾರದಂದು ರಾಯಚೂರಿನ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಲಾಧಾರಿಗಳ ಶೋಭಾಯಾತ್ರೆ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಶಾಸಕ ಡಾ.ಶಿವರಾಜ್ ಪಾಟೀಲ್ ಅವರು ಅಯ್ಯಪ್ಪ ಮಾಲಾಧಾರಿಗಳು ಹಾಗೂ ಭಕ್ತರ ಜೊತೆ ಕುಣಿದು ಖುಷಿಪಟ್ಟಿದ್ದಾರೆ. ಶಿವರಾಜ್ ಪಾಟೀಲ್ ಅವರು ದೇವಾಲಯದಲ್ಲಿ ಕುಣಿದಿರೋ ವಿಡಿಯೋವನ್ನು ಸ್ಥಳದಲ್ಲಿದ್ದವರು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಒಂದೆಡೆ ಶಾಸಕರ ನೃತ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನುಳಿದವರು ರಾಯಚೂರು ನಗರದ ಸಮಸ್ಯೆಗಳನ್ನ ನೋಡುವವರು ಯಾರು ಅಂತ ಪ್ರಶ್ನಿಸಿದ್ದಾರೆ. ಕಳೆದ ಒಂದು ವಾರದಿಂದ ಇಡೀ ರಾಯಚೂರು ನಗರಕ್ಕೆ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಆದ್ರೆ ಶಾಸಕರು ಮಾತ್ರ ಖುಷಿಯಿಂದ ಕುಣಿಯುತ್ತಿದ್ದಾರೆ ಅಂತ ಕೆಲವರು ಗರಂ ಆಗಿದ್ದಾರೆ.
ಸಮಸ್ಯೆಗಳತ್ತ ಗಮನಹರಿಸುವ ಬದಲು ಡ್ಯಾನ್ಸ್ ಮಾಡಿದ ಶಾಸಕರ ನಡೆಯ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿ..
https://www.youtube.com/watch?v=IRrUIdFUKOA
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv