ದಾವಣಗೆರೆ: ಒಂದಲ್ಲ ಒಂದು ವಿನೂತನ ಕೆಲಸ ಮಾಡಿ ಸುದ್ದಿಯಾಗುತ್ತಿರುವ ಸಿಎಂ ರಾಜಕೀಯ ಕಾರ್ಯದರ್ಶಿವ, ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀಗ ಮದುವೆ ಮನೆಯಲ್ಲಿ ಕರಿಮಣಿ ಪೋಣಿಸುವ ಮೂಲಕ ಸುದ್ದಿಯಾಗಿದ್ದಾರೆ.

ಹೌದು. ಮಾಸಡಿ ಗ್ರಾಮದ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷರ ಸಹೋದರ ಬಸವರಾಜ್ ಅವರ ಮದುವೆ ನಿಗದಿಯಾಗಿತ್ತು. ಅಂತೆಯೇ ತರಗನಹಳ್ಳಿ ಗ್ರಾಮದ ಬಸವೇಶ್ವರ ಸಮುದಾಯ ಭವನದಲ್ಲಿ ಮದುವೆ ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮದಲ್ಲಿ ಶಾಸಕರು ಭಾಗಿಯಾಗಿದ್ದರು.

ಈ ವೇಳೆ ಕರಿಮಣಿ ಪೋಣಿಸುವ ಮೂಲಕ ನವ ಜೋಡಿಗೆ ಶಾಸಕರು ಶುಭ ಕೋರಿದ್ದಾರೆ. ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲಿ ಇನ್ಮುಂದೆ 33% ಮಹಿಳೆಯರಿಗೆ ಮೀಸಲು



