ಶಾಸಕನ ಶ್ರೀಕೃಷ್ಣನ ಪಾತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ

Public TV
1 Min Read
klr mla drama

ಕೋಲಾರ: ಇಷ್ಟು ದಿನ ಜನಪ್ರತಿನಿಧಿಗಳು ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡು ಜನರ ಗಮನ ಸೆಳೆದಿದ್ದರು. ಆದ್ರೆ ಈಗ ಶಾಸಕರೊಬ್ಬರು ನಾಟಕವೊಂದಕ್ಕೆ ಬಣ್ಣ ಹಚ್ಚಿ ಶ್ರೀಕೃಷ್ಣನ ಪಾತ್ರದಲ್ಲಿ ಸಖತ್ ಮಿಂಚಿದ್ದಾರೆ.

ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದ ಪೌರಾಣಿಕ ನಾಟಕದಲ್ಲಿ ಇಲ್ಲಿನ ಶಾಸಕ ಎಸ್. ಎನ್.ನಾರಾಯಣಸ್ವಾಮಿ ಬಣ್ಣ ಹಚ್ಚಿದ್ದಾರೆ. ಅವರ ಶ್ರೀಕೃಷ್ಣನ ಪಾತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ. ಅಲ್ಲದೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ತಾಲೂಕು ಪಂಚಾಯ್ತಿ ಅಧ್ಯಕ್ಷ ಹಾಗೂ ಗ್ರಾಮದ ಮುಖಂಡರು ನಾಟಕದಲ್ಲಿ ವಿವಿಧ ಪಾತ್ರದಲ್ಲಿ ಮಿಂಚಿದ್ದಾರೆ.

klr mla drama 1

ಬೂದಿಕೋಟೆ ಗ್ರಾಮದ ಲಕ್ಷ್ಮಿವೆಂಕಟರಮಣ ಸ್ವಾಮಿ ದೇವಾಲಯದ ಪುಷ್ಪ ಪಲ್ಲಕ್ಕಿ ಹಾಗೂ ಕರಗ ಮಹೋತ್ಸವದ ಪ್ರಯುಕ್ತ ನಾಟಕ ಹಮ್ಮಿಕೊಳ್ಳಲಾಗಿತ್ತು. ಸಾಮ್ರಾಟ್ ಸುಯೋಧನ ನಾಟಕದಲ್ಲಿ ಶ್ರೀಕೃಷ್ಣನ ಪಾತ್ರ ಹಾಕಿ ಶಾಸಕ ನಾರಾಯಣಸ್ವಾಮಿ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಶಾಸಕರು ಹಾಗೂ ಗ್ರಾಮದ ಮುಖಂಡರುಗಳ ಅಭಿನಯಕ್ಕೆ ಪ್ರೇಕ್ಷಕರು ಫುಲ್ ಖುಷ್ ಆಗಿದ್ದು, ಅವರ ಕಲೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

klr mla drama 2

Share This Article
Leave a Comment

Leave a Reply

Your email address will not be published. Required fields are marked *