– ಸಂಸದ ಪಿ.ಸಿ ಮೋಹನ್ – ಪ್ರದೀಪ್ ಈಶ್ವರ್ ನಡುವೆ ಜೋರು ಜಗಳ
ಬೆಂಗಳೂರು: ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಕ್ರೋಶಭರಿತರಾದ ಪ್ರದೀಪ್ ಈಶ್ವರ್ ಬಿಜೆಪಿ ಕಾರ್ಯಕ್ರರ್ತರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತ್ಯುತ್ಸವ ಕಾರ್ಯಕ್ರಮದ ವೇಳೆ ಪ್ರದೀಪ್ ಈಶ್ವರ್, ಮಕ್ಕಳ ಶಿಕ್ಷಣ ಕುರಿತಂತೆ ಮಾತನಾಡುತ್ತಿದ್ದರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಆಕ್ಷೇಪ ಎತ್ತಿದರು. ಇದರಿಂದ ರೊಚ್ಚಿಗೆದ್ದ ಶಾಸಕ, ಕೂತ್ಕೊಳ್ರಿ.. ನೀವೆಲ್ಲ ಸಮುದಾಯ ಗುಣಗಾನ ಮಾಡೋಕೆ ಬಂದಿದ್ದೀರಿ.. ಇದೇನ್ ಬಿಜೆಪಿ ಪ್ರೋಗ್ರಾಮ್ ಅಂದುಕೊಂಡಿದ್ದೀರಾ? ಕಾಂಗ್ರೆಸ್ ಸರ್ಕಾರ ಇದೋದು, ಬಿಜೆಪಿ ಗುಣಗಾನ ಮಾಡೋದು ಮುಚ್ಚಬೇಕು ಇಲ್ಲಿ. ಬಾಯಿ ಮುಚ್ಕೊಂಡು ಕೂತ್ಕೊಬೇಕು. ಸಿದ್ದರಾಮಯ್ಯನ ಸರ್ಕಾರ ಇರೋದು ರಾಜ್ಯದಲ್ಲಿ ನಿಮ್ಮಪ್ಪನ ಸರ್ಕಾರ ಅಲ್ಲ ಅಂತ ಏಕವಚನದಲ್ಲೇ ಲೇವಡಿ ಮಾಡಿದ್ದಾರೆ.
ಮುಂದುವರಿದು… ಇದು ಸಿದ್ದರಾಮಯ್ಯನ ಪ್ರೋಗ್ರಾಂ, ನಿಮ್ಮಪ್ಪನ ಪ್ರೋಗ್ರಾಂ ಅಲ್ಲ, ಸಿದ್ದರಾಮಯ್ಯನ ಕಾರ್ಯಕ್ರಮ ನಡೆಯುತ್ತಿರೋದು ಇಲ್ಲಿ.. ಗೆಟ್ ಲಾಸ್ಟ್ ಅಂತ ಕಿಡಿ ಕಾರಿದ್ದಾರೆ. ನಮಗೂ ನಮ್ಮ ಪಾರ್ಟಿ ಸಿದ್ಧಾಂತಗಳಿರುತ್ತೆ. ನೀವು ನಿಮ್ಮ ಪಕ್ಷವನ್ನ ಗುಣಗಾನ ಮಾಡಿದ್ರೆ, ನಾವು ನಮ್ಮ ಪಕ್ಷವನ್ನ ಗುಣಗಾನ ಮಾಡಬೇಕಾಗುತ್ತೆ ಅಂತ ವಾರ್ನಿಂಗ್ ಕೊಟ್ಟಿದ್ದಾರೆ. ಈ ವೇಳೆ ಹಿಂಗೆಲ್ಲ ಹೇಳಬೇಡ್ರಿ ಅಂತ ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಈ ಬೆಳವಣಿಗೆಯಿಂದ ಅಸಮಾಧಾನಗೊಂಡ ಬಿಜೆಪಿ ಸಂಸದ ಪಿ.ಸಿ ಮೋಹನ್.. ಪ್ರದೀಪ್ ಈಶ್ವರ್ ಅವರೇ ನಿಮಗೆ ಉತ್ಸಾಹ ಇದೆ. ಆದ್ರೆ ನೀವು ಇಲ್ಲಿ ಕೂತ್ಕೊಂಡು ಇದು ಸಿದ್ದರಾಮಯ್ಯನ ಪ್ರೋಗ್ರಾಂ ಅಂದ್ರೆ, ನಾನು ಬಿಜೆಪಿ ಸಂಸದ ಇಲ್ಲಿ ಇರಬೇಕೋ ಬೇಡ್ವೋ ಹೇಳ್ರಿ? ಅಂತ ಜೋರು ದನಿಯಲ್ಲೇ ಕೂಗಿದ್ದಾರೆ. ಈ ವೇಳೆ ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಕಾರ್ಯಕ್ರಮ ಆಯೋಜಕರು ಆಕ್ರೋಶಭರಿತರ ಮನವೊಲಿಸುವ ಪ್ರಯತ್ನ ಮಾಡಿದರು.