Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೇವಣ್ಣನನ್ನು ಹಿಟ್ಲರ್‌ಗೆ ಹೋಲಿಸಿದ ಶಾಸಕ ಪ್ರೀತಂ ಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ರೇವಣ್ಣನನ್ನು ಹಿಟ್ಲರ್‌ಗೆ ಹೋಲಿಸಿದ ಶಾಸಕ ಪ್ರೀತಂ ಗೌಡ

Hassan

ರೇವಣ್ಣನನ್ನು ಹಿಟ್ಲರ್‌ಗೆ ಹೋಲಿಸಿದ ಶಾಸಕ ಪ್ರೀತಂ ಗೌಡ

Public TV
Last updated: September 9, 2022 6:20 pm
Public TV
Share
2 Min Read
hd revanna Preetham Gowda
SHARE

ಹಾಸನ: ದಬ್ಬಾಳಿಕೆ ರಾಜಕಾರಣ ಒಪ್ಪಲ್ಲ, ಹಿಟ್ಲರ್ ಸಂಸ್ಕೃತಿಯನ್ನು ಹಾಸನದ ಜನರು ಒಪ್ಪುವುದಿಲ್ಲ. ಜೆಡಿಎಸ್(JDS) ಕಾರ್ಯಕರ್ತರ ಸಭೆಗೆ ಪೊಲೀಸ್ ಪ್ರೊಟೆಕ್ಷನ್ ಕೇಳುವ ಸ್ಥಿತಿಗೆ ರೇವಣ್ಣ ಬಂದಿದ್ದಾರೆ ಎಂದರೆ, ಅವರ ಪರಿಸ್ಥಿತಿ ರಾಜಕೀಯವಾಗಿ ಯಾವ ಮಟ್ಟಕ್ಕೆ ಹೋಗಿದೆ ಎಂಬುದನ್ನು ಊಹೆ ಮಾಡಿ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ(HD Revanna) ಅವರ ವಿರುದ್ಧ ಶಾಸಕ ಪ್ರೀತಂ ಗೌಡ(Preetham Gowda) ವಾಗ್ದಾಳಿ ನಡೆಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರನ್ನು ಒಂದು ಸಭೆಯಲ್ಲಿ ರೌಡಿಶೀಟರ್ ಎಂದರು. ಇನ್ನೊಂದು ಸಭೆಯಲ್ಲಿ ಕುಡುಕರು ಎಂದರು. ನಾನು ಬೇರೆ ಪಕ್ಷದ ಕಾರ್ಯಕರ್ತರ ಬಗ್ಗೆ ಮಾತನಾಡುವುದೇ ಇಲ್ಲ. ಆದರೆ ರೇವಣ್ಣ ಅವರು ತಮ್ಮ ಪಕ್ಷದ ಕಾರ್ಯಕರ್ತರ ಬಗ್ಗೆಯೇ ಆ ತರಹ ಮಾತನಾಡಿದ್ದಾರೆ ಎಂದರು.

Preetham Gowda

ಜೆಡಿಎಸ್ ಕಾರ್ಯಕರ್ತರ ಸಭೆಗೆ ಪೊಲೀಸ್ ಪ್ರೊಟೆಕ್ಷನ್ ಕೇಳುವ ಸ್ಥಿತಿಗೆ ರೇವಣ್ಣ ಅವರು ಬಂದಿದ್ದಾರೆ ಅಂತ ಹೇಳಿದರೆ, ರೇವಣ್ಣ ಅವರ ಪರಿಸ್ಥಿತಿ ರಾಜಕೀಯವಾಗಿ ಏನಾಗಿದೆ ಅಂತ ಕ್ಷಣಕ್ಕೆ ಊಹೆ ಮಾಡಿ. ನಾನು ನಮ್ಮ ಕಾರ್ಯಕರ್ತರ ಸಭೆ ನಡೆಸಬೇಕಾದರೆ ಪೊಲೀಸರನ್ನು ಕರೆಯುವುದೇ ಇಲ್ಲ. ಗೌಪ್ಯವಾಗಿ ಸಭೆ ಮಾಡುತ್ತೇನೆ. ಅವರ ಕಾರ್ಯಕರ್ತರ ಜೊತೆ ಅವರು ಮಾತನಾಡಲು ಪೊಲೀಸ್ ಪ್ರೊಟೆಕ್ಷನ್ ಬೇಕು ಎಂದರೆ, ಅವರ ಪರಿಸ್ಥಿತಿ ಏನಾಗಿದೆ ಎಂಬುದನ್ನು ಯೋಚಿಸಿ ಎಂದು ಕುಟುಕಿದರು. ಇದ್ನನೂ ಓದಿ: ಗಣಪತಿ ಡಿಜೆ – ನಿಮ್ಮ ಪುಂಗಿ ಇಲ್ಲಿ ನಡಿಯೋದಿಲ್ಲ, ನೀವು ಪುಂಗಿ ಊದಿದ್ರೆ, ನಾವು ನಮ್ಮ ಪುಂಗಿ ಊದುತ್ತೇವೆ: ಇನ್ಸ್‌ಪೆಕ್ಟರ್‌ ಅವಾಜ್

ನನ್ನ ಸಭೆಗೆ ನಾನು ಯಾವತ್ತೂ ಪೊಲೀಸರನ್ನು ಕರೆಯುವುದಿಲ್ಲ. ನನ್ನ ಕಾರ್ಯಕರ್ತರ ಮೇಲೆ ನನಗೆ ನಂಬಿಕೆ ಇದೆ. ನಮ್ಮ ಕಾರ್ಯಕರ್ತರನ್ನು ನಾವು ಯಾವತ್ತೂ ಕುಡುಕರು, ರೌಡಿಶೀಟರ್ ಅಂತ ಕರೆಯುವುದಿಲ್ಲ. ಸಭೆಯಿಂದ ಎದ್ದು ಹೋಗಿ ಅಂತ ಹೇಳೋದಿಲ್ಲ ಎಂದು ತಿಳಿಸಿದರು.

h.d.revanna

ನಮ್ಮ ಐಡಿಯಾಲಜಿಯನ್ನು ಹಾಸನದ ಜನರು ಒಪ್ಪಿದ್ದಾರೆ. ಅವರ ಐಡಿಯಾಲಜಿಯನ್ನು ಹಾಸನದ ಜನ ಒಪ್ಪುವುದಿಲ್ಲ. ಅವರ ಐಡಿಯಾಲಜಿ ಎಂದರೆ ಕಾರ್ಯಕರ್ತರನ್ನು ಎದ್ದು ಹೋಗಿ ಎನ್ನುವುದು, ಕುಡುಕರು, ರೌಡಿಶೀಟರ್ ಎನ್ನುವುದು. ಆ ಐಡಿಯಾಲಜಿಯನ್ನು, ದಬ್ಬಾಳಿಕೆ ರಾಜಕಾರಣವನ್ನು, ಹಿಟ್ಲರ್ ಸಂಸ್ಕೃತಿಯನ್ನು ಹಾಸನದ ಜನ ಒಪ್ಪುವುದಿಲ್ಲ. ಇಲ್ಲಿ ಏನೇ ಇದ್ದರೂ ಗೌರವ ಕೊಟ್ಟು ಗೌರವ ತೆಗೆದುಕೊಳ್ಳುವುದು ಎಂದು ಟೀಕಿಸಿದರು.

ಸಾಮಾನ್ಯ ಕಾರ್ಯಕರ್ತರನ್ನೂ ನಾನು ಅಣ್ಣ ಎಂದೇ ಮಾತನಾಡಿಸುತ್ತೇನೆ, ಹೋಗಿ ಬನ್ನಿ ಎನ್ನುತ್ತೇನೆ. ನಾನು ಯಾರಿಗೂ ಇಲ್ಲಿಯವರೆಗೆ ಏಕವಚನದಲ್ಲಿ ಮಾತನಾಡಿಸಿಲ್ಲ. ಇನ್ನು ಎದ್ದು ಹೋಗಿ ಎನ್ನುವುದು ದೂರದ ಪ್ರಶ್ನೆ. ಇದೇ ಪ್ರೀತಂ ಗೌಡನಿಗೂ ಮಾನ್ಯ ರೇವಣ್ಣ ಅವರಿಗೂ ಇರುವ ವ್ಯತ್ಯಾಸ ಎಂದು ಹೇಳಿದರು.

Preetham Gowda 1

ಹಾಸನದ ಜನರು ಮಾತ್ರ ಕೂಲಿ ಕಾರ್ಮಿಕರಾಗಿ ಇರಬೇಕು, ಇವರು ಮಾತ್ರ ಕಾರಿನಲ್ಲಿ ಓಡಾಡಬೇಕು. ರೈತರ ಭೂಮಿಗೆ ಬೆಲೆ ಬಂದರೆ ಕಾರಿನಲ್ಲಿ ಓಡಾಡುತ್ತಾರೆ. ಇವರು ಮಾತ್ರ ಕಾರಿನಲ್ಲಿ ಓಡಾಡಬೇಕಾ? ನಿಮ್ಮ ಕಾರ್ಯಕರ್ತರೇ ನಿಮ್ಮನ್ನು ತಿರಸ್ಕಾರ ಮಾಡಿದ್ದಾರೆ, ನಾವು ಕಾರ್ಯಕರ್ತರನ್ನು ದೇವರು ಎಂದು ಕರೆಯುತ್ತೇವೆ. 45 ವರ್ಷ ರಾಜಕೀಯ ಮಾಡಿರುವವರು 5 ವರ್ಷ ರಾಜಕೀಯ ಮಾಡಿರೋ ಪ್ರೀತಂ ಗೌಡನ ಬಗ್ಗೆ ಯಾಕೆ ಇಷ್ಟು ತಲೆ ಕೆಡಿಸಿಕೊಳ್ಳುತ್ತಾರೆ? ಆರಾಮಾಗಿ ಇರಲು ಹೇಳಿ ಎಂದು ವ್ಯಂಗ್ಯವಾಡಿದರು. ಇದ್ನನೂ ಓದಿ: ಗಣಿಗಾರಿಕೆಯಿಂದ ಭಾರತದ GDPಗೆ ಶೇ.2.5 ರಷ್ಟು ಕೊಡುಗೆ: ಪ್ರಲ್ಹಾದ್ ಜೋಶಿ

Live Tv
[brid partner=56869869 player=32851 video=960834 autoplay=true]

TAGGED:HD RevannaHitlerjdsPreetham gowdaಜೆಡಿಎಸ್ಪ್ರೀತಂ ಗೌಡಹಿಟ್ಲರ್ಹೆಚ್ ಡಿ ರೇವಣ್ಣ
Share This Article
Facebook Whatsapp Whatsapp Telegram

Cinema news

shiva rajkumar
ಫ್ಯಾನ್ಸ್ ವಾರ್ ಬಗ್ಗೆ ನಟ ಶಿವರಾಜ್‌ಕುಮಾರ್ ಖಡಕ್ ರಿಯಾಕ್ಷನ್
Cinema Latest Sandalwood Top Stories
Ravi Basrur
ಕಿಶೋರ್ ಮೇಗಳಮನೆ ನಿರ್ದೇಶನದ ಚಿತ್ರಕ್ಕೆ ಬಸ್ರೂರು ಸಂಗೀತ
Cinema Latest Sandalwood Top Stories
45 movie 3
`45′ ತ್ರಿಮೂರ್ತಿಗಳ ಸಂಗಮ.. ಕಣ್ತುಂಬಿಕೊಂಡ ಪ್ರೇಕ್ಷಕರ ಜೈಕಾರ..!
Cinema Latest Sandalwood Top Stories
Bigg Boss Kannada 12 Gilli Nata Parents
ಗಿಲ್ಲಿಗೆ ಕೋಲಲ್ಲಿ ಹಿಗ್ಗಾಮುಗ್ಗಾ ಬಾರಿಸಿದ ತಂದೆ
Latest Top Stories TV Shows

You Might Also Like

Hindu man Bangladesh
Latest

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಹತ್ಯೆ

Public TV
By Public TV
37 minutes ago
Bagalgunte Newly wed Suicide
Bengaluru City

Bagalgunte | ಮದುವೆಯಾಗಿ ಒಂದೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

Public TV
By Public TV
46 minutes ago
Basanagouda Patil Yatnal 1
Districts

ಕರ್ನಾಟಕದಲ್ಲೂ ಎಸ್‌ಐಆರ್ ಜಾರಿ ಆಗಬೇಕು – ಯತ್ನಾಳ್

Public TV
By Public TV
53 minutes ago
Tiger 1
Districts

ಮೈಸೂರು | ಅನಾರೋಗ್ಯದಿಂದ ಬಳಲುತ್ತಿದ್ದ ಐದು ವರ್ಷದ ತಾಯಮ್ಮ ಹುಲಿ ಸಾವು

Public TV
By Public TV
2 hours ago
DK Shivakumar 9
Bengaluru City

ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ: ಡಿಕೆಶಿ

Public TV
By Public TV
2 hours ago
BY Vijayendra
Bengaluru City

ಕಾಂಗ್ರೆಸ್ ವಿರುದ್ಧ ಆಡಳಿತ ವಿರೋಧಿ ಅಲೆ; ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ವಿಜಯೇಂದ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?