ಹುಬ್ಬಳ್ಳಿ: ರಫೇಲ್ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಸ್ವಗತಾರ್ಹವಾದುದು. ಈ ವಿಚಾರದಲ್ಲಿ ರಾಹುಲ್ ಗಾಂಧಿ ದೇಶದ ಜನತೆಯ ದಾರಿ ತಪ್ಪಿಸುವ ಕೆಲಸಕ್ಕೆ ಕೈ ಹಾಕಿದ್ದರು. ಆದರೆ ಈಗ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿಗೆ ದೊಡ್ಡ ಮುಖಭಂಗವಾಗಿದೆ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಇದುವರೆಗೂ ಯಾವುದೇ ಕಪ್ಪು ಚುಕ್ಕೆ ಇಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವರ ವರ್ಚಸ್ಸು ಕುಂದಿಸುವ ಯತ್ನ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಆದೇಶದಿಂದ ಕಾಂಗ್ರೆಸ್ ಗೆ ಅವಮಾನವಾಗಿದೆ. ಇನ್ನು ಮುಂದಾದರೂ ಸೈನಿಕರು ಹಾಗೂ ದೇಶದ ಭದ್ರತೆ ಬಗ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ರಫೆಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಯಾವುದೇ ಸಂಶಯ ವಿಚಾರಗಳಿಲ್ಲವೆಂದು ಸುಪ್ರೀಂ ಸ್ಪಷ್ಟಪಡಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?
ದೇಶದ ಬಗ್ಗೆ ದೇಶದ ರಕ್ಷಣಾ ವ್ಯವಸ್ಥೆ ಬಗ್ಗೆ ರಾಹುಲ್ ಗಾಂಧಿಯವರು ಹಗುರವಾಗಿ ಮಾತನಾಡುವುದನ್ನು ಮೊದಲು ನಿಲ್ಲಿಸಲಿ. ರಾಹುಲ್ ಗಾಂಧಿ ದೇಶದ ಜನರು ಹಾಗೂ ಸೈನಿಕರ ಬಳಿ ಕ್ಷಮಾಪಣೆ ಕೇಳಬೇಕು. ಇದನ್ನೇ ಹಗರಣ ಎಂಬಂತೆ ಕಾಂಗ್ರೆಸ್ಸಿನವರು ಬಿಂಬಿಸಿದ್ದರು. ಮೋದಿಯವರ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಇನ್ನಾದರೂ ಕಾಂಗ್ರೆಸ್ಸಿನವರು ದೇಶದ ಭದ್ರತೆ ಹಾಗೂ ದೇಶದ ಹಿತರಕ್ಷಣೆಗೆ ಗೌರವ ನೀಡಬೇಕು. ರಾಫೆಲ್ ಡೀಲ್ ನಲ್ಲಿ ಕಾಂಗ್ರೆಸ್ ಆಡಿದ ನಾಟಕಕ್ಕೆ ಇಂದು ತೆರೆ ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ : ಸುಳ್ಳು ಹೇಳೋ ಮಂದಿಯ ಕೆನ್ನೆಗೆ ಬಾರಿಸಿದಂತಿದೆ ರಫೇಲ್ ತೀರ್ಪು: ಕೈ ವಿರುದ್ಧ ಶಾ ಕಿಡಿ
ಮಂತ್ರಿ ಮಂಡಲ ರಚನೆ ವಿಚಾರಕ್ಕೆ ಪ್ರತಿಕ್ರಯಿಸಿ, ಪದೇ ಪದೇ ಮಂತ್ರಿ ಮಂಡಲ ರಚನೆ ಮಾಡುತ್ತೇವೆಂದು ಹೇಳುತ್ತಿದ್ದಾರೆ. ನಿಮ್ಮ ಸರ್ಕಾರ ಎಷ್ಟು ಗಟ್ಟಿಯಾಗಿದೆ ಎಂಬುದನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಮಂತ್ರಿ ಮಂಡಲ ರಚನೆ ಮಾಡಿದ ದಿನವೇ ಈ ಸರ್ಕಾರದ ನಟ್ಟು ಬೋಲ್ಟು ಕಳಚಿ ಬೀಳುತ್ತವೆ. ಜಾರಕಿಹೊಳಿ ಹಾಗೂ ಅವರ ತಂಡ ಬಿಜೆಪಿಗೆ ಬರುವುದಾದರೆ ಬರಲಿ. ನಮ್ಮ ಪಕ್ಷದ ನಿಲುವುಗಳನ್ನು ಒಪ್ಪುವುದಾದರೆ ಬಿಜೆಪಿಗೆ ಬರಲಿ ಎಂದು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv