Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯದಲ್ಲಿ ಮತ್ತೆ ಸುಮಲತಾ Vs ಎಂಎಲ್‍ಎ ಫೈಟ್ – ದಿಶಾ ಸಭೆಯಲ್ಲಿ ಪ್ರತಿಷ್ಠೆಗೆ ಬಿದ್ದ ಜನಪ್ರತಿನಿಧಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಂಡ್ಯದಲ್ಲಿ ಮತ್ತೆ ಸುಮಲತಾ Vs ಎಂಎಲ್‍ಎ ಫೈಟ್ – ದಿಶಾ ಸಭೆಯಲ್ಲಿ ಪ್ರತಿಷ್ಠೆಗೆ ಬಿದ್ದ ಜನಪ್ರತಿನಿಧಿಗಳು

Districts

ಮಂಡ್ಯದಲ್ಲಿ ಮತ್ತೆ ಸುಮಲತಾ Vs ಎಂಎಲ್‍ಎ ಫೈಟ್ – ದಿಶಾ ಸಭೆಯಲ್ಲಿ ಪ್ರತಿಷ್ಠೆಗೆ ಬಿದ್ದ ಜನಪ್ರತಿನಿಧಿಗಳು

Public TV
Last updated: August 18, 2021 4:58 pm
Public TV
Share
3 Min Read
Sumalatha JDS MLA 2
SHARE

– ಸುಮಲತಾ- ದಳಪತಿಗಳ ಪ್ರತಿಷ್ಠೆಯಿಂದ ಇಕ್ಕಟ್ಟಿಗೆ ಸಿಲುಕಿದ ಅಧಿಕಾರಿಗಳು
– ದಿಶಾ ಸಭೆಯಲ್ಲಿ ‘ತಪ್ಪಿತಸ್ಥ’ ಸ್ಥಾನದಲ್ಲಿ ನಿಂತ ಅಧಿಕಾರಿಗಳು

ಮಂಡ್ಯ: ಸಂಸದೆ ವರ್ಸಸ್ ದಳಪತಿಗಳ ಸಮರ ಮತ್ತೊಮ್ಮೆ ತಾರಕ್ಕೇರಿದೆ. ಇಷ್ಟು ದಿನ ಹಾದಿ ಬೀದಿಯಲ್ಲಿ ನಡೆಯುತ್ತಿದ್ದ ವಾಗ್ಯುದ್ಧ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಬೇಕಿದ್ದ ಸಭೆಯಲ್ಲೂ ಮುಂದುವರಿದಿದೆ. ಎರಡು ವರ್ಷದಲ್ಲೇ ಮೊದಲ ಬಾರಿಗೆ ಸಂಸದರ ದಿಶಾ ಸಭೆಯಲ್ಲಿ ಭಾಗವಹಿಸಿದ್ದ ದಳಪತಿಗಳು ಸಂಸದರ ವಿರುದ್ಧ ಒಮ್ಮೆಲೇ ಮುಗಿಬಿದ್ರು. ಸಂಸದರ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟಕ್ಕೆ ತಿರುಗೇಟು ನೀಡಿರುವ ಜೆಡಿಎಸ್ ಶಾಸಕರು ಸುಮಲತಾ ಸುತ್ತಮುತ್ತವಿರುವ ಅಕ್ರಮ ಕೂಟವನ್ನ ಬಹಿರಂಗಪಡಿಸಿದರು.

Sumalatha JDS MLA 6

ಇಂದು ಸಂಸದೆ ಸುಮಲತಾ ಅಂಬರೀಶ್ ಅಧ್ಯಕ್ಷತೆಯಲ್ಲಿ ಮಂಡ್ಯದ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ದಿಶಾ ಸಭೆ ಕರೆಯಲಾಗಿತ್ತು. ಕಳೆದ ಎರಡೂ ವರ್ಷಗಳಿಂದ ನಡೆದ 8 ದಿಶಾ ಸಭೆಗಳಿಗೆ ನಿರಂತರವಾಗಿ ಗೈರಾಗಿದ್ದ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರು ಇಂದು ಹಾಜರಾಗಿದ್ರು. ಸಭೆ ಆರಂಭಕ್ಕೂ ಮುನ್ನವೇ ಸಮರಕ್ಕಿಳಿದ ಶಾಸಕ ರವೀಂದ್ರ ಶ್ರೀಕಂಠಯ್ಯ, ಸಭಾಂಗಣದೊಳಗಿದ್ದ ಸಂಸದರ ಆಪ್ತ ಕೂಟವನ್ನು ಕಂಡು ಕೆಂಡಾಮಂಡಲರಾದ್ರು. ಮೊದಲು ಅನಧಿಕೃತ ವ್ಯಕ್ತಿಗಳನ್ನು ಹೊರಕಳಿಸುವಂತೆ ಪಟ್ಟು ಹಿಡಿದ್ರು. ಈ ವೇಳೆ ಸಂಸದ ಆಪ್ತ ಕಾರ್ಯದರ್ಶಿ ಎನ್ನಲಾದ ಶ್ರೀನಿವಾಸ್ ಭಟ್ ಎಂಬಾತ ಅಧಿಕೃತನೋ ಅಥವಾ ಅನಧಿಕೃತವೋ. ಸಂಸದರ ಲೆಟರ್ ಹೆಡ್ ಗಳಿಗೆ ನಾಲ್ಕು ಮಂದಿ ಸಹಿ ಮಾಡಿದ್ದಾರೆ ಅದು ಅಕ್ರಮ ಅಲ್ವೇ ಎಂದು ಪ್ರಶ್ನಿಸಿದ್ರು. ಈ ವೇಳೆ ಕೆಲ ಕಾಲ ಸುಮಲತಾ ಅವರು ದಿಗ್ಭ್ರಾಂತರಾದಂತೆ ಕುಳಿತಿದ್ದರು.

Sumalatha JDS MLA 5

ಈ ನಡುವೆ ಸಂಸದೆ ಸುಮಲತಾ ತಮ್ಮ ಆಪ್ತರನ್ನ ಸಮರ್ಥಿಸಿಕೊಳ್ಳಲು ಮುಂದಾದರು. ಈ ವೇಳೆ ರವೀಂದ್ರ ಶ್ರೀಕಂಠಯ್ಯ ಜೊತೆಗೆ ಉಳಿದ ಜೆಡಿಎಸ್ ಶಾಸಕರೂ ಕೂಡ ಧ್ವನಿಗೂಡಿಸಿದ್ರು. ವಿಷಯ ದೊಡ್ಡದಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಸದರ ಕೆಲವು ಆಪ್ತರು ಸಭಾಂಗಣದಿಂದ ತಾವಾಗಿಯೇ ಹೊರ ನಡೆದರು. ಇದರ ಜೊತೆಗೆ ಸಂಸದ ಲೆಟರ್ ಹೆಡ್ ದುರ್ಬಳಕೆ ಮಾಡಿಕೊಂಡಿರುವ ಹಾಗೂ ಆಪ್ತ ಕಾರ್ಯದರ್ಶಿ ಹೆಸರಲ್ಲಿ ಅಧಿಕಾರಿಗಳು ಹಾಗೂ ಗಣಿ ಮಾಲೀಕರಿಗೆ ಫೋನ್ ಮಾಡಿ ಬೆದರಿಕೆ ಹಾಕುವವರ ವಿರುದ್ಧ ಕ್ರಮಕ್ಕೆ ಜೆಡಿಎಸ್ ಶಾಸಕರು ಒತ್ತಾಯಿಸಿದರು.

Sumalatha JDS MLA 1

ಅವಧಿಗೂ ಮುನ್ನ ದಿಶಾ ಸಭೆ ನಡೆಸೋಕ್ಕೆ ಸಿಇಓಗೆ ಅಧಿಕಾರ ಇದೆಯಾ? ಈ ಬಗ್ಗೆ ಲಿಖಿತ ಉತ್ತರ ನೀಡುವವರೆಗೂ ಸಭೆ ಆರಂಭಕ್ಕೆ ಅವಕಾಶ ನೀಡುವುದಿಲ್ಲ ಎಂದು ರವೀಂದ್ರ ಶ್ರೀಕಂಠಯ್ಯ ಪಟ್ಟು ಹಿಡಿದ್ರು. ಸತತ ಎರಡು ಗಂಟೆ ಸತಾಯಿಸಿ ಬಳಿಕ ಸಿಇಓ ದಿವ್ಯ ಪ್ರಭು ಲಿಖಿತ ಉತ್ತರ ನೀಡಿದ ಬಳಿಕ ಸಭೆ ಆರಂಭವಾಯ್ತು. ಈ ವೇಳೆ ಹಾಸ್ಯದ ಮೂಲಕವೇ ದಳಪತಿಗಳ ಕಾಲೆಳೆದ ಸಂಸದೆ, ನೀವೆಲ್ಲಾ ಸಭೆ ನಡೆಯಬಾರದು ಎಂಬ ಸ್ಟ್ರಾಟರ್ಜಿ ಇಟ್ಟುಕೊಂಡು ಬಂದಿದ್ದೀರಿ. ಇಲ್ಲವಾದ್ರೆ 8 ದಿಶಾ ಸಭೆಗೆ ಒಬ್ಬರೂ ಬರದಿದ್ದವರು ಇವತ್ತು ಒಟ್ಟಿಗೆ ಬಂದು ಹೀಗೆ ಮಾಡಿದ್ರೆ ಹೇಗೆ ಎಂದು ಪ್ರಶ್ನಿಸಿದ್ರು. ಈ ವೇಳೆ ಜೆಡಿಎಸ್ ಶಾಸಕ ಈ ಮಾತು ಹಿಂಪಡೆಯುವಂತೆ ಆಗ್ರಹಿಸಿದ್ರು. ಇದನ್ನೂ ಓದಿ: ಏರಿಕೆಯಾಯ್ತು ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಬೆಲೆ

Sumalatha JDS MLA 7

ಸದಾ ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಸಾರುತ್ತಿದ್ದ ಸಂಸದರಿಗೆ ಇವತ್ತಿನ ದಿಶಾ ಸಭೆ ನುಂಗಲಾರದ ತುತ್ತಾಗಿತ್ತು. ಸಭೆ ಆರಂಭವಾದ ಬಳಿಕವೂ ದಳಪತಿಗಳ ಆರ್ಭಟವೇ ಜೋರಾಗಿತ್ತು. ಸಂಸದರನ್ನೇ ಟಾರ್ಗೆಟ್ ಮಾಡಿಕೊಂಡು ಅಧಿಕಾರಿಗಳ ಬೆವರಿಳಿಸಿದ್ರು. ಗಣಿಗಾರಿಕೆ ವಿಚಾರವನ್ನೇ ಪ್ರಮುಖವಾಗಿ ಜೆಡಿಎಸ್ ಶಾಸಕರು ಲೀಗಲ್ ಮೈನಿಂಗ್ ನಿಲ್ಲಿಸಲು ಅಧಿಕಾರ ಕೊಟ್ಟವರು ಯಾರು? ಯಾರು ಹೇಳಿದ್ದಾರೆ. ನಿಮ್ಮಿಂದಾಗಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತಿವೆ. ಮಂಡ್ಯ ಜಿಲ್ಲೆಗೆ ಪ್ರತ್ಯೇಕ ಕಾನೂನಿದಿಯಾ ಎಂದು ಗಣಿ ಅಧಿಕಾರಿ ಪದ್ಮಜ ಅವರನ್ನ ತರಾಟೆ ತೆಗೆದುಕೊಂಡ್ರು. ಇದನ್ನೂ ಓದಿ: ಸುನಂದಾ ಪುಷ್ಕರ್ ಪ್ರಕರಣ – 7 ವರ್ಷಗಳ ಬಳಿಕ ಶಶಿ ತರೂರ್​​​ಗೆ ರಿಲೀಫ್

Sumalatha JDS MLA 4

ಈ ವೇಳೆ ದಳಪತಿಗಳ ಪ್ರಶ್ನೆಗಳಿಗೆ ಅಧಿಕಾರಿ ಉತ್ತರಿಸಲಾಗದೇ ತಬ್ಬಿಬ್ಬಾದ್ರು. ಈ ವೇಳೆ ಸಂಸದೆ ಸುಮಲತಾ ಮಾತನಾಡಿ, ನನ್ನ ಹೋರಾಟ ಏನಿದ್ರೂ ಅಕ್ರಮದ ವಿರುದ್ಧ ಹೊರತು ಸಕ್ರಮದ ವಿರುದ್ಧವಲ್ಲ ಎಂದೇಳುವ ಮೂಲಕ ತಮ್ಮ ವಿರುದ್ಧದ ಆರೋಪಕ್ಕೆ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ರು. ಸಂಸದರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಸದರಿಗಿಂತ ಶಾಸಕರದ್ದೇ ಸೌಂಡ್ ಜೋರಾಗಿತ್ತು. ಇದನ್ನೂ ಓದಿ: ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ

TAGGED:Disha Meetingjdsjds MLAmandyaMP Sumalatha ambareeshPublic TVಜೆಡಿಎಸ್ದಿಶಾ ಸಭೆಪಬ್ಲಿಕ್ ಟಿವಿಮಂಡ್ಯಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
4 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
4 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
4 hours ago
01 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-1

Public TV
By Public TV
4 hours ago
02 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-2

Public TV
By Public TV
4 hours ago
03 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?