ಧಾರವಾಡ: ಹೊನ್ನಾಳಿ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ನೆರೆ ಸಂತ್ರಸ್ತರ ಪರಿಹಾರ ಸಾಮಗ್ರಿ ಪತ್ತೆಯಾಗಿತ್ತು. ಈ ಸಂಬಂಧ ಪಬ್ಲಿಕ್ ಟಿವಿ ವರದಿಯನ್ನು ಬಿತ್ತರಿಸಿತ್ತು. ಈ ಹಿನ್ನೆಲೆ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಈ ಸಾಮಾಗ್ರಿಗಳನ್ನು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ನೆರೆ ಸಂತ್ರಸ್ತರಿಗೆ ಕೊಡುವ ಕೆಲಸ ಮಾಡಿದ್ದಾರೆ.

ಹೊನ್ನಾಳಿ ತಾಲೂಕಿನ ಜನರೆಲ್ಲಾ ಸೇರಿ ಈ ಸಾಮಗ್ರಿಗಳನ್ನ ನೆರೆ ಸಂತ್ರಸ್ತರಿಗಾಗಿ ಸಂಗ್ರಹಿಸಿದ್ದಾರೆ. ಅಧಿಕೃತವಾಗಿ ನಾವು ಸಂಗ್ರಹಣೆ ಮಾಡಿ ಪಾರದರ್ಶಕವಾಗಿ ಕೊಡಲು ಸಾಮಾಗ್ರಿಗಳನ್ನು ಸಂಗ್ರಹಿಸಿ ಇಟ್ಟಿದ್ದೇವೆ. ನಾನು ಉಪಚುನಾವಣೆಯ ಕೆಲಸದಲ್ಲಿ ಇದ್ದ ಕಾರಣ ನೇರೆ ಸಾಮಗ್ರಿ ವಿತರಣೆ ತಡವಾಗಿದೆ ಎಂದು ತಿಳಿಸಿದರು.



