Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ – ಬಿಜೆಪಿಗೆ ಶಾಸಕರ ಜಂಪ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ – ಬಿಜೆಪಿಗೆ ಶಾಸಕರ ಜಂಪ್?

Districts

ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ – ಬಿಜೆಪಿಗೆ ಶಾಸಕರ ಜಂಪ್?

Public TV
Last updated: December 17, 2019 12:28 pm
Public TV
Share
2 Min Read
MND JDS BJP
SHARE

ಮಂಡ್ಯ: ಉಪಚುನಾವಣೆಯಲ್ಲಿ ಮೊದಲ ಬಾರಿಗೆ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಮೂಲಕ ಖಾತೆ ತೆರೆದಿದ್ದ ಬಿಜೆಪಿ ಸದ್ಯ ಜಿಲ್ಲೆಯಲ್ಲಿ ಭದ್ರ ಬುನಾದಿ ನಿರ್ಮಿಸುವತ್ತ ಸಾಗಿದೆ. ಬಿಜೆಪಿ ಇದೀಗ ಜಿಲ್ಲೆಯ ಮತ್ತೆರಡು ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಮುಂದಾದಂತೆ ಕಾಣುತ್ತಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಶಾಸಕರಾದ ನಾಗಮಂಗಲದ ಸುರೇಶ್‍ಗೌಡ ಹಾಗೂ ಶ್ರೀರಂಗಪಟ್ಟಣದ ರವೀಂದ್ರ ಶ್ರೀಕಂಠಯ್ಯ ಅವರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಗಳ ಕುರಿತ ಚರ್ಚೆ ಜಿಲ್ಲೆಯಲ್ಲಿ ದಟ್ಟವಾಗಿ ಕಾಣುತ್ತಿದೆ.

ಜೆಡಿಎಸ್ ಭದ್ರ ಕೋಟೆಯಾಗಿರುವ ಮಂಡ್ಯ ಜಿಲ್ಲೆಯನ್ನು ಸಂಪೂರ್ಣವಾಗಿ ಬಿಜೆಪಿ ಕೋಟೆಯನ್ನಾಗಿ ಮಾಡಿಕೊಳ್ಳಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಪರಿಣಾಮ ರಾಜ್ಯ ಬಿಜೆಪಿ ಸರ್ಕಾರ ಸೇಫ್ ಆದರೂ ಮತ್ತೊಂದು ಆಪರೇಷನ್ ಕಮಲ ಮಾಡಲು ಮಾತುಕತೆ ನಡೆಯುತ್ತಿದೆ ಎಂಬ ಮಾತು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬಂದಿದೆ. ಜೆಡಿಎಸ್‍ನ ಶಾಸಕರಾಗಿರುವ ಸುರೇಶ್‍ಗೌಡ ಮತ್ತು ರವೀಂದ್ರ ಶ್ರೀಕಂಠಯ್ಯ ಇಬ್ಬರು ಕೂಡ ಜೆಡಿಎಸ್‍ಗೆ ಗುಡ್ ಬಾಯ್ ಹೇಳಿ ಬಿಜೆಪಿ ಬಾವುಟ ಹಿಡಿಯಲು ಮನಸ್ಸು ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳುತ್ತಿವೆ.

MND BSY

ಕೆ.ಆರ್.ಪೇಟೆ ಕ್ಷೇತ್ರದಲ್ಲಿ ನಾರಾಯಣಗೌಡ ಅವರ ಗೆಲುವು ನೋಡಿರುವ ಜೆಡಿಎಸ್ ಶಾಸಕರು ತಮ್ಮ ಭವಿಷ್ಯ ಕಟ್ಟಿಕೊಳ್ಳಲು ಇದೇ ಸೂಕ್ತ ಎಂಬ ನಿರ್ಧಾರಕ್ಕೆ ಬಂದಂತೆ ಕಾಣುತ್ತಿದೆ. ಹೀಗಾಗಿ ಬಿಜೆಪಿಗೆ ಸೇರಿ ತಮ್ಮ ರಾಜಕೀಯ ಭವಿಷ್ಯವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಪಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಆಪರೇಷನ್ ಕಮಲ ಆದ ವೇಳೆಯೂ ಈ ಇಬ್ಬರೂ ಬಿಜೆಪಿಗೆ ಹೋಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಕಾರಣಾಂತರಗಳಿಂದ ಈ ಇಬ್ಬರೂ ಬಿಜೆಪಿಗೆ ಹೋಗಲಿಲ್ಲ, ಈಗ ಖಂಡಿತವಾಗಿಯೂ ಹೋಗುತ್ತಾರೆ ಎಂದು ಆಪ್ತ ಮೂಲಗಳು ಹೇಳುತ್ತಿವೆ. ಇಬ್ಬರು ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಅವರು ಮನಸ್ಸು ಮಾಡಿದ್ದು, ಸಚಿವ ಸಂಪುಟ ವಿಸ್ತರಣೆ ಬಳಿಕ 2ನೇ ಆಪರೇಷನ್‍ಗೆ ಕೈ ಹಾಕುವ ಸಾಧ್ಯತೆ ಹೆಚ್ಚಿವೆ.

ಈ ಕುರಿತು ಬಿಜೆಪಿ ಸೇರುವ ಬಗ್ಗೆ ಮಾತನಾಡಿದ್ದ ಸುರೇಶ್ ಗೌಡ ಅವರು ಈ ಸುದ್ದಿಯನ್ನು ಅಲ್ಲಗೆಳೆದಿದ್ದರು. ಅಲ್ಲದೇ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೊಂದಿಗೂ ಸ್ನೇಹದಿಂದ ಇರುವುದಾಗಿ ಹೇಳಿದ್ದರು. ನನಗೆ ಆಫರ್ ಬಂದಿತ್ತು ಎಂದಷ್ಟೇ ನಾನು ಹೇಳಿದ್ದೇನೆ. ಆದರೆ ಪಕ್ಷ ಬಿಡುವುದಿಲ್ಲ, ಮೈತ್ರಿ ಸರ್ಕಾರ ಬಿದ್ದು ಹೋದ ಬಳಿಕ ನಾವ್ಯಾಕೆ ಬಿಜೆಪಿಗೆ ಹೋಗಲಿಲ್ಲ ಅನಿಸುತ್ತಿತ್ತು. ಆದರೆ ಇದೀಗ ಅನರ್ಹ ಶಾಸಕರ ಬಗ್ಗೆ ಆತ್ಮಾವಲೋಕನ ಮಾಡಿಕೊಂಡರೆ ನಾವು ತೆಗೆದುಕೊಂಡ ನಿರ್ಧಾರವೇ ಸರಿ ಎಂದನಿಸುತ್ತಿದೆ ಎಂದು ಸುರೇಶ್ ಗೌಡ ಹೇಳಿದ್ದರು. ಆದರೆ ಕೆಲ ದಿನಗಳ ಹಿಂದೆಯಷ್ಟೇ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಬಿಎಸ್‍ವೈ ಅವರ ಕಾಲಿಗೆ ಸುರೇಶ್ ಗೌಡ ಅವರು ನಮಸ್ಕರಿಸಿ ಅಚ್ಚರಿ ಮೂಡಿಸಿದ್ದರು.

HDKKumaraswamy 2

ಜೆಡಿಎಸ್ ಸೇರ್ಪಡೆಯಾಗುವ ಸುದ್ದಿ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ರವೀಂದ್ರ ಶ್ರೀಕಂಠಯ್ಯ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಎಚ್‍ಡಿಕೆ ಅವರ ನೇತ್ರತ್ವದಲ್ಲಿ ಗೆದ್ದು ಬಂದಿದ್ದೇನೆ. ಯಾವುದೇ ಕಾರಣಕ್ಕೂ ನಾನು ಶಾಸಕ ಸ್ಥಾನ ಕೊನೆಯಾಗುವ ಅವಧಿಯವರೆಗೂ ಪಕ್ಷ ಬಿಡುವ ನಿರ್ಧಾರ ಮಾಡಲ್ಲ. ಕುಮಾರಸ್ವಾಮಿ ಅವರ ಮನಸ್ಸಿಗೆ ನೋವುಂಟು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

TAGGED:bjpby electionCM BS YeddyurappajdsmandyaMLA'soperation kamalaPublic TVRavindra SrikantaiahSuresh gowdaಆಪರೇಷನ್ ಕಮಲಉಪಚುನಾವಣೆಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಮಂಡ್ಯರವೀಂದ್ರ ಶ್ರೀಕಂಠಯ್ಯಶಾಸಕರುಸಿಎಂ ಬಿಎಸ್ ಯಡಿಯೂರಪ್ಪಸುರೇಶ್‍ಗೌಡ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

kisan
Bengaluru City

ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

Public TV
By Public TV
6 minutes ago
Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
30 minutes ago
Priyank Kharge 1
Bengaluru City

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Public TV
By Public TV
36 minutes ago
Rajnath Singh
Latest

ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

Public TV
By Public TV
1 hour ago
Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
2 hours ago
HAL Techie Murder
Bengaluru City

ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?