ಬೀದರ್: ಲೋಕೋಪಯೋಗಿ ಇಲಾಖೆ ಎಫ್ಡಿಎಗೆ ಕರೆ ಮಾಡಿ ಹತ್ತು ಸಾವಿರ ರೂ. ಲಂಚ ಪಡೆದು ನಮ್ಮವರ ಕೆಲಸ ಮಾಡಿಕೊಡಿ ಎಂದ ಶಾಸಕ ಶರಣು ಸಲಗರ್ (Sharanu Salagar) ಫೋನ್ ಕರೆಯ ಆಡಿಯೋ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಶಾಸಕ ಸಲಗರ್ ಲೋಕೋಪಯೋಗಿ ಇಲಾಖೆ ಎಫ್ಡಿಎ ವೆಂಕಟರಾವ್ ಅವರಿಗೆ ಕರೆ ಮಾಡಿದ್ದಾರೆ. ಈ ವೇಳೆ ನಾನು ಲೆಕ್ಕಪತ್ರ ಶಾಖೆಯ ವೆಂಕಟರಾವ್ ಎಂದು ಎಫ್ಡಿಎ ಪರಿಚಯ ಮಾಡಿಕೊಂಡಿದ್ದಾರೆ. ಬಳಿಕ ಶಾಸಕರು, 10 ಸಾವಿರ ರೂ. ತೆಗೆದುಕೊಂಡು ಕೆಲಸ ಮಾಡಿಕೊಡಬೇಕು ಎಂದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಅಪ್ಪ-ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ: ಹೆಚ್ಡಿಕೆ
ಹೆಚ್ಚಿಗೆ ತೆಗೆದುಕೊಳ್ಳುವುದು ಬೇಡ, ಕಡಿಮೆ ತೆಗೆದುಕೊಳ್ಳುವುದು ಬೇಡ. ಅವರಿಗೆ ತೊಂದರೆ ಕೊಡುವುದೂ ಬೇಡ ಎಂದಿದ್ದಾರೆ. ಅಲ್ಲದೇ ಇದು ನಡೆಯದಿದ್ದರೆ ನಾನೇ ಅಲ್ಲಿಗೆ ಬರಬೇಕಾಗುತ್ತದೆ ಎಂದು ಅಧಿಕಾರಿಗೆ ಶಾಸಕ ಎಚ್ಚರಿಕೆ ನೀಡಿದ್ದಾರೆ. ಇದಿಷ್ಟು ವೈರಲ್ ಆಗಿರುವ ಆಡಿಯೋದಲ್ಲಿ ಇದೆ.
ಶಾಸಕರ ಕರೆಯ ಆಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಬೆಂಗಳೂರಿನ ಫುಡ್ ಇಂಡಸ್ಟ್ರಿಗಳ ಮೇಲೆ ಐಟಿ ದಾಳಿ