Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುವ ಶಾಸಕನ ತಾಯಿ BPL ಹೋಲ್ಡರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುವ ಶಾಸಕನ ತಾಯಿ BPL ಹೋಲ್ಡರ್

Districts

ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುವ ಶಾಸಕನ ತಾಯಿ BPL ಹೋಲ್ಡರ್

Public TV
Last updated: May 17, 2022 10:29 am
Public TV
Share
3 Min Read
narayan swamy
SHARE

ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಮ್ಮ ತಾಯಿ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಿ ಭೂಮಿ ಕಬಳಿಕೆ ಮಾಡಿದ್ದಾರೆ.

ಬಿಪಿಎಲ್ ತಾಯಿಗೆ ಮಂಜೂರಾದ ಜಮೀನು ಪಕ್ಕದಲ್ಲಿಯೇ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಎಸ್.ಎನ್.ಸಿಟಿ ಮಾಡಿಕೊಂಡಿದ್ದಾರೆ. ಆದರೆ ತಾಯಿ ಮುನಿಯಮ್ಮ ಮಾತ್ರ ಈಗಲೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಹುದುಕುಳ ಗ್ರಾಮದ ಸರ್ವೇ ನಂ.256 ರಲ್ಲಿ 3 ಎಕರೆ 10 ಗುಂಟೆ ಸರ್ಕಾರಿ ಜಮೀನನ್ನು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಮ್ಮ ತಾಯಿ ಮುನಿಯಮ್ಮ ಹೆಸರಿಗೆ 2018-19ರಲ್ಲಿ ಮಂಜೂರು ಮಾಡಿದ್ದಾರೆ.

kolar 2

1998 ರಲ್ಲಿಯೇ ಅರ್ಜಿ ಸಲ್ಲಿಸಿದಂತೆ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು ಸರ್ಕಾರಿ ಭೂಮಿಯನ್ನು ತಮ್ಮ ತಾಯಿ ಹೆಸರಿಗೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಪ್ರಮುಖವಾಗಿ ಭೂಮಿ ಮಂಜೂರು ಮಾಡಿದಾಗ ದರಾಖಾಸ್ತು ಕಮಿಟಿ ಅಧ್ಯಕ್ಷರಾಗಿದ್ದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೋಟಿ ಬೆಲೆ ಬಾಳುವ ಜಮೀನನ್ನು ಕಮಿಟಿಯಲ್ಲಿ ತಮ್ಮ ತಾಯಿ ಹೆಸರಿಗೆ ಮಂಜೂರು ಮಾಡುವುದು ಸ್ವಜನ ಪಕ್ಷಪಾತ. ಇದನ್ನೂ ಓದಿ: ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂಗೆ ಬೆಳ್ಳಂಬೆಳಗ್ಗೆ ಶಾಕ್ – ಮನೆ ಸೇರಿ 7 ಕಡೆ ಸಿಬಿಐ ದಾಳಿ

kolar 3

ಇದಕ್ಕಾಗಿ ಅವರು ದರಖಾಸ್ತು ಕಮಿಟಿಯ ಸದಸ್ಯರನ್ನು ಕೂಡ ಬಳಕೆ ಮಾಡಿಕೊಂಡು ಸರ್ಕಾರಿ ಭೂಮಿಯನ್ನು ಶಾಸಕ ನಾರಾಯಣಸ್ವಾಮಿ ಕಬಳಿಕೆ ಮಾಡಿಕೊಂಡಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರುವ ಮುನಿಯಪ್ಪ ಅವರು ಶಾಸಕರಿಂದ ದೂರು ಉಳಿದಿದ್ದು ವಾರ್ಷಿಕ 15 ಸಾವಿರ ಆದಾಯ ಹೊಂದಿದ್ದಾರೆ. ಜೊತೆಗೆ ಅವರು 1998 ರಲ್ಲಿಯೇ ಸಾಗುವಳಿ ಚೀಟಿ ಜೊತೆ ಅರ್ಜಿ ಸಲ್ಲಿಸಿರುವ ದಾಖಲೆಗಳಿವೆ. ಅವರು ಭೂಮಿ ಮಂಜೂರಿಗಾಗಿ ಕೋರಿರುವ ದಾಖಲೆಗಳೆಲ್ಲವೂ ಕೂಡಾ ನ್ಯಾಯ ಬದ್ದವಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

kolar 1

ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ ಸರ್ಕಾರಿ ಜಮೀನು ಕಬಳಿಕೆ ಆರೋಪ ಇದೇ ಮೊದಲೇನಲ್ಲ. ಈ ಹಿಂದೆ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ದಿವಂಗತ ಡಿ.ಕೆ.ರವಿ ಕೂಡ ಗಾಲ್ಫ್ ರೆಸಾರ್ಟ್‍ಗಾಗಿ ಸರ್ಕಾರಿ ಭೂಮಿಯನ್ನು ಕಬಳಿಕೆ ಮಾಡಿದ್ದಾರೆ ಎಂದು ದಾಖಲೆ ಸಮೇತ ಆರೋಪ ಮಾಡಿದ್ದರು. ಆದರೆ ಅದು ಹೈಕೋರ್ಟ್‍ನಲ್ಲಿಯೇ ಇತ್ಯರ್ಥವಾಗಿತ್ತು. ಕೆಲ ತಿಂಗಳ ಹಿಂದೆಯಷ್ಟೇ ಸಂಸದ ಮುನಿಸ್ವಾಮಿ ಕೂಡ ಸರ್ಕಾರಿ ಜಮೀನು ಕಬಳಿಕೆ ಮಾಡಿದ್ದಾರೆ, ಆದರೆ ಇದ್ಯಾವುದು ಕೂಡ ಸಾಬೀತಾಗದೆ ಸುಮ್ಮನಾಗಿದ್ದಾರೆ. ಇದನ್ನೂ ಓದಿ: ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ – ನಟ ದಿಲೀಪ್ ಸ್ನೇಹಿತ ಅರೆಸ್ಟ್‌

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ನಾರಾಯಣಸ್ವಾಮಿ, ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ನನ್ನ ಹಾಗೂ ನನ್ನ ತಾಯಿ ಜೊತೆಗೆ ಕೇವಲ ರಕ್ತ ಸಂಬಂಧ ಇದೆ, ಹೊರತು ನಮ್ಮ ನಡುವೆ ಯಾವುದೇ ವ್ಯವಹಾರಿಕ ಸಂಬಂಧ ಹೊಂದಿಲ್ಲ. ನಾವು 1995 ರಲ್ಲಿಯೇ ಅದರಿಂದ ಹೊರ ಬಂದಿದ್ದೇವೆ. ನಾನು ಶಾಸಕನಾಗುವ ಮೊದಲೇ ಅಂದರೆ 1998 ರಲ್ಲಿ ಭೂಮಿ ಮಂಜೂರಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಭೂಮಿ ಮಂಜೂರು ಮಾಡಲು ಬೇಕಿರುವ ಎಲ್ಲಾ ದಾಖಲೆಗಳು ಸರಿಯಾಗಿರುವ ಕಾರಣ ಭೂಮಿ ಮಂಜೂರು ಮಾಡಲಾಗಿದೆ. ಇದರಲ್ಲಿ ಯಾವುದೇ ಅಕ್ರಮ ಸ್ವಜನ ಪಕ್ಷಪಾತವಿಲ್ಲ ಎನ್ನುತ್ತಿದ್ದಾರೆ.

ಬಂಗಾರಪೇಟೆ ತಹಶೀಲ್ದಾರ್ ದಯಾನಂದ್ 2021ರ ಏಪ್ರಿಲ್ 26 ರಂದು ಬಂಗಾರಪೇಟೆ ಪೊಲೀಸ್ ಠಾಣೆಗೆ ಶಾಸಕರ ಬಗರ್‌ಹಕುಂ ಭೂಮಿ ಮಂಜೂರಾತಿಗೆ ಸಂಬಂಧಿಸಿದಂತೆ ದಾಖಲೆಗಳು ನಾಪತ್ತೆಯಾಗಿದೆ ಎಂದು ಕಂದಾಯ ಇಲಾಖೆ ಸಿಬ್ಬಂದಿ ವಿರುದ್ಧವೇ ದೂರು ನೀಡಿರುವುದು ಮತ್ತೊಂದು ಅಂಶ. ಇದು ಶಾಸಕರು ತಮ್ಮ ಪ್ರಭಾವ ಬಳಸಿ ಮೂಲ ದಾಖಲೆಗಳನ್ನು ನಾಪತ್ತೆ ಮಾಡಿಸಿಕೊಂಡು ತಮ್ಮ ಬೇಳೆ ಬೇಯಿಸಿಕೊಂಡರಾ ಎನ್ನುವ ಅನುಮಾನ ಕೂಡ ಮೂಡಿಬರುತ್ತಿದೆ.

ಒಟ್ಟಾರೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ ಸರ್ಕಾರಿ ಜಮೀನು ಕಬಳಿಕೆ ಆರೋಪ ದಾಖಲೆ ಸಹಿತವಾಗಿದ್ದು, ಅದಕ್ಕೆ ಬೇಕಾದ ದಾಖಲೆಗಳು, ಶಾಸಕರ ಪ್ರಭಾವವೂ ಇರಬಹುದು. ಇಲ್ಲಾ ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯ ಕೈವಾಡವೂ ಇರಬಹುದು, ನಿಷ್ಪಕ್ಷಪಾತ ತನಿಖೆ ನಡೆದಾಗ ಮಾತ್ರ ಈ ಎಲ್ಲಾ ಆರೋಪಗಳಿಗೆ ಸರಿಯಾದ ಉತ್ತರ ಸಿಗಲಿದೆ.

TAGGED:KolarlandmotherSN Narayanaswamyಎಸ್.ಎನ್. ನಾರಾಯಣಸ್ವಾಮಿಕೋಲಾರಜಮೀನುತಾಯಿ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
9 minutes ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
17 minutes ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
53 minutes ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
2 hours ago
Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
2 hours ago
bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?