ಗುರುಗ್ರಾಮ: ಬಿಜೆಪಿ ರೆಸಾರ್ಟ್ ರಾಜಕಾರಣ ಮಾಡಿಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ನಮ್ಮೆಲ್ಲರನ್ನು ಕರೆಸಿ ಒಂದು ಕಡೆ ಸೇರಿಸಿದ್ದರು. ಪ್ರತಿದಿನ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರು ಚುನಾವಣೆಗೆ ಹೇಗೆ ಸಿದ್ಧಗೊಳ್ಳಬೇಕು ಎಂಬುದರ ಮಾಹಿತಿ ನೀಡಿದರು. ಕಾಂಗ್ರೆಸ್ ತನ್ನ ಎಲ್ಲ ಶಾಸಕರನ್ನು ಕರೆದುಕೊಂಡು ಹೋಗಿ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಶಾಸಕ ಶ್ರೀರಾಮುಲು ಆರೋಪಿಸಿದರು.
ಬರಗಾಲಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ತನ್ನ ಜವಬ್ದಾರಿಗಳನ್ನು ಮರೆತ ಕಾಂಗ್ರೆಸ್ ಎಲ್ಲ ಶಾಸಕರನ್ನು ರೆಸಾರ್ಟ್ ನಲ್ಲಿ ಬಂಧಿಯಾಗಿಸಿದೆ. ನಾವು ಲೋಕಸಭಾ ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಬಂದಿದ್ದೆ ಹೊರತು ಆಪರೇಷನ್ ಕಮಲ ನಡೆಸಲು ಬಂದಿಲ್ಲ. ಕಾಂಗ್ರಸ್ಸಿನ ಯಾವ ಶಾಸಕರನ್ನು ನಾವು ಸೆಳೆಯುವ ಪ್ರಯತ್ನ ಮಾಡಿಲ್ಲ ಎಂದು ಶ್ರೀರಾಮುಲು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯನವರು ಅಧಿಕಾರ ಕಳೆದುಕೊಂಡ ಭ್ರಮೆಯಲ್ಲಿ ಹತಾಶರಾಗಿದ್ದರಿಂದ ಏನೇನೋ ಮಾತನಾಡುತ್ತಿದ್ದಾರೆ. ಮುಂಬೈನಲ್ಲಿ ಕಾಣಿಸಿಕೊಂಡಿದ್ದ ಶಾಸಕ ಅಶ್ವಥ್ ನಾರಾಯಣ್ ಅವರು ಮಹಾರಾಷ್ಟ್ರಸಿಎಂ ದೇವೇಂದ್ರ ಫಡ್ನಾವೀಸ್ ಭೇಟಿಯಾಗಲು ಹೋಗಿದ್ದರು. ಈ ಸಂಬಂಧ ಪಕ್ಷದ ಮುಖಂಡರು ಮಾತನಾಡುತ್ತಾರೆ ಎಂದು ಹೇಳಿ ಶ್ರೀರಾಮುಲು ನುಣುಚಿಕೊಂಡರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv