ಮೈಸೂರು: 2023ರ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್ಗೆ (Congress) ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ.
ಮೈಸೂರಿನ (Mysuru) ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ (Tanveer Sait) ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ (AICC ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಸದ್ಯಕ್ಕೆ ಟೋಲ್ ಸಂಗ್ರಹ ಇಲ್ಲ
`ಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: BJP ಕಾರ್ಯಕರ್ತರು ಮೈ ಮರೆತ್ರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ: ಪ್ರತಾಪ್ ಸಿಂಹ
ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ. ಆದ್ರೆ ಕಾಂಗ್ರೆಸ್ನಲ್ಲೇ ಇರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
2019ರ ನವೆಂಬರ್ 17ರ ರಾತ್ರಿ ವಿವಾಹ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಕಾರ್ಯಕರ್ತ ಫರ್ಹಾನ್ ಪಾಷಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.