ಪ್ರಶ್ನೆ ಮಾಡಿದ ಮತದಾರರನ್ನೇ ಹೀಯಾಳಿಸಿದ ಶಾಸಕ?

Public TV
1 Min Read
mnd tharate collage copy

ಮಂಡ್ಯ: ತಮ್ಮ ಸಮಸ್ಯೆ ಬಗೆಹರಿಸಿ ಎಂದು ತರಾಟೆಗೆ ತೆಗೆದುಕೊಂಡ ಮತದಾರರನ್ನೇ ತಲೆಯೆಲ್ಲ ಮಾತನಾಡ್ತಾರೆ ಎಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಕ್ಷೇತ್ರದ ಶಾಸಕ ನಾರಾಯಣಗೌಡ ಹೀಯಾಳಿಸಿದ ಘಟನೆ ನಡೆದಿದೆ.

ಕೆಆರ್ ಪೇಟೆ ತಾಲೂಕಿನ, ಕಿಕ್ಕೇರಿ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಶಾಸಕರ ಜನಸಂಪರ್ಕ ಸಭೆ ಆಯೋಜಿಸಲಾಗಿತ್ತು. ಈ ವೇಳೆ ದೊಡ್ಡತ್ತಾರಹಳ್ಳಿ ಗ್ರಾಮ ಸೇರಿದಂತೆ ಹಲವು ಗ್ರಾಮಗಳ ಮತದಾರರು ರಸ್ತೆ ಸೇರಿದಂತೆ ಇನ್ನಿತರ ಮೂಲಭೂತ ಸೌಲಭ್ಯದ ಬಗ್ಗೆ ಪ್ರಶ್ನೆ ಮಾಡುತ್ತಾ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದರು.

mnd tharate

ಜನರ ಪ್ರಶ್ನೆಯಿಂದ ಗೊಂದಲಕ್ಕೆ ಒಳಗಾದ ಶಾಸಕ ನಾರಾಯಣಗೌಡ ನಾನು ನಿಮ್ಮ ಸಮಸ್ಯೆ ಆಲಿಸಲು ಅಧಿಕಾರಿಗಳ ಜೊತೆ ಬಂದಿದ್ದೇನೆ. ಯಾರು ಐದು ಕೋಟಿ ಕೆಲಸ ಹಾಕಿಕೊಟ್ಟಿರೋದು. ತಲೆಯೆಲ್ಲ(ತಲೆಬುಡ ಇಲ್ಲದೆ) ಮತನಾಡ್ತಾರೆ ಎಂದು ಪ್ರಶ್ನೆ ಮಾಡಿದವರ ವಿರುದ್ಧವೇ ತಿರುಗಿ ಬಿದ್ದರು.

ಈ ವೇಳೆ ಶಾಸಕರ ಬೆಂಬಲಿಗರು ಕೂಡ ಸುಮ್ಮನಿರುವಂತೆ ಸಾರ್ವಜನಿಕರನ್ನು ಮನವಿ ಮಾಡಿದ್ದರು. ಇದರಿಂದ ಮತ್ತಷ್ಟು ಕೆರಳಿದ ಸಾರ್ವಜನಿಕರು ನಾವು ಪ್ರಶ್ನೆ ಮಾಡೋದೆ ತಪ್ಪಾ? ಎಂದು ಆಕ್ರೋಶ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ ಕೆಲಕಾಲ ಸಭೆ ಗೊಂದಲದ ಗೂಡಾಗಿ ಮಾರ್ಪಾಡಾಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *