ಹಾಸನ: ನನ್ನನ್ನು ಬಿಜೆಪಿಗೆ ಹೋಗಿ ಅಂತ ಹೇಳಿದ್ದೇ ಜಮೀರ್ ಅಹಮ್ಮದ್. ಅವರಿಗೆ ಕಾಂಗ್ರೆಸ್ ಸರ್ಕಾರ ಇರೋದು ಇಷ್ಟ ಇರಲಿಲ್ಲ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಒಳ್ಳೆದಾಗುತ್ತೆ. ಹೀಗಾಗಿ ನನ್ನನ್ನ ಬಿಜೆಪಿಗೆ ಹೋಗು ಎಂದು ಜಮೀರ್ ಹೇಳಿದ್ರು. ನಾನು ಹಾಗೂ ಜಮೀರ್ ಒಳ್ಳೆ ಸ್ನೇಹಿತರು ಎಂದು ತಿಳಿಸಿದ್ದಾರೆ.
ನಾನು ಬಿಜೆಪಿಯಲ್ಲೇ ಇರ್ತೀನಿ, ನನ್ನ ಮಕ್ಕಳಿಗೂ ಇದೇ ಮಾತು ಹೇಳುತ್ತೇನೆ. ನಾನು ಇಲ್ಲಿ ಸಚಿವನಾಗಿದ್ದೇನೆ. ಬಿಜೆಪಿ ಪಕ್ಷ ನನಗೆ ಎಲ್ಲಾ ಕೊಟ್ಟಿದೆ. ಮುಂದಿನ ಚುನಾವಣೆಯಲ್ಲೂ ಬಿಜೆಪಿ ನನಗೆ ಟಿಕೆಟ್ ನೀಡಲಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕುರುಬ ಸಮಾಜ ಹರಾಜು ಹಾಕೋ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ: ಎಚ್.ವಿಶ್ವನಾಥ್ ಕಿಡಿ
ಇದೇ ವೇಳೆ ಜಮೀರ್ ಬಿಜೆಪಿಗೆ ಬರ್ತಾರಾ? ಎಂಬ ಸುದ್ದಿಗಾರರ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ಇದನ್ನ ಹೈಕಮಾಂಡ್ ತೀರ್ಮಾನಿಸುತ್ತೆ ಎಂದು ಹೇಳಿದರು. ಇದನ್ನೂ ಓದಿ: ಎರಡೂ ಉಪಚುನಾವಣೆಯಲ್ಲಿ ಜೆಡಿಎಸ್ ಲೆಕ್ಕಕ್ಕೆ ಇಲ್ಲ: ಜಮೀರ್