ಮುಂಬೈ: ಅತೃಪ್ತರನ್ನು ಭೇಟಿ ಮಾಡಲು ಸಚಿವ ಡಿ.ಕೆ ಶಿವಕುಮಾರ್ ಮುಂಬೈನ ಹೋಟೆಲ್ಗೆ ತಲುಪುತ್ತಿದ್ದಂತೆ ಇತ್ತ ಅತೃಪ್ತ ಶಾಸಕರು ಹಿಂಬದಿಯ ಗೇಟಿನಿಂದ ಎಸ್ಕೇಪ್ ಆಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಅತೃಪ್ತ ಶಾಸಕರೆಲ್ಲರೂ ಹೋಟೆಲ್ ಹಿಂಬದಿ ಗೇಟ್ನಿಂದ ಎಸ್ಕೇಪ್ ಆಗಿದ್ದಾರೆ. ಡಿ.ಕೆ ಶಿವಕುಮಾರ್ ಹೋಟೆಲ್ ಮುಂಭಾಗದ ಗೇಟಿನಲ್ಲಿ ಅತೃಪ್ತರ ಶಾಸಕರನ್ನು ಭೇಟಿ ಆಗಿಯೇ ಆಗುತ್ತೇನೆ. ಅವರನ್ನು ಭೇಟಿ ಆಗುವವರೆಗೂ ಇಲ್ಲಿಯೇ ಇರುತ್ತೇನೆ ಎಂದು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಶಾಸಕರು ಹೋಟೆಲ್ನಿಂದ ವಿಶೇಷ ಬಸ್ಸಿನಲ್ಲಿ ಎಸ್ಕೇಪ್ ಆಗಿದ್ದಾರೆ.
ಶಾಸಕರಿಗೆ ಮಾಹಿತಿ ಬಂದಿರುವ ಕಾರಣ ಅವರು ಹೋಟೆಲ್ನಿಂದ ಹೊರ ಹೋಗಿದ್ದಾರೆ. ಡಿಕೆಶಿ ಹೋಗುವವರೆಗೂ ಶಾಸಕರು ಲಗೇಜ್ ರೂಮಿನಲ್ಲಿಯೇ ಬಿಟ್ಟು ಹೊರ ಹೋಗಿದ್ದಾರೆ ಹೊರತು ಹೋಟೆಲ್ ಖಾಲಿ ಮಾಡಿಲ್ಲ. ಅಲ್ಲದೆ ಡಿಕೆಶಿ ಶಾಸಕರನ್ನು ಭೇಟಿ ಆಗಿಯೇ ಆಗುತ್ತೇನೆ ಎಂದು ಹೇಳುತ್ತಿದ್ದಾರೆ.
ಶಾಸಕರು ಇದ್ದ ರೂಂ ಈಗ ಖಾಲಿ ಆಗಿದೆ. ಶಾಸಕರು ಆ ರೂಂ ಖಾಲಿ ಮಾಡಿ ಬೇರೆ ಹೋಟೆಲಿಗೆ ಶಿಫ್ಟ್ ಆಗಿದ್ದಾರೆ. ಸದ್ಯ ಶಾಸಕರ ಲಗೇಜ್ ರೂಮಿನಲ್ಲಿಯೇ ಇದ್ದು, ಹೋಟೆಲ್ ಸಿಬ್ಬಂದಿ ಮೂಲಕ ತಮ್ಮ ಈಗಿರುವ ಹೋಟೆಲ್ಗೆ ತರಿಸಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ.
ಅತೃಪ್ತರ ಶಾಸಕರನ್ನು ಭೇಟಿ ಮಾಡಲು ಮುಂಬೈಗೆ ತೆರಳಿರುವ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಪೊಲೀಸರು ಹೋಟೆಲ್ ಒಳಗಡೆ ಬಿಡಲು ನಿರಾಕರಿಸಿದ್ದಾರೆ. ಈ ವೇಳೆ ಡಿಕೆಶಿ ಜೊತೆ ಮುಂಬೈ ಪೊಲೀಸರು ಮಾತುಕತೆ ನಡೆಸುವ ಮೂಲಕ ಭಾರೀ ಹೈಡ್ರಾಮವೇ ನಡೆಯುತ್ತಿದೆ.
ಈ ಮಧ್ಯೆ ರಿನೈಸೆನ್ಸ್ ಹೋಟೆಲ್ ಗೇಟ್ ಬಂದ್ ಮಾಡಲಾಗಿದ್ದು, ಡಿಕೆಶಿ ಅವರು ಹೋಟೆಲ್ ಹೊರಗೆ ಬರುತ್ತಿದ್ದಂತೆ ಪೊಲೀಸರು ಅವರನ್ನು ಒಳಗೆ ಹೋಗದಂತೆ ತಡೆದಿದ್ದಾರೆ. ಹೀಗಾಗಿ ಪೊಲೀಸರ ಜೊತೆ ಸಚಿವರು ವಾಗ್ವಾದಕ್ಕೆ ಇಳಿದಿದ್ದರು. ಇದೇ ವೇಳೆ ಗೋಬ್ಯಾಕ್ ಡಿಕೆ ಶಿವಕುಮಾರ್ ಎಂದು ಅತೃಪ್ತ ನಾಯಕರ ಬೆಂಬಲಿಗರು ಘೋಷಣೆ ಕೂಗುತ್ತಿದ್ದಾರೆ. ಆದರೆ ಯಾರು ಏನು ಬೇಕಾದರೂ ಮಾಡಲಿ, ಗೋ ಬ್ಯಾಕ್ ಎಂದಾದರೂ ಹೇಳಲಿ, ಗೋ ಎಸ್ ಎಂದಾದರೂ ಹೇಳಲಿ. ನಾನೂ ಈ ಹೋಟೆಲ್ನಲ್ಲಿ ರೂಮ್ ಬುಕ್ ಮಾಡಿದ್ದೇನೆ. ಇಡೀ ದಿನಾ ಇಲ್ಲೆ ಇರುತ್ತೇನೆ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.