Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ನಾನು ಹೆದರೋದು ಇಲ್ಲ, ಹೆಬ್ಬಾಳ್ಕರ್ ಕ್ಷಮೆಯ ಅಗತ್ಯವೂ ಇಲ್ಲ: ಸಿ.ಟಿ. ರವಿ

Public TV
Last updated: December 23, 2024 10:28 pm
Public TV
Share
2 Min Read
C.T Ravi
SHARE

ಚಿಕ್ಕಮಗಳೂರು: ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar)  ಅವರ ಕ್ಷಮೆಯ ಅಗತ್ಯವೂ ಇಲ್ಲ. ಅವರ ಬೆದರಿಕೆಗೆ ನಾನು ಹೆದರೋದು ಇಲ್ಲ ಎಂದು ಎಂಎಲ್‌ಸಿ ಸಿ.ಟಿ ರವಿ (C.T Ravi) ಆಕ್ರೋಶ ಹೊರ ಹಾಕಿದ್ದಾರೆ.

ನಗರದಲ್ಲಿರುವ (Chikkamagaluru) ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಬೆಳಗಾವಿಯನ್ನು ರಿಪಬ್ಲಿಕ್ ಆಗಲು ಜನರೂ ಒಪ್ಪಲ್ಲ. ಅದಕ್ಕೆ ನಾವೂ ಅವಕಾಶ ಕೊಡಲ್ಲ. ನನ್ನ ಮೇಲೆ ದೈಹಿಕ ಹಲ್ಲೆ ನಡೆದ ಸಂಬಂಧ ಕಿಶೋರ್ ಹಾಗೂ ಅರುಣ್ ದೂರು ನೀಡಿದ್ದಾರೆ. ಸುವರ್ಣ ಸೌಧದ ಪಶ್ಚಿಮ ಬಾಗಿಲಿನಲ್ಲಿ ಹಲ್ಲೆಗೆ ಮುಂದಾದ ವೇಳೆ ಅವರಿಬ್ಬರೂ ನನ್ನ ಜೊತೆ ಇದ್ದರು. ಹಾಗಾಗಿ ದೂರು ನೀಡಿದ್ದಾರೆ ಎಂದರು.

ದೂರಿನ ಅಡಿ, ಏನು ಕ್ರಮಕೈಗೊಳ್ಳುತ್ತಾರೆ ನೋಡೋಣ. ಖಾನಾಪುರದಲ್ಲಿ ನಾನು ದೂರು ನೀಡಿದ್ದೇನೆ. ಎಫ್‌ಐಆರ್ ಪ್ರತಿ ನೀಡಿಲ್ಲ. ಎಫ್‌ಐಆರ್‌ಗಾಗಿ ಎರಡು ದಿನ ನಮ್ಮ ವಕೀಲರು ಹೋಗಿದ್ದಾರೆ. ಕಮಿಷನರ್ 15 ದಿನ ಸಮಯ ಇದೆ ಎಂದಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ. ನನ್ನ ದೂರಿಗೂ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಕಮಿಷನರ್ ಆ ಜಾಗದಲ್ಲಿ ಇರಲು ಸೂಕ್ತರಲ್ಲ ಎಂದು ಕಿಡಿಕಾರಿದ್ದಾರೆ.

ಹಲ್ಲೆಗೆ ಮುಂದಾದಾಗ ಇದ್ದವರು ಲಕ್ಷ್ಮಿ ಹೆಬ್ಬಾಳ್ಕರ್ ಕಡೆಯವರು. ಯಾರೂ ಅಪರಿಚಿತರಲ್ಲ. ಇಬ್ಬರು ಹೆಬ್ಬಾಳ್ಕರ್ ಪಿಎಗಳು ಹಾಗೂ ಬಹುತೇಕ ಮುಸ್ಲಿಮರು ಇದ್ದರು. ಮಾಹಿತಿ ಸಂಗ್ರಹಿಸಿದ್ದೇನೆ ಎಲ್ಲವನ್ನೂ ಸಂಬಂಧಪಟ್ಟವರಿಗೆ ನೀಡುತ್ತೇನೆ. ಎಲ್ಲರ ಹೆಸರು ಹಾಕಿ ದೂರು ನೀಡಿದ್ದೇನೆ. ನನ್ನ ಮೇಲೆ ಕ್ರಮ ಮಾಡ್ತಾರೆ. ಅವರ ಮೇಲೆ ಕ್ರಮ ಏಕಿಲ್ಲ ಎಂದು ಪ್ರಶ್ನಿಸಿದ್ದಾರೆ.

ನನಗೆ ಏನೂ ಆಗಿಲ್ಲ ಎಂಬ ಹೆಬ್ಬಾಳ್ಕರ್ ಹೇಳಿಕೆ ವಿಚಾರವಾಗಿ, ಕಾಂಗ್ರೆಸ್‌ನವರು ತುರ್ತು ಪರಿಸ್ಥಿತಿ ಮನಸ್ಥಿತಿಯಿಂದ ಹೊರಬರಬೇಕು. ಹೆಬ್ಬಾಳ್ಕರ್ ಏನು ಡಾಕ್ಟರ್ ಅಲ್ಲ. ತಲೆಗೆ ಗಾಯವಾದ ಬಳಿಕವೂ ಮೂರು ನಾಲ್ಕು ಗಂಟೆಗಳ ಕಾಲ ಚಿಕಿತ್ಸೆ ಕೊಡಿಸಿಲ್ಲ. ಖಾನಾಪುರದಲ್ಲಿ ಗಾಯವಾದರೆ, ರಾಮದುರ್ಗದಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಅವರ ತಪ್ಪು ಮುಚ್ಚಿಕೊಳ್ಳಲು ಆ ತಾಯಿ ಸುಳ್ಳುಗಳ ಸರಮಾಲೆಯನ್ನು ಸುರಿಸುತ್ತಿದ್ದಾರೆ. ಸುಳ್ಳನ್ನು ಸೋಲಿಸಬಹುದು ಆದರೆ, ಸತ್ಯವನ್ನು ಸೋಲಿಸಲು ಆಗಲ್ಲ ಎಂದು ಟಾಂಗ್ ನೀಡಿದ್ದಾರೆ.

ಹೆಬ್ಬಾಳ್ಕರ್ ಕಣ್ಣೀರಿನಿಂದ ಲಾಭ ಪಡೆಯಬಹುದು ಅಂದುಕೊಂಡಿರಬಹುದು. ನನ್ನ ಪಿಎಗಳು ಲಂಚ ಕೇಳಿದ ಉದಾಹರಣೆಗಳಿಲ್ಲ. ಯಾರು ಸತ್ತಿಲ್ಲ, ಕೊಲೆಗಡುಕರು ಯಾರು ಎಲ್ಲವನ್ನೂ ಹೇಳುವ ಅಗತ್ಯವಿಲ್ಲ. ಯಾರ ರಾಜಕೀಯ ಹೇಗೆ ಶುರುವಾಯ್ತು ಎಂಬುದನ್ನು ಸ್ಥಳೀಯರಿಂದ ಕೇಳಿ. ಲಕ್ಷ್ಮಿ ಹೆಬ್ಬಾಳ್ಕರ್, ಮೋದಿ ಹತ್ತಿರ ಹೋಗ್ತೀನಿ ಅಂತಾರೆ, ಬಿಜೆಪಿಯವರು ಎಲ್ಲರೂ ದುಶ್ಯಾಸನರಾದರೇ ಅವರ ಬಳಿ ಏಕೆ ನ್ಯಾಯ ಕೇಳ್ತಾರೆ?‌ ಪಕ್ಕೆ, ಬೆನ್ನಿನಲ್ಲಿ ಪೆಟ್ಟಾಗಿರುವ ಮೂರರಿಂದ ನಾಲ್ಕು ಗುರುತುಗಳು ಇನ್ನೂ ಇವೆ. ಹೆಬ್ಬಾಳ್ಕರ್ ಪಿಎಗೆ ಅಷ್ಟು ಸೊಕ್ಕು ಹೇಗೆ?ಎಲ್ಲಿಂದ ಬಂತು? ಆ ಸೊಕ್ಕಿಗೆ ಕಾರಣ ಯಾರು. ಗೂಂಡಾಗಳಿಗೆ ಸುವರ್ಣಸೌಧದೊಳಗೆ ಪಾಸ್ ಕೊಟ್ಟಿದ್ದು ಯಾರು? ಅವರು ಓರ್ವ ಶಾಸಕನಿಗೆ ಸುತ್ತಾಡಿಸಿದ್ದು, ಹಿಂಸೆ ಕೊಟ್ಟಿದ್ದನ್ನ ಆ ಮಹಾತಾಯಿ ಹೇಗೆ ಒಪ್ಪಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಈ ಘಟನೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಕೂಡ ಸಮರ್ಥಿಸಿಕೊಂಡಿದ್ದಾರೆ, ಈ ಬಗ್ಗೆ ನಾನೇನು ಹೇಳಲ್ಲ, ತನಿಖೆ ಎಲ್ಲವನ್ನೂ ಹೇಳಬೇಕು. ಅವರು ಸ್ವತಂತ್ರರು ಏನೇನು ಕೇಳಿಸಿಕೊಂಡರು ಹೇಳಲಿ. ಆದರೆ, ಜಾಣ ಕುರುಡು, ಜಾಣ ಕಿವುಡು ಆಗೋದು ಬೇಡ ಅವರು ಸ್ವತಂತ್ರರಿದ್ದಾರೆ. ಕಾಲ್ ಲೀಸ್ಟ್ ತೆಗೆದರೇ ಯರ‍್ಯಾರು ಸಂಪರ್ಕದಲ್ಲಿದ್ದರು. ಯಾರು ಫೋನ್ ಮಾಡಿ ಏನೇನು ಹೇಳಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.

TAGGED:c t raviChikkamagalurucongressLakshmi Hebbalkar
Share This Article
Facebook Whatsapp Whatsapp Telegram

Cinema Updates

shamanth gowda 1 1
ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ಶಮಂತ್ ಗೌಡ
36 minutes ago
Ananya Panday 1
ನಿಮ್ಮದು ಕೋಳಿ ಕಾಲುಗಳು- ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ ಅನನ್ಯಾ ಪಾಂಡೆ
51 minutes ago
kushi kapoor
ಬಿಕಿನಿಯಲ್ಲಿ ಬೀಚ್ ಬಳಿ ನಟಿ ಖುಷಿ ಕಪೂರ್ ಚಿಲ್
2 hours ago
shamanth gowda
‘ಲಕ್ಷ್ಮಿ ಬಾರಮ್ಮ’ ನಟನ ಅದ್ಧೂರಿ ಆರತಕ್ಷತೆ- ಸಿನಿ ತಾರೆಯರು ಭಾಗಿ
1 hour ago

You Might Also Like

Vidhana Soudha
Bengaluru City

ಮೇ 21 ರಂದು ವಿಧಾನಸೌಧದ ಮುಂದೆ ಆಂಧ್ರಕ್ಕೆ ಆನೆಗಳ ಹಸ್ತಾಂತರ

Public TV
By Public TV
16 minutes ago
vlcsnap 2025 05 18 13h52m37s038
Districts

ಸೈನಿಕರ ಸುರಕ್ಷೆಗೆ ಉಡುಪಿ ಪೇಜಾವರ ಶ್ರೀ ಮಾರ್ಗದರ್ಶನದಲ್ಲಿ ಸುದರ್ಶನ ಯಾಗ

Public TV
By Public TV
18 minutes ago
Weather
Belgaum

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ – ಎಲ್ಲೆಲ್ಲಿ?

Public TV
By Public TV
21 minutes ago
virat kohli suresh raina
Cricket

ವಿರಾಟ್‌ ಕೊಹ್ಲಿಗೆ ‘ಭಾರತ ರತ್ನ’ ನೀಡಬೇಕು: ಸುರೇಶ್‌ ರೈನಾ

Public TV
By Public TV
41 minutes ago
BY Vijayendra in tumakuru
Districts

ಕಾಂಗ್ರೆಸ್‌ನ ಕೆಲ ಅಯೋಗ್ಯರು ದೇಶವಿರೋಧಿ ಹೇಳಿಕೆ ಕೊಡುತ್ತಿದ್ದಾರೆ – ಬಿವೈ ವಿಜಯೇಂದ್ರ ಕಿಡಿ

Public TV
By Public TV
58 minutes ago
America Storm
Crime

ಅಮೆರಿಕದಲ್ಲಿ ಬಿರುಗಾಳಿ ಅಬ್ಬರಕ್ಕೆ 25 ಮಂದಿ ಬಲಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?