Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಯೋಗೇಶ್ವರ್‌ರನ್ನ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದೌರ್ಬಲ್ಯ ಒಪ್ಪಿಕೊಂಡ ಡಿಕೆಶಿ: ಸಿ.ಟಿ ರವಿ ಟಾಂಗ್

Public TV
Last updated: October 23, 2024 4:59 pm
Public TV
Share
3 Min Read
CT RAVI
SHARE

– ಯೋಗೇಶ್ವರ್‌ ಹುಲಿ ಮಣಿಸ್ತಾರಾ? ಬಲಿಯಾಗ್ತಾರಾ? ನೋಡಬೇಕು ಎಂದ ಎಂಎಲ್‌ಸಿ

ಬೆಂಗಳೂರು: ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ (Channapatna) ದುರ್ಬಲವೆಂದು ಡಿಕೆ ಶಿವಕುಮಾರ್ ಒಪ್ಪಿಕೊಂಡಂತಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ (CT Ravi) ಅವರು ಟಾಂಗ್ ಕೊಟ್ಟರು.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ ಅವರು ಕಾಂಗ್ರೆಸ್ಸಿಗೆ ಹೋದುದರಿಂದ ಒಂದಂತೂ ನಾವು ಊಹಿಸಬಹುದು. 136 ಶಾಸಕರಿದ್ದೂ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಅವರಂತಹ ಪ್ರಬಲ ನಾಯಕರನ್ನು ಹೊಂದಿದ ಕಾಂಗ್ರೆಸ್ ಪಕ್ಷ (Congress Party) ಚನ್ನಪಟ್ಟಣದಲ್ಲಿ ದೌರ್ಬಲ್ಯ ಒಪ್ಪಿಕೊಂಡಂತಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ – ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ 

Yogeshwar DK Shivakumar Siddaramaiah

ನಿನ್ನೆ ಮೊನ್ನೆಯವರೆಗೂ ನಾನೇ ಕ್ಯಾಂಡಿಡೇಟ್ ಎಂದು ಡಿ.ಕೆ ಶಿವಕುಮಾರ್ ಹೇಳುತ್ತಿದ್ದರು. ಪೂರ್ವತಯಾರಿ ಮಾಡಿ ಓಡಾಡುತ್ತಿದ್ದರು. ಡಿ.ಕೆ ಸುರೇಶ್ ಅಲ್ಲಿ ಅಭ್ಯರ್ಥಿ ಎಂದು ಬಹಳ ಜನ ಅಂದುಕೊಂಡಿದ್ದರು. ಅಲ್ಲಿ ಯೋಗೇಶ್ವರ್‌ಗೆ ಟಿಕೆಟ್ ಕೊಟ್ಟು ಅಸಹಾಯಕತೆ ತೋರಿಸುತ್ತಾರೋ ಅಥವಾ ಯೋಗೇಶ್ವರ್ ಜೊತೆಗಿಟ್ಟುಕೊಂಡು ಡಿ.ಕೆ ಸುರೇಶ್ ಅಭ್ಯರ್ಥಿ ಆಗುತ್ತಾರೋ ನೋಡಬೇಕಿದೆ. ಆದರೆ, ಕಾಂಗ್ರೆಸ್ ತಾನು ಚನ್ನಪಟ್ಟಣದಲ್ಲಿ ದುರ್ಬಲ ಎಂದು ಒಪ್ಪಿಕೊಂಡಂತಾಗಿದೆ ಎಂದು ಸಿ.ಟಿ ರವಿ ತಿಳಿಸಿದರು.

ಹುಲಿ ಮಣಿಸುವರೇ? ಬಲಿ ಆಗುವರೇ?
ಯೋಗೇಶ್ವರ್ ಅವರು ಮಹತ್ವಾಕಾಂಕ್ಷೆ ಇಟ್ಟುಕೊಂಡ ರಾಜಕಾರಣಿ. ಸುದೀರ್ಘ ಅವಧಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ರಾಜಕಾರಣ ಮಾಡಿದವರು. ಡಿ.ಕೆ ಶಿವಕುಮಾರ್ ಮತ್ತು ಅವರ ನಡುವಿನ ಶತ್ರುತ್ವ ಇವತ್ತು ನಿನ್ನೆಯದಲ್ಲ. ಹುಲಿ ಬೋನಿಗೆ ಹೋಗಿದ್ದಾರೆ. ಒಂದೋ ಹುಲಿಯನ್ನು ಮಣಿಸಬೇಕು. ಇಲ್ಲವೇ ಹುಲಿಗೆ ಬಲಿ ಆಗಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಕುಡಚಿಯಲ್ಲಿ ರೈಲು ಹಳಿ ಪಕ್ಕವೇ ಕುಸಿದ ಭೂಮಿ – ಈಗ ಒಂದು ಹಳಿಯಲ್ಲಿ ಮಾತ್ರ ಸಂಚಾರ

ಇವತ್ತೇ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ನಮ್ಮ ರಾಜಕಾರಣ ಮತ್ತು ಯೋಗೇಶ್ವರ್ ರಾಜಕಾರಣದ ಚಿಂತನೆಯ ನಡುವೆ ಅಗಾಧವಾದ ಅಂತರವಿದೆ. ಯೋಗೇಶ್ವರ್ ಅವರು ವೈಯಕ್ತಿಕ ನೆಲೆಯಲ್ಲಿ ರಾಜಕಾರಣ ಮಾಡುತ್ತಾರೆ. ಸದಾಕಾಲ ರಾಜಕೀಯ ಕ್ಷೇತ್ರದ ಲಾಭ ನಷ್ಟದ ಲೆಕ್ಕ ಹಾಕುತ್ತಾರೆ. ನಮ್ಮದು ಸೈದ್ಧಾಂತಿಕ ಬದ್ಧತೆಯ ರಾಜಕಾರಣ ಎಂದು ವಿವರಿಸಿದರು. ಲಾಭ ನಷ್ಟದ ಲೆಕ್ಕಾಚಾರಕ್ಕೆ ಅವಕಾಶವೂ ಇಲ್ಲ. ಆ ಚಿಂತನೆಯೂ ನಮ್ಮಲ್ಲಿಲ್ಲ ಎಂದು ನುಡಿದರು.

ಯೋಗೇಶ್ವರ್ ರಾಜೀನಾಮೆ ಕೊಟ್ಟ ಮೇಲೆ ಸೋದರಿಕೆ ಸಂಬಂಧವೇನೂ ಇಲ್ಲ. ನಾವು ಎನ್‍ಡಿಎ ಆಗಿ ಚನ್ನಪಟ್ಟಣದಲ್ಲಿ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ನಾವು ನಿರ್ಣಯಿಸಿ ಚರ್ಚೆ ಮಾಡುವುದಿಲ್ಲ. ಚರ್ಚಿಸಿ ನಿರ್ಣಯಕ್ಕೆ ಬರುತ್ತೇವೆ. ಒಂದೂವರೆ ಎರಡು ತಿಂಗಳ ಹಿಂದೆಯೇ ನಾವು ಚನ್ನಪಟ್ಟಣದ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿಯವರ ಜೊತೆ ಚರ್ಚಿಸಿದ್ದೇವೆ. ಚನ್ನಪಟ್ಟಣ ಕುಮಾರಸ್ವಾಮಿಯವರು ಪ್ರತಿನಿಧಿಸಿದ ಕ್ಷೇತ್ರ. ಏಕಪಕ್ಷೀಯ ನಿರ್ಣಯ ಹೇರುವುದು, ನಮ್ಮ ನಿರ್ಣಯ ಹೇರುವುದಾಗಲೀ ಮೈತ್ರಿ ಅನಿಸುವುದಿಲ್ಲ. ಇಬ್ಬರೂ ಸೇರಿ ನಿರ್ಣಯಿಸಬೇಕಾಗುತ್ತದೆ ಎಂದು ಇನ್ನೊಂದು ಪ್ರಶ್ನೆಗೆ ಸಿ.ಟಿ ರವಿ ಉತ್ತರಿಸಿದರು.

ರಾಜ್ಯದಲ್ಲಿ ಜನಹಿತ ಮರೆತ ಸರ್ಕಾರ:
ಬೆಂಗಳೂರಿನಲ್ಲಿ ಜನರ ಬದುಕು ಬೀದಿಗೆ ಬಿದ್ದಿದೆ. ಇವತ್ತು ಜನಹಿತ ಮರೆತ ಸರ್ಕಾರ ರಾಜ್ಯದಲ್ಲಿದೆ ಎಂದು ಟೀಕಿಸಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಸ್ವಾಗತ ಮಾಡುವುದು ಜನರ ಬದುಕಿಗೆ ಸ್ಪಂದಿಸುವುದಕ್ಕಿಂತ ಮುಖ್ಯವಾಗಿದೆ. ಜನರ ಸಮಸ್ಯೆಗಳಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಸ್ಪಂದಿಸುತ್ತಿಲ್ಲ ಎಂದು ಆಕ್ಷೇಪಿಸಿದರು. ಇಂಥ ಸರ್ಕಾರ ಯಾಕಿರಬೇಕು ಹೇಳಿ ಎಂದು ಪ್ರಶ್ನಿಸಿದರು. ಮಳೆಯಿಂದ ಕಟ್ಟಡ ಕುಸಿತ ಸೇರಿ ಮಳೆ ಕಾರಣಕ್ಕೆ 8ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸರ್ಕಾರಕ್ಕೆ ಮಾನವೀಯತೆ ಇದೆಯೇ? ಸ್ಪಂದನೆ ಏನು? ಎಂದು ಕೇಳಿದರಲ್ಲದೇ, ಭ್ರಷ್ಟಾಚಾರದಲ್ಲಿ ತೊಡಗಿದ ಬದುಕಿದ್ದೂ ಸತ್ತಂತಿರುವ ಸರ್ಕಾರ ಇಲ್ಲಿದೆ ಎಂದು ಟೀಕಿಸಿದರು.

TAGGED:bjpChannapatnaChannapatna By ElectioncongressCP YogeshwarCT RaviDK Shivakumarಕಾಂಗ್ರೆಸ್ಚನ್ನಪಟ್ಟಣ ಉಪಚುನಾವಣೆಡಿ.ಕೆ.ಶಿವಕುಮಾರ್ಬಿಜೆಪಿಯೋಗೇಶ್ವರ್ಸಿ.ಟಿ ರವಿ
Share This Article
Facebook Whatsapp Whatsapp Telegram

You Might Also Like

Ind vs Eng
Cricket

ಪೋಪ್‌ – ಡಕೆಟ್‌ ಶತಕದ ಜೊತೆಯಾಟ – ಬುಮ್ರಾ ಏಕಾಂಗಿ ಹೋರಾಟಕ್ಕೆ ಮೂರು ವಿಕೆಟ್‌

Public TV
By Public TV
2 minutes ago
Jailer 2 Actor Rajinikanth waves and greets fans in mysuru
Cinema

ಮೈಸೂರು | ಕಿಕ್ಕಿರಿದು ಸೇರಿದ್ದ ಅಭಿಮಾನಿಗಳತ್ತ ಕೈ ಬೀಸಿದ ತಲೈವಾ!

Public TV
By Public TV
10 minutes ago
Dharwar ASI
Crime

ಧಾರವಾಡ | ಹಿಟ್ & ರನ್‌ಗೆ ಎಎಸ್ಐ ಬಲಿ

Public TV
By Public TV
36 minutes ago
kadamba naval base compensation
Latest

ಕದಂಬ ನೌಕಾನೆಲೆಗಾಗಿ ಭೂಮಿ ಕೊಟ್ಟವರಿಗೆ 30 ವರ್ಷದ ನಂತರ ಸಿಕ್ತು ಪರಿಹಾರ

Public TV
By Public TV
8 hours ago
kinnigoli mukhaprana
Dakshina Kannada

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Public TV
By Public TV
8 hours ago
Hot Air Balloon Horror In Brazil
Latest

21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಬಲೂನ್‌ನಲ್ಲಿ ಬೆಂಕಿ ಅವಘಡ; 8 ಮಂದಿ ದುರ್ಮರಣ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?