ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಪೊಲೀಸರು ಕಾರ್ಯಾಚರಣೆ ನಡೆಸಿ, ಮಹಾರಾಷ್ಟ್ರ ಸೇರಿದಂತೆ ಹಲವು ಕಡೆಗಳಲ್ಲಿ ಮೊಬೈಲ್ ಕಳ್ಳತನ ನಡೆಸಿದ್ದ ಖದೀಮನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಭದ್ರಾವತಿಯ ನಿವಾಸಿ ಸೈಯದ್ ಅಲ್ವಿ (25) ಎಂದು ಗುರುತಿಸಲಾಗಿದ್ದು, ಉಳಿದ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಹಲವೆಡೆಗಳಲ್ಲಿ ಕಳ್ಳತನ ಮಾಡಿದ್ದ ಮೊಬೈಲ್ಗಳನ್ನು ಮೂವರು ಕಳ್ಳರು ಭದ್ರಾವತಿಯ ಸಂತೆ ಮೈದಾನದ ಆವರಣದಲ್ಲಿ ಹಂಚಿಕೆ ಮಾಡಿಕೊಳ್ಳುತ್ತಿದ್ದರು. 6 ಲಕ್ಷದ 68 ಸಾವಿರ ರೂ ಮೌಲ್ಯದ ವಿವಿಧ ಕಂಪನಿಗಳ ಸುಮಾರು 55 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೊರೊನಾ ಟೈಮ್ನಲ್ಲಿ ಮದುವೆ ಕ್ಯಾನ್ಸಲ್ ಮಾಡಿದ್ರೆ ಸಿಗಲಿದೆ 10 ಲಕ್ಷ!
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ಇಬ್ಬರು ಆರೋಪಿಗಳ ತಪ್ಪಿಸಿಕೊಂಡಿದ್ದಾರೆ. ಇನ್ನೊಬ್ಬ ಆರೋಪಿಯನ್ನು ಮಾಲು ಸಮೇತ ವಶಕ್ಕೆ ಪಡೆಯಲು ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ಕುರಿತು ಭದ್ರಾವತಿಯ ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡು- ರೆಸಾರ್ಟ್ಗಳೆಲ್ಲ ಹೌಸ್ ಫುಲ್