Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ ರಾಜ್ಯದ 2 ಕಡೆ ನಡೆಯಲಿದೆ ಯುದ್ಧದ ಡ್ರಿಲ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಳೆ ರಾಜ್ಯದ 2 ಕಡೆ ನಡೆಯಲಿದೆ ಯುದ್ಧದ ಡ್ರಿಲ್‌!

Bengaluru City

ನಾಳೆ ರಾಜ್ಯದ 2 ಕಡೆ ನಡೆಯಲಿದೆ ಯುದ್ಧದ ಡ್ರಿಲ್‌!

Public TV
Last updated: May 6, 2025 2:34 pm
Public TV
Share
2 Min Read
mock drill
SHARE

ಬೆಂಗಳೂರು: ನಾಳೆ(ಮೇ 7) ಕರ್ನಾಟಕದ ಎರಡು ಕಡೆ ಯುದ್ಧದ ಸೈರನ್‌ ಮೊಳಗಲಿದೆ. ಬೆಂಗಳೂರು (Bengaluru) ಮತ್ತು ಶಾಖೋತ್ಪನ್ನ ವಿದ್ಯುತ್‌ ಸ್ಥಾವರ ಇರುವ ರಾಯಚೂರಿನ (Raichuru) ಶಕ್ತಿ ನಗರದಲ್ಲಿ ಸಂಜೆ 4 ಗಂಟೆಗೆ ಮಾಕ್‌ ಡ್ರಿಲ್‌ ನಡೆಯಲಿದೆ.

ಮಾಕ್‌ ಡ್ರಿಲ್‌ನಲ್ಲಿ ಒಂದು ಕಾಲ್ಪನಿಕ ತುರ್ತು ಪರಿಸ್ಥಿತಿಯ ಸೃಷ್ಟಿ ಮಾಡಲಾಗುತ್ತದೆ. ಸರ್ಕಾರ, ಭದ್ರತಾ ಸಿಬ್ಬಂದಿ, ಸಾರ್ವಜನಿಕರ ಸಿದ್ಧತೆ ಪರೀಕ್ಷಿಸುವ ಅಭ್ಯಾಸ ಇದಾಗಿದ್ದು ನೈಜ ಘಟನೆಯಂತೆಯೇ ನಡೆಯುತ್ತದೆ. ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಲಾಗುತ್ತದೆ.

ಸಂಕಷ್ಟದ ಸನ್ನಿವೇಶಗಳನ್ನು ಅಣಕುಪ್ರದರ್ಶನ ಮಾಡಿ ಅಭ್ಯಾಸ ಮಾಡಲಾಗುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ, ಜನರ ರಕ್ಷಣೆಯ ಸಾಮರ್ಥ್ಯ ಬಲಪಡಿಸುವ ಉದ್ದೇಶದ ಜೊತೆಗೆ ಶತ್ರು ದಾಳಿ ವೇಳೆ ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿ ಪಡಿಸಲು ಅಗತ್ಯ ಸಿದ್ಧತೆ ಮಾಡಲು ಈ ಅಭ್ಯಾಸ ಮಾಡಲಾಗುತ್ತದೆ.

ಯಾವುದೇ ತುರ್ತು ಸಂದರ್ಭದಲ್ಲಿ ರಾಜ್ಯ ಸರ್ಕಾರಗಳು, ಪೊಲೀಸ್, ಆರೋಗ್ಯ ಇಲಾಖೆ ಮತ್ತು ಇತರ ಸಂಸ್ಥೆಗಳ ಸಮನ್ವಯ ಬೇಕಾಗುತ್ತದೆ. ಜನರಲ್ಲಿ ತುರ್ತು ಸನ್ನಿವೇಶದ ಬಗ್ಗೆ ಜಾಗೃತಿ ಮೂಡಿಸಿ ಸುರಕ್ಷಿತವಾಗಿರಲು ತರಬೇತಿ ನೀಡಲಾಗುತ್ತದೆ.  ಇದನ್ನೂ ಓದಿ: ದಿಢೀರ್‌ 35 ಸಾವಿರದಿಂದ 3 ಸಾವಿರ ಕ್ಯುಸೆಕ್‌ಗೆ ಇಳಿಕೆಯಾಯ್ತು ನೀರು – ಭಾರತದ ʼಜಲ ಬಾಂಬ್‌ʼಗೆ ಪಾಕ್‌ ತತ್ತರ

ವಾಯುದಾಳಿಯ ಸಂದರ್ಭದಲ್ಲಿ ನಗರಗಳು ಮತ್ತು ಹಳ್ಳಿಗಳಲ್ಲಿ ಸಂಪೂರ್ಣ ವಿದ್ಯುತ್‌ ಕಡಿತ ಮಾಡಲಾಗುತ್ತದೆ. ರಾತ್ರಿ ವಾಹನಗಳ ಸಂಚಾರವನ್ನೂ ಸ್ಥಗಿತಗೊಳಿಸಲಾಗುತ್ತದೆ. ವೈರಿ ದೇಶಗಳಿಗೆ ಊರುಗಳ ಗುರುತು ಪತ್ತೆ ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತದೆ.

1999 ರಲ್ಲಿ ನಡೆದ ಕಾರ್ಗಿಲ್‌ ಯುದ್ಧದ ವೇಳೆ ಈ ರೀತಿಯ ಮಾಕ್‌ ಡ್ರಿಲ್‌ ನಡೆದಿರಲಿಲ್ಲ. ಈ ಸಂದರ್ಭದಲ್ಲಿ ಪಾಕಿಸ್ತಾನವೇ ನೇರವಾಗಿ ಯುದ್ಧಕ್ಕೆ ಧುಮುಕಿದ್ದರಿಂದ ಮಾಕ್‌ ಡ್ರಿಲ್‌ ಮಾಡಲು ಸಮಯ ಸಿಕ್ಕಿರಲಿಲ್ಲ.

 

54 ವರ್ಷದ ಬಳಿಕ ಮಾಕ್‌ ಡ್ರಿಲ್‌:
ಬರೋಬ್ಬರಿ 54 ವರ್ಷದ ಬಳಿಕ ಭಾರತದಲ್ಲಿ ಮಾಕ್‌ ಡ್ರಿಲ್‌ ನಡೆಯಲಿದೆ. ಪಹಲ್ಗಾಮ್‌ ಪ್ರತೀಕಾರಕ್ಕೆ (Pahalgam Terror Attack) ಭಾರತ (India) ಸನ್ನದ್ಧವಾಗುತ್ತಿದ್ದಂತೆ ದೇಶದ 244 ಸಿವಿಲ್‌ ಡಿಫೆನ್ಸ್‌ ಜಿಲ್ಲೆಗಳಲ್ಲಿ (Civil Defence District) ನಾಳೆ ನಾಗರಿಕರ ರಕ್ಷಣೆ ಸಂಬಂಧ ಭದ್ರತಾ ತಾಲೀಮು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಸೂಚನೆ ಕೊಟ್ಟಿದೆ.

ಯುದ್ಧದ (War) ದಾಳಿ ಸಂದರ್ಭದಲ್ಲಿ ಜನರು ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎನ್ನುವುದರ ಬಗ್ಗೆ ಅಣಕು ತಾಲೀಮಿಗೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು, ನಾಗರಿಕರ ರಕ್ಷಣೆಗಾಗಿ ಪ್ರಾತ್ಯಕ್ಷಿಕೆ ಕೊಡುವಂತೆ ಸಿವಿಲ್ ಡಿಫೆನ್ಸ್‌ಗಳಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಭಾರತದ ವಿರುದ್ಧ ಸುಳ್ಳು ಆರೋಪ – ಪಾಕ್‌ಗೆ ಹಿಗ್ಗಾಮುಗ್ಗಾ ಜಾಡಿಸಿದ ವಿಶ್ವಸಂಸ್ಥೆ

ಸಾಧಾರಣವಾಗಿ ಒಂದು ದೇಶ ಯುದ್ಧಕ್ಕೆ ಸಿದ್ಧಗೊಳ್ಳುತ್ತಿದ್ದಾಗ ಮಾಕ್‌ ಡ್ರಿಲ್‌ ಮಾಡಲು ಕರೆ ನೀಡುತ್ತದೆ. 1971ರಲ್ಲಿ ಭಾರತ-ಪಾಕ್ ಯುದ್ಧ ನಡೆಯುವ ಮೊದಲು ರಕ್ಷಣಾ ಮಾಕ್ ಡ್ರಿಲ್ ನಡೆದಿತ್ತು. ಕಳೆದ ಭಾನುವಾರ ಪಂಜಾಬ್‌ನ ಫಿರೋಜ್‌ಪುರ್ ಕಂಟೋನ್ಮೆಂಟ್‌ನಲ್ಲಿ ರಾತ್ರಿ 9 ರಿಂದ 9:30ರವರೆಗೆ ವಿದ್ಯುತ್‌ ದೀಪ ಆರಿಸಿ ಮಾಕ್ ಡ್ರಿಲ್ ನಡೆದಿತ್ತು. ಇದರ ಬೆನ್ನಲ್ಲೇ ಎಲ್ಲ ರಾಜ್ಯಗಳಿಗೆ ಮಾಕ್ ಡ್ರಿಲ್‌ಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.

1971ರ ಸಂದರ್ಭದಲ್ಲೂ ಮೊದಲಿಗೆ ಪಂಜಾಬ್‌ನಲ್ಲೇ ಮೊದಲ ಬಾರಿ ಮಾಕ್ ಡ್ರಿಲ್ ಮಾಡಲಾಗಿತ್ತು. ಈ ಬಾರಿಯೂ ಮೊದಲು ಪಂಜಾಬ್ ನಲ್ಲಿ ನಡೆಸಿ ಬಳಿಕ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿರುವುದು ವಿಶೇಷ. ಹೀಗಾಗಿ 1971 ರೀತಿ ಮತ್ತೊಮ್ಮೆ ಭಾರತ ಪಾಕ್‌ ಮಧ್ಯೆ ಯುದ್ಧ ನಡೆಯುತ್ತಾ ಎಂಬ ಪ್ರಶ್ನೆ ಎದ್ದಿದೆ.

TAGGED:bengaluruindiaPahalgampakistanwarಪಹಲ್ಗಾಮ್‌ಪಾಕಿಸ್ತಾನಬೆಂಗಳೂರುಭಾರತಮಾಕ್‌ ಡ್ರಿಲ್‌ಯುದ್ಧ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
6 minutes ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
14 minutes ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
50 minutes ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
1 hour ago
Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
2 hours ago
bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?