Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನ

Public TV
Last updated: October 17, 2022 8:52 am
Public TV
Share
2 Min Read
Kamegowda 4
SHARE

ಮಂಡ್ಯ: ಪರಿಸರ ಪ್ರೇಮಿ, ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದ ಆಧುನಿಕ ಭಗೀರಥ ಖ್ಯಾತಿಯ (Modern Bhagirath) ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯ ಕೆರೆ ಕಾಮೇಗೌಡ (84) (Kamegowda) ಇಂದು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕಾಮೇಗೌಡರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿದ್ದ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

Kamegowda

ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಎಂದು ಕಾಮೇಗೌಡ ಅವರು ಸ್ವತಃ ತಮ್ಮ ಕೈಯಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು. ಜೊತೆಗೆ ಸಾವಿರಾರು ಗಿಡಗಳನ್ನು ನೆಟ್ಟು ಬೆಟ್ಟದಲ್ಲಿ ಹಸಿರು ಕ್ರಾಂತಿ ಮಾಡುವ ಮೂಲಕ ಪರಿಸರ ಕಾಳಜಿಯನ್ನು ಕಾಮೇಗೌಡರು ಮೆರೆದಿದ್ದರು. ಇದನ್ನೂ ಓದಿ: ಪರೇಶ್ ಮೇಸ್ತಾ ಕೇಸ್ ರೀ ಓಪನ್‍ಗೆ ಒತ್ತಡ – ಸರ್ಕಾರ ಸೈಲೆಂಟ್

Kamegowda 1

ಇವರ ಈ ಕಾರ್ಯವನ್ನು ಮೆಚ್ಚಿ ಪ್ರಧಾನ ಮಂತ್ರಿ ಅವರ ಜನಪ್ರಿಯ ಕಾರ್ಯಕ್ರಮವಾದ ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಕಾಮೇಗೌಡರನ್ನು ಆಹ್ವಾನ ಮಾಡಲಾಗಿತ್ತು. ಆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಮೇಗೌಡರ ಕಾರ್ಯವನ್ನು ಶ್ಲಾಘನೆ ಮಾಡಿ ಹೊಗಳಿದ್ದರು. ಕಾಮೇಗೌಡರ ಕೆಲಸವನ್ನು ಗುರುತಿಸಿ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಲಾಗಿದೆ.

ಕಳೆದ ರಾತ್ರಿ ಕಾಮೇಗೌಡ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಇದಾದ ನಂತರ ವಾಂತಿಯನ್ನು ಮಾಡಿಕೊಂಡಿದ್ದಾರೆ. ಬಳಿಕ ಮನೆಯಲ್ಲಿ ಕಾಮೇಗೌಡರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರಿಷಿ ಸುನಾಕ್‌ಗೆ ಸಿಗುತ್ತಾ ಬ್ರಿಟನ್ ಪ್ರಧಾನಿ ಹುದ್ದೆ?

Kamegowda

ಕೆರೆ ನಿರ್ಮಾಣಕ್ಕೆ ಕೈ ಹಾಕಿದ್ಯಾಕೆ ಕಾಮೇಗೌಡರು?
ಕುರಿಗಾಹಿಯಾಗಿದ್ದ ಕಾಮೇಗೌಡರು ಸುಮಾರು 15 ವರ್ಷಗಳ ಹಿಂದೆ ಕುಂದೂರು ಬೆಟ್ಟಕ್ಕೆ ಕುರಿ ಮೇಯಿಸಲು ಹೋಗಿದ್ದರು. ಆಗ ವಿಪರೀತ ದಾಹವಾಗಿ ನೀರಿಗಾಗಿ ಪರದಾಡಿದ್ದರು. ಬಳಿಕ ಸ್ವಲ್ಪ ದೂರದ ಮನೆಗೆ ಹೋಗಿ ನೀರು ಕೇಳಿ ಪಡೆದಿದ್ದರು. ಆಗ ನಾನು ದಾಹ ತೀರಿಸಿಕೊಂಡೆ ಆದರೆ ಪ್ರಾಣಿಗಳ ಪರಿಸ್ಥಿತಿ ಏನು ಎನ್ನುವ ಚಿಂತೆ ಅವರಿಗೆ ಕಾಡಿತ್ತು. ಹೀಗಾಗಿ ಗುಡ್ಡದಲ್ಲಿ ಕೆರೆ ನಿರ್ಮಾಣಕ್ಕೆ ಮುಂದಾದರು.

Kamegowda 3

ಕಾಮೇಗೌಡರು ಗುಡ್ಡದಲ್ಲಿ ಕೆರೆ ತೋಡುತ್ತಿದ್ದನ್ನು ಕಂಡು ಆರಂಭದಲ್ಲಿ ಅನೇಕರು ಗೇಲಿ ಮಾಡಿದ್ದರು. ಇವನಿಗೆ ಹುಚ್ಚು ಹಿಡಿದಿದೆ, ಅದಕ್ಕೆ ಇಲ್ಲಿ ಕೆರೆ ತೋಡುತ್ತಿದ್ದಾನೆ ಎಂದು ಮಾತನಾಡಿದ್ದರು. ಆದರೆ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಕಾಮೇಗೌಡರು, ತಮ್ಮ ಕೆಲಸವನ್ನು ಮುಂದುವರಿಸಿದ್ದರು. ಬಳಿಕ 16 ಕೆರೆಗಳನ್ನು ನಿರ್ಮಿಸಿ ಪ್ರಧಾನಿ ಮೋದಿ, ದೇಶದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

Kamegowda 2

ಕಾಮೇಗೌಡರು ತೋಡಿದ ಕೆರೆಗಳಲ್ಲಿ ಕಡು ಬೇಸಿಗೆಯಲ್ಲಿ ಕೂಡ ನೀರು ತುಂಬಿರುತ್ತದೆ. ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ನೀರು ಕಡಿಮೆಯಾದರೂ ಇವರು ತೋಡಿದ ಕೆರೆಗಳಲ್ಲಿ ನೀರು ತುಂಬಿರುತ್ತಿತ್ತು. ತಮ್ಮ ಕುರಿಗಳನ್ನು ಮತ್ತು ಜಾನುವಾರುಗಳನ್ನು ಮೇಯಿಸುವಾಗ ಪರ್ವತ ಪ್ರದೇಶದ ಕಣಿವೆಗಳಲ್ಲಿ ನೀರು ಸಿಗದೇ ಪರಿತಪಿಸುತ್ತಿರುವ ಪ್ರಾಣಿ-ಪಕ್ಷಿಗಳನ್ನು ಕಂಡು ಕೆರೆಗಳನ್ನು ಅಗೆಯುವ ಆಲೋಚನೆ ಹೊಳೆಯಿತು ಎಂದು ಕಾಮೇಗೌಡರು ಈ ಹಿಂದೆ ಹೇಳಿದ್ದರು.

Live Tv
[brid partner=56869869 player=32851 video=960834 autoplay=true]

TAGGED:KamegowdaMan Ki BaatmandyaModern Bhagirathnarendra modiಆಧುನಿಕ ಭಗೀರಥಕಾಮೇಗೌಡನರೇಂದ್ರ ಮೋದಿಮಂಡ್ಯಮನ್‍ಕಿ ಬಾತ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
15 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
15 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
16 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
17 hours ago

You Might Also Like

pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
5 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
5 hours ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
5 hours ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
5 hours ago
Nganthoi Sharma
Latest

ವಿಮಾನ ಪತನ – ಗಗನಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
6 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?