ವಿಜಯಪುರ: ಮೋದಿ ಸರ್ಕಾರ (Modi Govt) ಜನರ ಮೇಲೆ ಕಾಳಜಿ ಇಲ್ಲದೆ, ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
ಗ್ಯಾಸ್ ಬೆಲೆ ಏರಿಕೆ (Gas Price Hike) ವಿಚಾರವಾಗಿ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವಾಗಲೂ ಜನವಿರೋಧಿ ನೀತಿಯನ್ನ ಅನುಸರಿಸಿಕೊಂಡು ಬಂದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗಲೂ ಕೂಡ ಜನರಿಗೆ ಲಾಭ ಆಗುವ ಹಾಗೆ ಮಾಡಲಿಲ್ಲ. ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗಲೂ ಕೂಡ ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡಿದ್ದರು. ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಜಾಸ್ತಿ ಆಗಿದೆ. ಈಗ ಬೆಲೆ ಜಾಸ್ತಿ ಮಾಡಿದ್ದಾರೆ. ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗ ಜನರಿಗೆ ಬೆಲೆ ಕಡಿಮೆ ಮಾಡಿದ್ರೆ ಜನರಿಗೆ ಹೊರೆ ಆಗುತ್ತಿರಲಿಲ್ಲ. ಇದು ಜನರಿಗೆ ಹೊರೆ ಆಗುತ್ತೆ, ಇದರಿಂದ ಆರ್ಥಿಕ ವ್ಯವಸ್ಥೆ ಮೇಲೂ ಪರಿಣಾಮ ಬೀರುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಿಟ್ಲರ್ನಿಂದ ಸ್ಫೂರ್ತಿ ಪಡೆದು ಒತ್ತುವರಿ ವಿರೋಧಿ ಪಡೆಗೆ ಹೈಡ್ರಾ ಎಂದು ಹೆಸರಿಟ್ಟಿದ್ದೇವೆ – ರೇವಂತ್ ರೆಡ್ಡಿ
ಇನ್ನು ಕಾಕ್ರೋಚ್ ಜನತಾ ಪಕ್ಷದವರ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡಲು ಅವಕಾಶ ಇದೆ, ಹಕ್ಕಿದೆ. ಅವರು ಒಳ್ಳೆಯ ಉದ್ದೇಶ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಾಗಿ ಅವರು ಪ್ರತಿಭಟನೆ ಮಾಡಲಿ ಎಂದು ಬ್ಯಾಟ್ ಬೀಸಿದರು. ಇದನ್ನೂ ಓದಿ: ಪೋಕ್ಸೊ ಕೇಸ್ನಲ್ಲಿ ಲಂಚ ಪಡೆಯುತ್ತಿದ್ದ ಕಾನ್ಸ್ಟೇಬಲ್ ‘ಲೋಕಾ’ ಬಲೆಗೆ
