ಉಗ್ರರ ದಾಳಿಯನ್ನೂ ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಸ್ಥಿತಿಗೆ ಮೋದಿ ಸರ್ಕಾರ ಬಂದಿದೆ: ವೀರಪ್ಪ ಮೊಯ್ಲಿ

Public TV
1 Min Read
ckb veerappa moyli 1
-ಮತೀಯ ಧೋರಣೆಗಳಲ್ಲಿ ರಾಜಕೀಯ ಮಾಡುವುದೇ ಬಿಜೆಪಿಯ ಕೆಲಸ

ಚಿಕ್ಕಬಳ್ಳಾಪುರ: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ 40ಕ್ಕೂ ಹೆಚ್ಚು ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಅದನ್ನೂ ಕೂಡ ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಸ್ಥಿತಿಗೆ ಈಗಿನ ಮೋದಿ ಸರ್ಕಾರ ಬಂದಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಡಾ. ಎಂ.ವೀರಪ್ಪ ಮೊಯ್ಲಿ ಅವರು ಕಿಡಿಕಾರಿದ್ದಾರೆ.

ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ದಿಶಾ ಕಮಿಟಿ ಸಭೆ ನಡೆಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ನೋಡಿದರೆ ಮೋದಿಗೆ ಭಯ ಆತಂಕ ಶುರುವಾಗಿದೆ. ವಿಪಕ್ಷಗಳು ಒಗ್ಗಟ್ಟಿನಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದೆ. ಈ ಬಾರಿ ರಾಹುಲ್ ಗಾಂಧಿ ಪ್ರಧಾನಿಯಾಗ್ತಾರೆ. ಇದರಿಂದ ಹತಾಶಗೊಂಡ ಮೋದಿ ಹಾಗೂ ಅಮಿತ್ ಶಾ ಅವರು ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯನ್ನ ರಾಜಕೀಯಕ್ಕೆ ಬಳಸಿಕೊಳ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ckb veerappa moyli

ಸಮ್ಮಿಶ್ರ ಸರ್ಕಾರ ಹಾಗೂ ಉಭಯ ಪಕ್ಷಗಳಲ್ಲಿ ಯಾವುದೇ ಗೊಂದಲಗಳಿಲ್ಲ. ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆಗೆ ಸಂಬಂಧಪಟ್ಟಂತೆ ಯಾವುದೇ ಭಿನ್ನಮತ ಇಲ್ಲ. ಜೆಡಿಎಸ್, ಕಾಂಗ್ರೆಸ್ ಹೊಂದಾಣಿಕೆಯಿಂದ ರಾಜ್ಯದಲ್ಲಿ 20ಕ್ಕೂ ಹೆಚ್ಚು ಎಂ.ಪಿ. ಸೀಟುಗಳನ್ನು ಗೆಲ್ಲುತ್ತೇವೆ ಇದರಿಂದ ಅಮಿತ್ ಶಾ ಹತಾಶರಾಗಿದ್ದಾರೆ. ಆದರಿಂದ ರಾಜ್ಯದಲ್ಲಿ 23 ಸೀಟು ಗೆದ್ದರೆ ರಾಜ್ಯ ಸರ್ಕಾರ ಬದಲಾಗುತ್ತೆ ಎಂದು ಹೇಳಿ, ಜನರಿಗೆ ಆಮಿಷ ಒಡ್ಡಿ ಮೋಸ ಮಾಡ್ತಿದ್ದಾರೆ ಅಂತ ಬಿಜೆಪಿ ವಿರುದ್ಧ ವೀರಪ್ಪ ಮೊಯ್ಲಿ ಹರಿಹಾಯ್ದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *