ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಬಿಜೆಪಿ (BJP) ಸರ್ಕಾರ ಮೀಸಲಾತಿಯನ್ನು ಕಿತ್ತುಕೊಳ್ಳಲು ಹಿಂಜರಿಯುವುದಿಲ್ಲ. ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (EWS) 10 ಪ್ರತಿಶತ ಮೀಸಲಾತಿ ಒದಗಿಸುವ 103ನೇ ತಿದ್ದುಪಡಿಯು ಮೀಸಲಾತಿಯನ್ನು ದುರ್ಬಲಗೊಳಿಸುವ ಪ್ರಯತ್ನದ ಭಾಗವಾಗಿದೆ ಎಂದು ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಹೇಳಿದ್ದಾರೆ.
ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ (Congress) ಉದ್ದೇಶಪೂರ್ವಕವಾಗಿ ಸಂವಿಧಾನ ಅಪಾಯದಲ್ಲಿದೆ. ಲೋಕಸಭೆ ಚುನಾವಣೆಯ ನಂತರ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂಬ ಅಪಪ್ರಚಾರವನ್ನು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಮಾಡಿದೆಯೇ ಎಂದು ಖಾಸಗಿ ಸಂದರ್ಶನದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು: ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ
ಬಿಜೆಪಿ ಸಂವಿಧಾನವನ್ನು ತಿದ್ದುಪಡಿ ಮಾಡುತ್ತದೆ. ಅವರು ತಯಾರಿ ನಡೆಸುತ್ತಿದ್ದರೂ, ಈಗ ಸಾರ್ವತ್ರಿಕ ಚುನಾವಣೆಯಲ್ಲಿ ಬಹುಮತ ಸಿಗದಿದ್ದರೂ ಬಿಜೆಪಿ ಸಂವಿಧಾನ ತಿದ್ದುಪಡಿಗೆ ಮುಂದಾಗಿದೆ ಎಂದು ಹೇಳಿದರು. ಇನ್ನು ಇಡಬ್ಲ್ಯುಎಸ್ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಪ್ರಸ್ತಾಪಿಸಿ, ಸುಪ್ರೀಂ ಕೋರ್ಟ್ 3:2 ಆದೇಶ ನೀಡಿದೆ. ಭಿನ್ನ ಆದೇಶ ನೀಡಿದ ಆದೇಶಗಳನ್ನು ನೀವು ಓದಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಜಾಮೀನು
ಚುನಾವಣೆ ವೇಳೆ ಪ್ರತಿಪಕ್ಷ ನಾಯಕರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ನಮ್ಮ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಯಿತು. ನೀವು ದೇಶದ ವಿರೋಧ ಪಕ್ಷಗಳ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವುದನ್ನು ಒಪ್ಪಿಕೊಳ್ಳಬಹುದೇ? ನೀವು ಅದನ್ನು ಮುಕ್ತ ಮತ್ತು ನ್ಯಾಯಯುತ ಎಂದು ಕರೆಯುತ್ತೀರಾ? ಎಂದು ಕೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯನವ್ರೆ ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ: ಜಗ್ಗೇಶ್