Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಈ ವರ್ಷದಿಂದಲೇ ಮುಸ್ಲಿಮರಿಗೆ ನೀಡಲಾಗ್ತಿದ್ದ ಹಜ್ ಸಬ್ಸಿಡಿ ರದ್ದು: ಅಬ್ಬಾಸ್ ನಖ್ವಿ

Public TV
Last updated: January 16, 2018 6:16 pm
Public TV
Share
3 Min Read
mecca haj
SHARE

ನವದೆಹಲಿ: ಹಜ್ ಯಾತ್ರೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೀಡುತ್ತಿದ್ದ ಸಹಾಯಧನ ಈ ವರ್ಷದಿಂದ ರದ್ದಾಗಿದೆ ಎಂದು ಮಂಗಳವಾರ ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ರಚಿಸಿದ ಸಮಿತಿಯ ಶಿಫಾರಸುಗಳ ಜಾರಿ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿ ಮಾತನಾಡಿದ ಅವರು, 2018 ರಿಂದಲೇ ಹಜ್ ಯಾತ್ರೆಗೆ ನೀಡುತ್ತಿದ್ದ ಸಹಾಯಧನವನ್ನು ರದ್ದು ಪಡಿಸಲಾಗಿದ್ದು, ಈ ಹಣವನ್ನು ಅಲ್ಪಸಂಖ್ಯಾತ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳೆಯರ ಅಭಿವೃದ್ಧಿಗೆ ಬಳಸುವುದಾಗಿ ತಿಳಿಸಿದರು.

mukhtar abbas naqvi

ಕೇಂದ್ರ ಸರ್ಕಾರ ಈಗಾಗಲೇ ಮುಸ್ಲಿಂ ಮಹಿಳೆಯರ ಹಜ್ ಯಾತ್ರೆಗೆ ಸಂಬಂಧಿಸಿದಂತೆ 45ಕ್ಕಿಂತ ಹೆಚ್ಚು ವರ್ಷ ವಯಸ್ಸಾಗಿರುವ ಮಹಿಳೆಯರು ಪುರುಷರು ಜೊತೆ ಇಲ್ಲದೆ ಕನಿಷ್ಠ ನಾಲ್ಕು ಮಂದಿಯ ಗುಂಪಿನಲ್ಲಿ ಹೋಗುವುದಕ್ಕೆ ಅವಕಾಶ ಕಲ್ಪಿಸಿದ ಮರು ದಿನವೇ ಸಬ್ಸಿಡಿ ರದ್ದು ಮಾಡುವ ನಿರ್ಣಯವನ್ನು ಘೋಷಿಸಿದೆ.

ಕೇಂದ್ರ ಅಲ್ಪಸಂಖ್ಯಾತ ಅಭಿವೃದ್ಧಿ ಸಚಿವಾಲಯ ಕಳೆದ ವರ್ಷ ಹಜ್ ಯಾತ್ರೆ ಕೈಗೊಳ್ಳುವ 2018-22 ರ ವರ್ಷದ ನಿಯಮಗಳನ್ನು ರೂಪಿಸಲು ಕೇಂದ್ರದ ಮಾಜಿ ಕಾರ್ಯದರ್ಶಿ ಅಫ್ಜಲ್ ಅಮಾನುಲ್ಲಾ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿತ್ತು. ಈ ಸಮಿತಿ ನೀಡಿದ ಶಿಪಾರಸ್ಸುಗಳ ಆಧಾರದ ಮೇಲೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಅಫ್ಜಲ್ ಅಮಾನುಲ್ಲಾ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ 2018ರ ಹಜ್ ಯಾತ್ರೆಯು ಹೊಸ ನಿಯಮಗಳು ರೂಪುಗೊಳ್ಳುತ್ತವೆ. ಈ ಸಮಿತಿಯ ನಿಯಮಗಳು ಉತ್ತಮವಾಗಿದ್ದು, ಪಾರದರ್ಶಕ ಮತ್ತು ಜನಸ್ನೇಹಿಯಾಗಿವೆ. ಅಲ್ಲದೇ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಾತರಿಪಡಿಸುತ್ತದೆ. ಅಲ್ಲದೇ ಈ ನಿಯಮಗಳು ಅಲ್ಪ ಸಂಖ್ಯಾತರ ಘನತೆ ಹಾಗೂ ಮನಃಪೂರ್ವಕವಾಗಿ ಅಧಿಕಾರ ನೀಡುವುದು ಸಮಿತಿ ನೀತಿ ಭಾಗವಾಗಿದೆ ಎಂದು ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಸ್ಪಷ್ಟಪಡಿಸಿದರು.

ani tweet 1

ಸೌದಿ ಸರ್ಕಾರದ ಜೊತೆ ರಾಜತಾಂತ್ರಿಕ ಸಂಬಂಧ ಈಗ ಮತ್ತಷ್ಟು ಉತ್ತಮವಾಗಿರುವ ಕಾರಣ 2018ರಲ್ಲಿ ಹೆಚ್ಚುವರಿಯಾಗಿ 5 ಸಾವಿರ ಮಂದಿ ಯಾತ್ರೆಗೆ ಅವಕಾಶ ನೀಡಿದೆ. ಇದರಿಂದಾಗಿ ಈ ವರ್ಷ 1,75,025 ಮಂದಿ ಹಜ್ ಯಾತ್ರೆಯನ್ನು ಕೈಗೊಳ್ಳಲಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹೆಚ್ಚುವರಿಯಾಗಿ 40 ಸಾವಿರ ಮಂದಿಗೆ ಅವಕಾಶ ಸಿಕ್ಕಿದ್ದು, ಸ್ವಾತಂತ್ರ್ಯ ಸಿಕ್ಕಿದ ಬಳಿಕ ಅತಿ ಹೆಚ್ಚು ಮಂದಿ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ನಖ್ವಿ ತಿಳಿಸಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿ 1,36,020 ಮಂದಿ ಹಜ್ ಯಾತ್ರೆಯನ್ನು ಕೈಗೊಂಡಿದ್ದರೆ ನಮ್ಮ ಸರ್ಕಾರದ ಅವಧಿಯಲ್ಲಿ ಈ ಸಂಖ್ಯೆ 1,75,025ಕ್ಕೆ ಏರಿಕೆಯಾಗಿದೆ ಎಂದು ನಖ್ವಿ ಹೇಳಿದರು.

ani tweet 2

ರೋಷನ್ ಬೇಗ್ ಸ್ವಾಗತ: ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ರಾಜ್ಯ ವಕ್ಫ್ ಖಾತೆಯ ಸಚಿವ ರೋಷನ್ ಬೇಗ್ ಹೇಳಿದ್ದಾರೆ. ಹಜ್ ಪವಿತ್ರ ಯಾತ್ರೆಯಾಗಿದ್ದು, ಬೇರೆಯವರಿಂದ ಸಹಾಯ ಪಡೆದು ಯಾತ್ರೆ ಹೋಗಬಾರದು ಎಂದು ಅವರು ಅಭಿಪ್ರಾಯಪಟ್ಟರು.

ಸುಪ್ರೀಂಕೋರ್ಟ್ ಹೇಳಿದ್ದೇನು?
ಹಜ್ ಸಬ್ಸಿಡಿ ಹೆಸರಿನಲ್ಲಿ ಭಾರೀ ಅಕ್ರಮಗಳು ನಡೆಯುತ್ತಿದ್ದು, ತಲುಪುಬೇಕಾದವರಿಗೆ ಸಹಾಯಧನ ತಲುಪದೇ ಬೇರೆ ಯಾರಿಗೋ ತಲುಪುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿತ್ತು. 2022ರೊಳಗಾಗಿ ಹಜ್ ಸಬ್ಸಿಡಿಯನ್ನು ಹಂತ ಹಂತವಾಗಿ ಸ್ಥಗಿತಗೊಳ್ಳಿಸಬೇಕೆಂದು 2012ರಲ್ಲಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು. ಖರ್ಚುಗಳನ್ನು ಭರಿಸಲು ಸಾಧ್ಯವಿರುವ ಮಂದಿ ಮಾತ್ರ ಹಜ್ ಯಾತ್ರೆಯನ್ನು ಮಾಡಬೇಕು ಎಂದು ಕುರಾನ್ ಹೇಳುತ್ತದೆ. ಹೀಗಾಗಿ ಸಬ್ಸಿಡಿ ಪಡೆದು ಯಾತ್ರೆ ಮಾಡುವುದು ಕುರಾನ್ ಬೋಧನೆಗೆ ವಿರುದ್ಧವಾಗುತ್ತದೆ ಅಲ್ಲವೇ ಎಂದು ಸುಪ್ರೀಂ ಪ್ರಶ್ನಿಸಿತ್ತು. ಹಜ್ ಯಾತ್ರೆಗೆ ಬಳಸುವ ಹಣವನ್ನು ಅಲ್ಪಸಂಖ್ಯಾತರ ಶಿಕ್ಷಣ, ಅಭಿವೃದ್ಧಿಗೆ ಬಳಸಬೇಕೆಂದು ಸಲಹೆ ನೀಡಿತ್ತು. 2012ರ ತನಕ ಪ್ರತೀ ವರ್ಷ ಹಜ್ ಯಾತ್ರೆಗೆ ಸುಮಾರು 650 ಕೋಟಿ ರೂ. ಮೀಸಲಿಡಲಾಗುತ್ತಿತ್ತು. ಸುಪ್ರೀಂ ಆದೇಶ ಬಳಿಕ ಇದನ್ನು 450 ಕೋಟಿ ರೂ. ಗೆ ಕಡಿತಗೊಳಿಸಲಾಗಿತ್ತು.

mecca haj 3

ಅಫ್ಜಲ್ ಅಮಾನುಲ್ಲಾ ಸಮಿತಿಯ ಶಿಫಾರಸ್ಸುಗಳು ಏನಿತ್ತು?
ಹಜ್ ಯಾತ್ರೆ ಕೈಗೊಳ್ಳಲು ಇದುವರೆಗೂ ವಿಮಾನ ಪ್ರಯಾಣದಲ್ಲಿ ಮಾತ್ರ ಅವಕಾಶ ನೀಡಲಾಗುತ್ತಿದೆ. ಇದರ ಜೊತೆಗೆ ಹಡಗು ಯಾನದ ಮೂಲಕ ಹಜ್ ಯಾತ್ರೆ ಕೈಗೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು.

ಯಾತ್ರೆಯ ವೇಳೆ ಮಹಿಳೆಯ ಯಾತ್ರಿಕರ ಜೊತೆ ಪುರುಷ ಸಂಬಂಧಿ ಇರಬೇಕು ಎಂಬ ನಿಯಮವನ್ನು ರದ್ದಾಗಬೇಕು. 45ಕ್ಕಿಂತ ಹೆಚ್ಚು ವರ್ಷ ಮೇಲ್ಪಟ್ಟ ಮಹಿಳೆಯರು ಪುರುಷರು ಜೊತೆ ಇಲ್ಲದೆ ಕನಿಷ್ಠ, ನಾಲ್ಕು ಮಂದಿಯ ಗುಂಪಿನಲ್ಲಿ ಹೋಗುವುದಕ್ಕೆ ಅವಕಾಶ ಕಲ್ಪಿಸಿಕೊಡಬೇಕು.

mecca haj 2

mukhtar abbas naqvi2

TAGGED:Central GovernmentHajMinister Abbas NaqviMinistry of Minority AffairsNew DelhiPublic TVSubsidyYatraಕೇಂದ್ರ ಅಲ್ಪಸಂಖ್ಯಾತ ಸಚಿವಾಲಯಕೇಂದ್ರ ಸರ್ಕಾರನವದೆಹಲಿಪಬ್ಲಿಕ್ ಟಿವಿಯಾತ್ರೆಸಚಿವ ಅಬ್ಬಾಸ್ ನಖ್ವಿಸಹಾಯಧನಹಜ್
Share This Article
Facebook Whatsapp Whatsapp Telegram

You Might Also Like

DK Shivakumar 9
Districts

ಜಿಲ್ಲೆಯ ಹೆಸರು ಬದಲಾವಣೆಯಿಂದ ಜನಜೀವನ ಬದಲಾವಣೆ: ಡಿಕೆಶಿ

Public TV
By Public TV
14 minutes ago
Raichuru Program
Districts

ಕಲಂ 371J ದಶಮಾನೋತ್ಸವ, ಬುಡಕಟ್ಟು ಉತ್ಸವ – ನಾಳೆ ರಾಯಚೂರಿಗೆ ಸಿಎಂ, ಡಿಸಿಎಂ

Public TV
By Public TV
34 minutes ago
Darshan Lady Fans
Cinema

ದರ್ಶನ್ ನೋಡಲು ಮನೆ ಬಳಿ ಕಿಕ್ಕಿರಿದು ಸೇರಿದ ಲೇಡಿಫ್ಯಾನ್ಸ್ !

Public TV
By Public TV
36 minutes ago
Explainer Chinas rare earth export curbs hit the auto industry india worldwide Electric Vehicle
Automobile

Explainer| ಅಪರೂಪದ ಭೂ ಖನಿಜ ರಫ್ತಿಗೆ ಚೀನಾ ನಿಷೇಧ: ಭಾರತದ ಮೇಲೆ ಪರಿಣಾಮ ಏನು?

Public TV
By Public TV
55 minutes ago
Weather
Bengaluru City

ಮುಂದಿನ 3 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

Public TV
By Public TV
58 minutes ago
blackbox
Explainer

Explainer: ವಿಮಾನ ಸುಟ್ಟು ಬೂದಿಯಾದರೂ ‘ಬ್ಲ್ಯಾಕ್‌ಬಾಕ್ಸ್‌’ಗೆ ಏನಾಗಲ್ಲ – ಏನಿದು ಪೆಟ್ಟಿಗೆ? ಫ್ಲೈಟ್‌ ಆಕ್ಸಿಡೆಂಟ್‌ಗಳಲ್ಲಿ ಏಕೆ ಮುಖ್ಯ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?