Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಯವರು ಆರ್‌ಎಸ್‌ಎಸ್‌ನ ಕೈಗೊಂಬೆಯಾಗಿ ನಡೆದುಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೋದಿಯವರು ಆರ್‌ಎಸ್‌ಎಸ್‌ನ ಕೈಗೊಂಬೆಯಾಗಿ ನಡೆದುಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

Bengaluru City

ಮೋದಿಯವರು ಆರ್‌ಎಸ್‌ಎಸ್‌ನ ಕೈಗೊಂಬೆಯಾಗಿ ನಡೆದುಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

Public TV
Last updated: January 26, 2024 2:26 pm
Public TV
Share
3 Min Read
KPCC REPUBLIC DAY 2
SHARE

– ಇವತ್ತು ಸಂವಿಧಾನ ನಡೆಸುತ್ತಿರುವ ಜನ ಸರಿ ಇಲ್ಲ

ಬೆಂಗಳೂರು: ಮೋದಿಯವರು (Narendra Modi) ಆರ್‌ಎಸ್‌ಎಸ್‌ನ ಕೈಗೊಂಬೆಯಾಗಿ ನಡೆದುಕೊಂಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge)  ಕಿಡಿಕಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರೆವೇರಿಸಿ, ಸಿಎಂ ಸಿದ್ದರಾಮಯ್ಯ (Siddaramaiah), ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿಕೆಶಿ(D.K. Shivakumar) ಉಪಸ್ಥಿತಿಯಲ್ಲಿ ಮಾತನಾಡಿದ ಅವರು, ಜನವರಿ 26 ನಮ್ಮ ಜೀವನದಲ್ಲಿ ಹಾಗೂ ಭಾರತದ ಇತಿಹಾಸದಲ್ಲಿ ವಿಶೇಷ ದಿನ. ಈ ದೇಶದ ಸಂವಿಧಾನ ಅಸ್ತಿತ್ವದಲ್ಲಿ ಇಲ್ಲದೇ ಹೋಗಿದ್ದರೆ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಆಗುತ್ತಿರಲಿಲ್ಲ. ಇಷ್ಟೊಂದು ಪ್ರಯತ್ನ ಮಾಡಿ ಸ್ವಾತಂತ್ರ‍್ಯಕ್ಕೆ ಹೋರಾಟ ಮಾಡಿ ಸಂವಿಧಾನ ರಚಿಸಿದರು. ದೇಶದ ಸಂವಿಧಾನದಲ್ಲಿ ಇರುವ ಪ್ರಮುಖ ಅಂಶಗಳು ಸಮಾನತೆ, ಭ್ರಾತೃತ್ವತೆ, ಜಾತ್ಯಾತೀತ ತತ್ವಗಳು. ಇದೆಲ್ಲ ಕೂಡಿ ನಮ್ಮ ಸಂವಿಧಾನ ಆಗಿದೆ ಎಂದಿದ್ದಾರೆ. ಇದನ್ನೂ ಓದಿ: Republic Day: ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ಗೌರವ

Siddaramaiha

ಇವತ್ತು ಸಂವಿಧಾನ ತಿರುಚಿ ಬದಲಾವಣೆ ಮಾಡಬೇಕು ಎಂಬ ಬಹಳ ದೊಡ್ಡ ಕುತಂತ್ರವನ್ನು ಆರ್‌ಎಸ್‌ಎಸ್ ಹಾಗೂ ಬಿಜೆಪಿ ಮಾಡುತ್ತಿದೆ. ಸ್ವಾಯತ್ತ ಸಂಸ್ಥೆಗಳನ್ನೆಲ್ಲ ನಾಶ ಮಾಡಬೇಕು ಅಂತ ಬಿಜೆಪಿ ಸರ್ವ ಪ್ರಯತ್ನ ಮಾಡ್ತಿದೆ. ಇದರಿಂದ ನ್ಯಾಯಾಂಗ ಹಾಗೂ ಜಾತ್ಯಾತೀತ ತತ್ವಕ್ಕೆ ದೊಡ್ಡ ಪೆಟ್ಟು ಬೀಳ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Republic Day: ನುಡಿದಂತೆ ನಡೆದಿರುವ ಸರ್ಕಾರ 5 ಗ್ಯಾರಂಟಿ ಯಶಸ್ವಿಯಾಗಿ ಜಾರಿ ಮಾಡಿದೆ: ಗೆಹ್ಲೋಟ್

ಜೊತೆಗೆ ಆರ್‌ಎಸ್‌ಎಸ್ ನವರು ನಾವೇ ದೇಶ ಕಾಪಾಡುವವರು. ಬೇರೆ ಯಾರೂ ಇಲ್ಲ ಅಂತ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸ್ವಾತಂತ್ರ‍್ಯ ಬಂದಿದ್ದು, ತಂದಿದ್ದು ಕಾಂಗ್ರೆಸ್ ಪಕ್ಷ. ಕರ್ನಾಟಕದ ಅನೇಕ ಮಹಾಪುರುಷರು ಇದಕ್ಕೆ ಹೋರಾಟ ಮಾಡಿ ಸ್ವಾತಂತ್ರ‍್ಯವನ್ನು ತಂದಿದ್ದಾರೆ. ಆದರೆ ಇವತ್ತು ಈ ಬಿಜೆಪಿ, ಪ್ರಧಾನಮಂತ್ರಿ ಮತ್ತು ಗೃಹ ಮಂತ್ರಿ ಸೇರಿ ತಮ್ಮ ಕೈಗೊಂಬೆನ್ನಾಗಿ ಮಾಡಿಟ್ಟುಕೊಳ್ಳಬೇಕು ಅಂತ ಸರ್ವ ಪ್ರಯತ್ನ ನಡೆದಿದೆ. ಸ್ವಾತಂತ್ರ‍್ಯ ಸಂವಿಧಾನ ಉಳಿದರೆ ಮುಂದಿನ ಪೀಳಿಗೆಗೆ ಭವಿಷ್ಯಕ್ಕೆ ಒಳ್ಳೆಯದಾಗುತ್ತದೆ. ಪ್ರಜಾಪ್ರಭುತ್ವ ಇಲ್ಲ ಅಥವಾ ಸಂವಿಧಾನ ಇಲ್ಲ ಅಂದ್ರೆ ನಮಗೆ ಯಾರಿಗೂ ಕೂಡ ಮುಂದೆ ಅವಕಾಶ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 5th Republic Day: ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ – ಡಿಕೆಶಿ

KPCC REPUBLIC DAY 1

ಇವತ್ತು ಸಂವಿಧಾನ ನಡೆಸುತ್ತಿರುವ ಜನ ಸರಿ ಇಲ್ಲ. ಸ್ವಾತಂತ್ರ್ಯ ಬಂದ ದಿನದಿಂದ 2014 ರವರೆಗೆ ದೇಶದಲ್ಲಿ 55 ಲಕ್ಷ ಕೋಟಿ ರೂಪಾಯಿ ಸಾಲ ಇತ್ತು. ಈಗ ಇದು ಒಂದು ಕೋಟಿ 50 ಲಕ್ಷ ರೂಪಾಯಿ ಹೆಚ್ಚಾಗಿದೆ. ನಮ್ಮ ಎಲ್ಲಾ ಅನುಭವದಿಂದ ದೇಶಕ್ಕೆ ಒಳ್ಳೆಯ ಕೆಲಸವನ್ನು ನಮ್ಮ ನಾಯಕರು ಮಾಡಿಕೊಟ್ಟಿದ್ದಾರೆ. ನಮ್ಮ ಯುವಕರಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಧಕ್ಕೆ ಇದೆ ಎಂದು ಯುವಕರಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 75ನೇ ಗಣರಾಜ್ಯೋತ್ಸವದ ಸಂಭ್ರಮ – ಕರ್ತವ್ಯ ಪಥದಲ್ಲಿ ಗಮನ ಸೆಳೆಯಲಿದೆ ʻನಾರಿ ಶಕ್ತಿʼ

ಜಗದೀಶ್ ಶೆಟ್ಟರ್ ಕುರಿತು ಪ್ರತಿಕ್ರಿಯಿಸಿ, ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳಬೇಕಾದಾಗ ಯೋಚನೆ ಮಾಡಬೇಕು. ಅವರ ಹಿನ್ನೆಲೆ ಏನು, ಸಿದ್ದಾಂತ ಏನು, ತತ್ವ ಏನು ಎಂಬುದನ್ನು ಅರಿತುಕೊಳ್ಳಬೇಕು. ನಮ್ಮ ತತ್ವ ಸಿದ್ದಾಂತಕ್ಕೆ ಸೂಕ್ತ ಆಗುವವರನ್ನು ನೋಡಿದ ನಂತರ ಮಾತ್ರ ಪಕ್ಷಕೆ ಸೇರಿಸಿಕೊಳ್ಳಬೇಕು. ಯಾಕಂದ್ರೆ ಇವತ್ತು ಬಂದ ನಾಳೆ ಹೋದ ಎಂಬುದು ಆಗಬಾರದು. ಶೆಟ್ಟರ್ ವಾಪಸ್ ಹೋಗಿದ್ದು ಲೋಕಲ್ ಇಶ್ಯು. ಅದರ ಬಗ್ಗೆ ವಿವರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಕೋಲಾರದ ಇಬ್ಬರು ಮಹಿಳೆಯರಿಗೆ ಪ್ರಧಾನಿ ಮೋದಿ ಸನ್ಮಾನ

TAGGED:bjpChief Minister Siddaramaiahcongressd k shivakumarmallikarjun khargenarendra modiಕಾಂಗ್ರೆಸ್ಡಿ.ಕೆ.ಶಿವಕುಮಾರ್ನರೇಂದ್ರ ಮೋದಿಬಿಜೆಪಿಮಲ್ಲಿಕಾರ್ಜುನ ಖರ್ಗೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
13 minutes ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
40 minutes ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
42 minutes ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
1 hour ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
2 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?