Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಯವರ ವ್ಯಕ್ತಿತ್ವ, ಜೀವನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೋದಿಯವರ ವ್ಯಕ್ತಿತ್ವ, ಜೀವನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

Bengaluru City

ಮೋದಿಯವರ ವ್ಯಕ್ತಿತ್ವ, ಜೀವನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

Public TV
Last updated: June 27, 2022 8:14 pm
Public TV
Share
3 Min Read
Thawar Chand Gehlot 2
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಾಲ್ಯದಿಂದ ದೇಶದ ಪ್ರಧಾನಿಯಾಗುವವರೆಗಿನ ಪ್ರಯಾಣವು ಕಷ್ಟಗಳು ಮತ್ತು ಕಠಿಣ ಪರಿಶ್ರಮದಿಂದ ಕೂಡಿದೆ. ಪ್ರತಿಯೊಬ್ಬ ವ್ಯಕ್ತಿಯೂ ಮೋದಿ ಅವರ ವ್ಯಕ್ತಿತ್ವ ಮತ್ತು ಜೀವನದಿಂದ ಸ್ಫೂರ್ತಿ ಪಡೆಯಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ‘ಮೋದಿ @20 ಡ್ರೀಮ್ಸ್ ಮೀಟ್ ಡೆಲಿವರಿ’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ವೇಳೆ ಅವರು, ರೂಪಾ ಪಬ್ಲಿಕೇಷನ್ ತಂದಿರುವ ‘ಮೋದಿ @20 ಡ್ರೀಮ್ಸ್ ಮೀಟ್ ಡೆಲಿವರಿ’ ಪುಸ್ತಕವನ್ನು ಅಧ್ಯಯನ ಮಾಡುವ ಮೂಲಕ, ಮೋದಿ ಅವರು ರಾಷ್ಟ್ರದ ಏಕತೆ-ಸಮಗ್ರತೆ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯವಾದಿ ಚಿಂತನೆಯೊಂದಿಗೆ ಮಾಡಿದ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯುತ್ತೀರಿ. ದೇಶದ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಜನರ ಚಿಂತನೆಯಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದರು. ಇದನ್ನೂ ಓದಿ: 52 ವರ್ಷಗಳ ಹಿಂದೆ ವಿಚ್ಛೇದನ – ದಂಪತಿಯನ್ನು ಮತ್ತೆ ಒಂದು ಮಾಡಿದ ಅದೇ ಕೋರ್ಟ್‌ 

An absolute pleasure to unveil the book ‘Modi @20– Dreams Meet Reality’ in the august presence of Governor Shri @TCGEHLOT Ji & other dignitaries today in Bengaluru.Hon’ble PM @narendramodi Ji’s life has a lot of lessons for all of us.#Modiat20 pic.twitter.com/qcqi0toGih

— Basavaraj S Bommai (@BSBommai) June 27, 2022

ಧಾರ್ಮಿಕ, ಆಧ್ಯಾತ್ಮಿಕ ಮತ್ತು ರಾಷ್ಟ್ರೀಯ ಚಿಂತನೆಯ ವ್ಯಕ್ತಿ. ಆತ್ಮಸಾಕ್ಷಿಯ, ಪ್ರಾಮಾಣಿಕ, ಅಸಾಧಾರಣ ವಾಕ್ಚಾತುರ್ಯ ಹೊಂದಿರುವ, ಸಾಮರಸ್ಯ ವ್ಯಕ್ತಿತ್ವ, ಶಿಸ್ತಿನ ಜೀವನ, ತ್ವರಿತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯ, ದೂರದೃಷ್ಟಿ, ಸಮರ್ಥ ನಾಯಕತ್ವ, ನಮ್ರತೆ ಮತ್ತು ಹೋರಾಟ, ಸಕಾರಾತ್ಮಕತೆ ಮತ್ತು ಧೈರ್ಯದ ಸಂಕೇತವಾಗಿರುವ ನರೇಂದ್ರ ಮೋದಿ ಅವರು ಜಾಗತಿಕ ವೇದಿಕೆಯಲ್ಲಿ ಭಾರತದ ಗುರುತನ್ನು ಶಕ್ತಿಯುತ ದೇಶವಾಗಿ ಮಾಡಿದವರು ಎಂದು ಪ್ರಶಂಸಿಸಿದರು.

ಮೋದಿ ಅವರು 12 ವರ್ಷಗಳ ಕಾಲ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅವರ ಪರಿಣಾಮಕಾರಿ ಕಾರ್ಯಶೈಲಿ, ಸೇವಾ ಆಧಾರಿತ ಕೆಲಸಗಳಿಂದಾಗಿ ಅವರು ಗುಜರಾತ್ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದರು. ಅವರ ಅಭಿವೃದ್ಧಿ ಮಂತ್ರ, ಅವರನ್ನು ಗುಜರಾತ್ ರಾಜ್ಯಕ್ಕೆ ಬ್ರಾಂಡ್ ಅಂಬಾಸಿಡರ್ ಮಾಡಿತು. ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಗುಜರಾತ್ ಮಾದರಿ ಅಭಿವೃದ್ಧಿ ಎಂದು ಖ್ಯಾತಿಯನ್ನು ಗಳಿಸಿವೆ ಎಂದು ವಿವರಿಸಿದರು.

NARENDRA MODI 4

ಇಂದು ಗುಜರಾತ್ ಮಾದರಿ ಅಭಿವೃದ್ಧಿ ಇತರ ರಾಜ್ಯಗಳಿಗೆ ಮಾದರಿಯಾಗಿದೆ. 1990ರಲ್ಲಿ ಮೋದಿ ಅವರು ಮಧ್ಯಪ್ರದೇಶದ ಉಸ್ತುವಾರಿ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದಾಗಿನಿಂದ ನನಗೆ ಪರಿಚಯವಿದೆ. 2013ರಲ್ಲಿ ನಡೆದ ಸಂಸತ್ತಿನ ಮಂಡಳಿಯ ಸಭೆಯಲ್ಲಿ, 2014ರ ಲೋಕಸಭೆ ಚುನಾವಣೆಯನ್ನು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎದುರಿಸಲಾಗುವುದು. ಅವರು ಪ್ರಧಾನಿ ಅಭ್ಯರ್ಥಿ ಎಂದು ನಿರ್ಧರಿಸಲಾಯಿತು, ಈ ನಿರ್ಧಾರದಲ್ಲಿ ಸಂಸತ್ತಿನ ಮಂಡಳಿಯ ಸದಸ್ಯನಾಗಿ ಭಾಗಿಯಾಗಿದ್ದೆ ಎಂದು ಸ್ಮರಿಸಿದರು.

ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ತ್ರಿವಳಿ ತಲಾಖ್ ರದ್ದತಿ, ಆರ್ಟಿಕಲ್ 370 ರದ್ದತಿ, ಜಿಎಸ್‍ಟಿ ಕಾನೂನು ಜಾರಿ, ನೋಟ್ ಬ್ಯಾನ್ ಇತ್ಯಾದಿ ಸೇರಿದಂತೆ ಹಲವು ಪ್ರಮುಖ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ದೇಶದ ವಿವಿಧ ಸಮಸ್ಯೆಗಳು, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಇತ್ಯಾದಿಗಳನ್ನು ಪರಿಹರಿಸಲು ಮೋದಿ ಅನೇಕ ಪ್ರಮುಖ ಯೋಜನೆಗಳನ್ನು ಮಾಡಿದರು. ಇದರಿಂದಾಗಿ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಪ್ರಯೋಜನ ಪಡೆದಿದ್ದಾರೆ ಎಂದರು.

PM is a visionary who foresees multiple benefits in a single new development. He knows demography of India & how to harness the power of youth. ‘Khelo India' led India to win highest medal tally in Olympics. He wants to build a national character rooted in our ethos.#Modiat20 pic.twitter.com/19dW4MJD8L

— Basavaraj S Bommai (@BSBommai) June 27, 2022

ಮೋದಿ ಅವರು ಸಂಪುಟ ಸಭೆಗಳಲ್ಲಿ ವಿಷಯಗಳನ್ನು ಬಹಿರಂಗವಾಗಿ ಚರ್ಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದರ ಫಲಿತಾಂಶ ಇಂದು ಜನರ ಮುಂದಿದೆ. ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮತ್ತು ‘ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್’ ಅವರ ಚಿಂತನೆಯು ಇಂದು ಭಾರತವನ್ನು ವಿಶ್ವದ ದೊಡ್ಡ ಶಕ್ತಿಗಳಲ್ಲಿ ಸೇರಿಸಿದೆ ಎಂದರು. ಇದನ್ನೂ ಓದಿ:  60 ಕಿ.ಮೀ ಒಳಗಿನ ಎಲ್ಲ ಟೋಲ್ ತೆರವಿಗೆ ಸೂಚಿಸಿದ್ರೂ ದ.ಕನ್ನಡ ಜಿಲ್ಲೆಯಲ್ಲಿದೆ 48 ಕಿ.ಮೀನಲ್ಲಿ 4 ಟೋಲ್ 

ಮೋದಿ ಅವರ ನಾಯಕತ್ವದಲ್ಲಿ, ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಲಸಿಕೆಗಳನ್ನು ತಯಾರಿಸುವ ಮೂಲಕ ದೇಶ ಮತ್ತು ವಿದೇಶಗಳಲ್ಲಿ ಬಳಕೆಗೆ ಲಸಿಕೆಗಳನ್ನು ಲಭ್ಯವಾಗುವಂತೆ ಮಾಡಿದ್ದು ಭಾರತವು ‘ವಾಸುದೇವ್ ಕುಟುಂಬಕಂ’ ಚಿಂತನೆಯಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಮೋದಿ ಅವರ ನೇತೃತ್ವದಲ್ಲಿ ರಚಿತವಾದ ಕೇಂದ್ರ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಸ್ಥಾನ ನೀಡಲಾಯಿತು. ಅವರ ಮಾರ್ಗದರ್ಶನ ಮತ್ತು ದಕ್ಷ ನಾಯಕತ್ವದಲ್ಲಿ, ದುರ್ಬಲ ವರ್ಗಗಳು, ಹಿರಿಯರು, ತೃತೀಯಲಿಂಗಿಗಳು ಮತ್ತು ದಿವ್ಯಾಂಗರ ಸಬಲೀಕರಣಕ್ಕಾಗಿ ನಾನು 7 ವರ್ಷಗಳ ಕಾಲ ಅನೇಕ ಮಹತ್ವದ ಕೆಲಸಗಳನ್ನು ಮಾಡಿದ್ದೇನೆ. ಆ ಸಮಯದಲ್ಲಿ 10 ಗಿನ್ನೆಸ್ ವಿಶ್ವ ದಾಖಲೆಗಳನ್ನು ಸಚಿವಾಲಯವು ಮಾಡಿದೆ ಎಂದು ಮಾಹಿತಿ ನೀಡಿದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆಯ ರಾಜ್ಯ ಸಚಿವ ಎಲ್.ಮುರುಗನ್, ಸಿಎಂ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಅಶ್ವಥ್ ನಾರಾಯಣ್, ವಿ.ಸೋಮಣ್ಣ, ಬಿ.ಸಿ.ಪಾಟೀಲ್, ಸೋಮಶೇಖರ್, ಕೆಎಫ್ ಡಿಸಿಎಲ್ ನ ಅಧ್ಯಕ್ಷರಾದ ತಾರಾ ಅನುರಾಧ, ಶಾಸಕರಾದ ಉದಯ್.ಬಿ ಗರುಡಾಚಾರ್, ಲೇಖಕರಾದ ಸುಧಾ ಮೂರ್ತಿ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv

TAGGED:bjpModi @ 20 Dreams Meet Deliveryprime minister narendra modithawar chand gehlotಥಾವರ್ ಚಂದ್ ಗೆಹ್ಲೋಟ್ಪ್ರಧಾನಿ ನರೇಂದ್ರ ಮೋದಿಬಿಜೆಪಿಮೋದಿ @20 ಡ್ರೀಮ್ಸ್ ಮೀಟ್ ಡೆಲಿವರಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
10 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
27 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
44 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
55 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
1 hour ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?