Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನನ್ನು ಸೋಲಿಸಿದ್ದು ಮೋದಿ, ಶಾ, ಆರ್‌ಎಸ್‌ಎಸ್‌: ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನನ್ನು ಸೋಲಿಸಿದ್ದು ಮೋದಿ, ಶಾ, ಆರ್‌ಎಸ್‌ಎಸ್‌: ಖರ್ಗೆ

Districts

ನನ್ನನ್ನು ಸೋಲಿಸಿದ್ದು ಮೋದಿ, ಶಾ, ಆರ್‌ಎಸ್‌ಎಸ್‌: ಖರ್ಗೆ

Public TV
Last updated: October 2, 2021 5:14 pm
Public TV
Share
5 Min Read
MALLIKARJUNA KHRGE
SHARE

-ಆರ್‌ಎಸ್‌ಎಸ್‌ ಸಿದ್ದಾಂತ ಎಲ್ಲರನ್ನು ಜೀವಿಸಲು ಬಿಡಲ್ಲ
-ನಾನು ರಾಜಕೀಯ ನಿವೃತ್ತಿ ಪಡೆಯಲ್ಲ

ಕಲಬುರಗಿ: ನನ್ನನ್ನು ಇಲ್ಲಿನ ಜನ ಹನ್ನೊಂದು ಬಾರಿ ಗೆಲ್ಲಿಸಿದ್ದೀರಿ. ಯಾವುದೋ ಕಾರಣದಿಂದ ನಾನು ಈ ಸಲ ಸೋತೆ. ನನ್ನ ಸೋಲಿಗೆ ಕಲಬುರಗಿ ಯ ಜನ ಕಾರಣರಲ್ಲ. ಬದಲಿಗೆ ಮೋದಿ, ಶಾ ಹಾಗೂ ಆರ್‌ಎಸ್‌ಎಸ್‌ನವರು ಕುತಂತ್ರ ಮಾಡಿ ಸೋಲಿಸಿದರು ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜನ ಖರ್ಗೆ ಹೇಳಿದ್ದಾರೆ.

MALLIKARJUNA KARGHE

ನಗರದ ಜೈ ಭವಾನಿ ಫಂಕ್ಷನ್ ಪ್ಯಾಲೇಸ್ ನಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಾವು ಜನರ ಹತ್ತಿರದಲ್ಲೇ ಇದ್ದು ಐದು ದಶಕಗಳ ಕಾಲ ಜನ ಸೇವೆ ಮಾಡಿಕೊಂಡಿದ್ದೇನೆ ಜನರಿಂದ ದೂರವಿದ್ದು ಜೀವನ ನಡೆಸುವುದು ಅಸಾಧ್ಯ. ಆದರೆ, ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ತಾವು ಕಳೆದ ಒಂದು ವರ್ಷ ನಾಲ್ಕು ತಿಂಗಳಿನಿಂದ ಕಲಬುರಗಿಯ ಪುಣ್ಯಭೂಮಿಗೆ ಬರಲಾಗಲಿಲ್ಲ ಎಂದು ಖರ್ಗೆ ತಾವು ತಾಯ್ನಾಡಿಗೆ ಬರದಿರುವ ಕಾರಣ ಬಿಚ್ಚಿಟ್ಟರು. ಇದನ್ನೂ ಓದಿ: ದಸರಾ ಉದ್ಘಾಟನೆ- ಎಸ್.ಎಂ.ಕೃಷ್ಣಾರನ್ನು ಅಧಿಕೃತವಾಗಿ ಆಹ್ವಾನಿಸಿದ ಸರ್ಕಾರ

NARENDRA MODIJI

ಇಷ್ಟು ದಿನ ನಾನು ಬರಲಾಗಲಿಲ್ಲ ದೇಶದ ಇಬ್ಬರು ಮಹಾನ್ ನಾಯಕರಾದ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ದಿನದಂದ ತಮ್ಮನ್ನೆಲ್ಲಾ ನೋಡುವ ಭಾಗ್ಯ ಇಂದು ಒದಗಿಬಂತು. ಸಂಸತ್ತಿನಲ್ಲೇ ಮೋದಿ ಬಹಿರಂಗವಾಗಿ ನನ್ನ ಸೋಲಿನ ಬಗ್ಗೆ ಹೇಳಿದ್ದರು. ಅದರಂತೆ ನಡೆದುಕೊಂಡು ಸೋಲಿಸಿದರು. ಅವರು ವಾರ್ನ್ ಮಾಡಿದ ನಂತರ ನಮ್ಮವರು ಎಚ್ಚರಗೊಳ್ಳಬೇಕಿತ್ತು. ಆದರೆ, ಅವರ ಕುತಂತ್ರ ಅರಿಯಲು ವಿಫಲರಾದರು ಎಂದು ಕಿಡಿಕಾರಿದರು.

amith shah

ಇತ್ತೀಚಿಗೆ ಪಿಎಂ ಮನೆಯಲ್ಲಿ ನಡೆದ ಮಾನವ ಹಕ್ಕುಗಳ ಕುರಿತಾದ ಸಭೆಯಲ್ಲಿ ನಾನು ಭಾಗವಹಿಸಿದ್ದೆ. ಆಗ ಮೋದಿ ಹೇಳಿದ್ದೇನೆಂದರೆ ಖರ್ಗೆಜೀ ನೀವು ಹಲವಾರು ವರ್ಷದಿಂದ ಚುನಾವಣೆ ಗೆಲ್ಲುತ್ತಲೆ ಬಂದಿದ್ದೀರಲ್ಲ ಎಂದರು. ಆಗ ನಾನು ಉತ್ತರಿಸಿದೆ, ಮೋದಿಜೀ ನಾನು ನಲವತ್ತೊಂಬತ್ತು ವರ್ಷದಿಂದ ಚುನಾವಣೆ ಗೆಲ್ಲುತ್ತಲೇ ಬಂದಿದ್ದೆ ನೀವು ಅಡ್ಡಗಾಲು ಹಾಕದೇ ಇದ್ದಿದ್ದರೆ ಸತತ ಐವತ್ತು ಬಾರಿ ಗೆದ್ದ ಜನಪ್ರತಿನಿಧಿ ಆಗುತ್ತಿದ್ದೆ ಎಂದು ಹೇಳಿರುವುದಾಗಿ ಹೇಳಿಕೊಂಡರು.  ಇದನ್ನೂ ಓದಿ: ಅಧಿಕಾರ ಇರ್ಲಿ ಇಲ್ಲದೇ ಇರಲಿ ನಾನು ರಾಹುಲ್, ಪ್ರಿಯಾಂಕಾ ಜೊತೆ ಇರುತ್ತೇನೆ: ಸಿಧು

MALLIKARJUNA KHARGE

ದಿನ ದಲಿತರು ಒಂದಾಗುವುದನ್ನು ಬಿಜೆಪಿ ಸಹಿಸುವುದಿಲ್ಲ. ಮೋದಿ, ಯೋಗಿ ಅವರು ದಲಿತರಿಗೆ ಹಿಂದುಳಿವರ್ಗದ ಎಷ್ಟು ಜನರಿಗೆ ಅಧಿಕಾರ ಕೊಟ್ಟಿದ್ದಾರೆ? ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಎಲ್ಲಾ ಜನಾಂಗದ ನಾಯಕರಿಗೆ ಮಹತ್ವದ ಖಾತೆ ಕೊಡಲಾಗಿತ್ತು. ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಪರವಾಗಿದೆ. ಆರ್ಟಿಕಲ್ 371 ಜೆ ದಂತಹ ಪ್ರಮುಖ ಬದಲಾವಣೆಯನ್ನು ಕಾಂಗ್ರೆಸ್ ತಂದಿದೆ. ಬಿಜೆಪಿ ಏನು ಮಾಡಿದೆ? ಮೋದಿ ಈಗಲೂ ನಮಗೆ ಕೇಳುತ್ತಾರೆ, ” ಸತ್ತರ್ ಸಾಲ್ ತುಮ್ನೆ ಕ್ಯಾ ಕೀಯಾ ” ಅಂತ ” ಅರೇ ಹಮ್ನೆ ಇತ್ನೆ ಕಿಯಾ ಇಸ್ ಲಿಯೇ ತುಮ್ ಜಿಂದಾ ಹೈ ” ನಮ್ಮ ಕಾಲದಲ್ಲಿ ಜಾರಿಗೆ ತಂದ ಯೋಜನೆಗಳಿಗೆ ತಡೆಹಿಡಿಯಲಾಗಿದೆ ಇಲ್ಲವೇ ಹೆಸರು ಬದಲಾಯಿಸಿರುವುದು ಮೋದಿ ಸಾಧನೆ. ಪೆಟ್ರೋಲ್ ಡಿಸೇಲ್, ಅಡುಗೆ ಅನಿಲ ಬೆಲೆ ಹೆಚ್ಚಾಗಿದೆ ಇದು ಬಿಜೆಪಿ ಹಾಗೂ ಮೋದಿ ಪ್ರಗತಿ ಎಂದು ಕುಟುಕಿದ ಅವರು ಬೆಲೆಗಳ ಹೆಚ್ಚಳ ಮಾಡಿರುವ ಮೋದಿ ಸರ್ಕಾರಕ್ಕೆ ಏಳು ವರ್ಷದಲ್ಲಿ 25 ಲಕ್ಷ ಕೋಟಿ ಲಾಭವಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅ. 7 ರಿಂದ13 ರವರೆಗೆ ನಿತ್ಯ ಸಂಜೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ: ಎಸ್.ಟಿ.ಸೋಮಶೇಖರ್

MALIKARJUNA KAHERGE

ಬಿಜೆಪಿ ಸರ್ಕಾರದ ಜನವಿರೋಧಿ ಧೋರಣೆ ಅನುಸರಿಸುತ್ತಿದ್ದರೂ ಸೋಷಿಯಲ್ ಮೀಡಿಯಾದಲ್ಲಿ ಮೋದಿ ಹೇಳಿದ ಸುಳ್ಳಗಳನ್ನೇ ಸತ್ಯ ಎಂದು ಬಿಂಬಿಸಿ ಹರಿಬಿಡಲಾಗುತ್ತಿದೆ. ನಾನು ಸಚಿವನಾಗಿದ್ದಾಗ ರೈಲ್ವೇಯಲ್ಲಿ 14.50 ಲಕ್ಷ ನೌಕರರು ಕೆಲಸ ಮಾಡುತ್ತಿದ್ದರು ಈಗ 12.76 ಲಕ್ಷಕ್ಕೆ ಇಳಿದಿದೆ. ನಾಲ್ಕು ಇನ್ಶೂರನ್ಸ್ ಕಂಪನಿಗಳಿಗೆ ಹೊಸ ಕಾನೂನು ತಂದು ತೊಂದರೆ ಕೊಡಲಾಗುತ್ತಿದೆ. ಸರ್ಕಾರಿ ಸ್ವಾಮ್ಯದ ಟೆಲಿಫೋನ್, ಬ್ಯಾಂಕ್, ಇನ್ಶೂರೆನ್ಸ್, ರೈಲ್ವೇ, ಬಿಇಎಲ್ ಕಂಪನಿಗಳಲ್ಲಿ ಸುಮಾರು ಮೂರು ಕೋಟಿ ಉದ್ಯೋಗ ಕಡಿತಗೊಳಿಸಲಾಗಿದೆ. ಇದನ್ನು ಸರ್ಕಾರವೇ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: 80 ಕಡೆ ದುರ್ಗಾಮೂರ್ತಿ ಪ್ರತಿಷ್ಠಾಪನೆಗೆ ಮನವಿ – ದಸರಾ ಮಾರ್ಗಸೂಚಿಗಾಗಿ ಎದುರುನೋಡ್ತಿರುವ ಬಿಬಿಎಂಪಿ

ಭೂ ಸಾಧಾರಣ ಕಾಯಿದೆ ತಂದು ಉಳುವವನೇ ಒಡೆಯ ಎಂದು ಮಾಡಿ ಭೂಮಿ ಇಲ್ಲದವರಿಗೆ ಭೂಮಿ ನೀಡಲಾಗಿತ್ತು. ಆದರೆ ಈಗ ಮೋದಿ ಅವರು ಯಾರು ಬೇಕಾದರೂ ಎಷ್ಟು ಬೇಕಾದರೂ ಭೂಮಿ ಖರೀದಿ ಮಾಡಲು ಅನುಕೂಲ ಮಾಡಿಕೊಟ್ಟುರು. ಶ್ರೀಮಂತರೇ ಹೆಚ್ಚು ಹೆಚ್ಚು ಭೂಮಿ ತೆಗೆದುಕೊಳ್ಳಲು ಅನುಮತಿಕೊಟ್ಟರು. ಇದರಿಂದಾಗಿ ಬಡವರು ಭೂಮಿ ಕಳೆದುಕೊಂಡು ಬಡವರಾದರು. ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದು ಯಾರು ಬೇಕಾದರೂ ಎಲ್ಲಿ ಬೇಕಾದರೂ ಖರೀದಿ ಮಾಡಲು ಅನುಮತಿಕೊಟ್ಟರು. ಇವೆಲ್ಲ ಮೋದಿ ಅವರ ಸಾಧನೆಗಳು ಜನಸಾಮಾನ್ಯರು, ರೈತರು ತೀವ್ರ ತೊಂದರೆಗೊಳಗಾದರು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲ ಧರ್ಮದ ಜಾತಿಯ ಜನರು ಜೀವಿಸಬೇಕು ಆದರೆ ಆರ್‍ಎಸ್‍ಎಸ್ ಸಿದ್ದಾಂತ ಇಂತದಕ್ಕೆಲ್ಲ ಅವಕಾಶ ನೀಡುವುದಿಲ್ಲ. ಇದನ್ನು ಜನಸಾಮಾನ್ಯರು ಅರ್ಥ ಮಾಡಿಕೊಳ್ಳಬೇಕು. ಬುದ್ದ, ಬಸವ ಅಂಬೇಡ್ಕರ್ ಅವರ ತತ್ವ ಸಿದ್ದಾಂತಕ್ಕೆ ವಿರೋಧ ನೀತಿಗಳ ಬಗ್ಗೆ ಜನ ಜಾಗೃತರಾಗಿರಬೇಕು. ತತ್ವಸಿದ್ದಾಂತಗಳ ವಿರೋಧ ಹೊಂದಿರುವುದಕ್ಕಾಗಿ ಬಿಜೆಪಿ, ಆರ್‌ಎಸ್‌ಎಸ್‌ನವರು ಕುತಂತ್ರ ಮಾಡಿ ನನ್ನನ್ನು ಸೋಲಿಸಿದ್ದರು, ನೀವು ಸೋಲಿಸಿದ್ದಲ್ಲ. ರಾಜ್ಯಸಭೆ ಸದಸ್ಯತ್ವ ಮುಗಿದ ನಂತರ ನೀವು ನಿವೃತ್ತರಾಗುತ್ತೀರಲ್ಲ ಎಂದು ಯಾರೋ ಒಬ್ಬರು ಕೇಳುತ್ತಿದ್ದರು. ನಾನು ಹೇಳೋದೇನೆಂದರೆ, ನಾನು ನನ್ನ ಕೊನೆಯ ಉಸಿರು ಇರುವವರೆಗೆ ಪಲಾಯನ ಮಾಡದೆ, ಜನರ ಸೇವೆಯೇ ಮಾಡುತ್ತೇನೆ. ಅದಕ್ಕೆ ರಾಜಕೀಯ ಅಧಿಕಾರದ ಅವಶ್ಯಕತೆ ಇಲ್ಲ ಎಂದರು.

MALIKARJUNA KHREGE

ಸಾರ್ವಜನಿಕ ಇಲಾಖೆ, ಸರ್ಕಾರಿ ಸಂಘಗಳ ಸ್ಥಾಪನೆ, ಖಾಸಗಿ ವಲಯ, ಮೈಕ್ರೋ ಇಂಡಸ್ಟ್ರೀ ಹಾಗೂ ಮೈಕ್ರೋ ಎಕಾನಮಿ ಜವಾಹರಲಾಲ್ ನೆಹರು ಅವರ ಸಾಧನೆಯಾಗಿತ್ತು. ನಿಮ್ಮ ಸಾಧನೆ ಏನು? ಸಾರ್ವಜನಿಕ ವಲಯವನ್ನು ಖಾಸಗಿಯವರ ಪಾಲು ಮಾಡಲಾಗುತ್ತಿದೆ. ವೈಟ್ ರೆವ್ಯೂಲೇಷನ್ ಹಾಗೂ ಗ್ರೀನ್ ರೆವ್ಯೂಲೇಷನ್ ನಂತಹ ಪ್ರಮುಖ ನಿರ್ಧಾರಗಳು ನೆಹರು ಅವರ ಕೊಡುಗೆಯಾಗಿದೆ. ಆರ್ಟಿಕಲ್ 371ಜೆ ದಿಂದಾಗಿ ಇಂದು ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸೀಟು ಸಲೀಸಾಗಿ ಸಿಗುತ್ತಿವೆ. ಏಳು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಭಾಗದಲ್ಲಿ ನೇಮಕಾತಿ ನಡೆದರೆ ಶೇ.8 ರಷ್ಟು ಉದ್ಯೋಗ ಮೀಸಲಾತಿ ಕೊಡಬೇಕು. ಇದನ್ನು ಕಾನೂನು ಮಾಡಿದ್ದು ಕಾಂಗ್ರೆಸ್ ಪಕ್ಷ, ಸೋನಿಯಾಗಾಂಧಿ. ಇಂತಹ ಮಹತ್ತರ ನಿರ್ಧಾರ ಮಾಡಿ ತನ್ನ ಕ್ಷೇತ್ರದ ಎಂಪಿ ಬೇರೆ ಯಾರಾದರು ಮಾಡಿದ್ದಾರೆಯೇ? ಹಾಗೆ ಮಾಡಿದ್ದು ತೋರಿಸಿದರೆ ನಾನು ಇಂದೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲೆಸೆದರು.

MALIKARJUNA KHARGE

ತೆಲಂಗಾಣದಲ್ಲಿ ಆರ್ಟಿಕಲ್ 371 ಡಿ ತರಬೇಕಾದರೆ ಜನರು ಗುಂಡೇಟು ತಿನ್ನಬೇಕಾಯಿತು, ರಕ್ತಹರಿಸಬೇಕಾಯಿತು. ಆದರೆ ನಮ್ಮಲ್ಲಿ ಯಾರು ಹಾಗೆ ಮಾಡಿದ್ದಾರೆ? ಒಂದೇ ಒಂದು ಪ್ರತಿಭಟನೆ ಆಗದೆ ಆರ್ಟಿಕಲ್ 371 ಜೆ ಜಾರಿಗೆ ಬಂದಿದೆ ಎಂದರು. ಇಂದು ದೇಶದಲ್ಲಿ ಮುಕ್ತವಾದ ಸ್ವಾತಂತ್ರ್ಯ ಯಾರಿಗಿದೆ? ಪತ್ರಿಕೆಯವರ ಸ್ವಾತಂತ್ರ್ಯ ಕಿತ್ತುಕೊಳ್ಳಲಾಗಿದೆ. ಪೆಗಾಸಸ್ ನಂತ ಸಂಸ್ಥೆಯಿಂದ ಮಾಹಿತಿ ಕಳ್ಳತನವಾಗುತ್ತಿದೆ. ಇಷ್ಟೆಲ್ಲ ಆದರೂ ಕೂಡಾ ಮೋದಿ, ಮೋದಿ, ಮೋದಿ ಎನ್ನುತ್ತಿದ್ದಾರೆ ಎಂದರು. ಇದನ್ನೂ ಓದಿ: ನವಜೋತ್ ಸಿಂಗ್ ಸಿಧುನಂತೆ ಕನ್ಹಯ್ಯ ಕುಮಾರ್ ಕಾಂಗ್ರೆಸ್ಸನ್ನು ನಾಶ ಮಾಡುತ್ತಾರೆ: ಆರ್​​ಜೆಡಿ

ತತ್ವಸಿದ್ದಾಂತದ ಮೇಲೆ ನಾನು ರಾಜಕಾರಣ ಮಾಡುತ್ತೇನೆ. ಕೊನೆಯ ಉಸಿರು ಇರುವವರೆಗೆ ನಾನು ಜನರ ಪರ ಹೋರಾಡುತ್ತಲೇ ಇರುತ್ತೇನೆ. ನಿವೃತ್ತಿಯಾಗುವ ಮಾತೇ ಇಲ್ಲ. ನಮ್ಮ ಕಾಂಗ್ರೆಸ್ ಪಕ್ಷವನ್ನ ಮುಗಿಸುವುದು ಸಾಧ್ಯವೇ ಇಲ್ಲ ಎಂದರು.

ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಮುಖ್ಯ ಸಚೇತಕ ಹಾಗೂ ಶಾಸಕರಾದ ಡಾ ಅಜಯ್ ಸಿಂಗ್, ಶಾಸಕರಾದ ಕನೀಜ್ ಫಾತೀಮಾ, ಶರಣಬಸಪ್ಪಗೌಡ ದರ್ಶನಾಪುರ, ರಾಜಶೇಖರ್ ಪಾಟೀಲ್, ಎಂ. ವೈಪಾಟೀಲ್, ಮಾಜಿ ಸಚಿವರಾದ ಡಾ ಶರಣಪ್ರಕಾಶ ಪಾಟೀಲ್, ಮಾಜಿ ಎಂ ಎಲ್ ಸಿ ಅಲ್ಲಮಪ್ರಭು ಪಾಟೀಲ್, ಶರಣಪ್ಪ ಮಟ್ಟೂರು, ತಿಪ್ಪಣ್ಣಪ್ಪ ಕಮಕನೂರು, ಮಾಜಿ ಶಾಸಕರಾದ ವೆಂಕಟಪ್ಪ ನಾಯಕ, ಜಿಪಂ, ತಾಪಂ ಸದಸ್ಯರು, ಮಹಾನಗರಪಾಲಿಕೆ ಸದಸ್ಯರು ಸೇರಿದಂತೆ ಮತ್ತಿತರು ಇದ್ದರು.

TAGGED:Amit ShahbjpcongressKalaburagimallikarjun khargenarendra modiPublic TVrssಅಮಿತ್ ಶಾಆರ್‍ಎಸ್‍ಎಸ್ಕಲಬುರಗಿಕಾಂಗ್ರೆಸ್ನರೇಂದ್ರ ಮೋದಿಪಬ್ಲಿಕ್ ಟಿವಿಬಿಜೆಪಿಮಲ್ಲಿಕಾರ್ಜನ ಖರ್ಗೆ
Share This Article
Facebook Whatsapp Whatsapp Telegram

Cinema news

Suhana Khan
ಸ್ವಂತ ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
33 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
49 minutes ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
1 hour ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
2 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?