2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನೇ ಬದಲಿಸಬೇಕು- ವೀರಪ್ಪ ಮೊಯ್ಲಿ

Public TV
1 Min Read
M Veerappa Moily

ಬೆಂಗಳೂರು: 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಪ್ರಧಾನಿ ಮೋದಿಯನ್ನೆ ಬದಲಾಯಿಸಬೇಕೆಂಬ ಕೂಗು ಕೇಳಿ ಬರುತ್ತಿದೆ ಎಂದು ಲೋಕಸಭಾ ಸದಸ್ಯ ವೀರಪ್ಪ ಮೊಯ್ಲಿ  ಹೇಳಿದ್ದಾರೆ.

ಚಿಕ್ಕಬಳ್ಳಾಪುದಲ್ಲಿ ಮಾತನಾಡಿದ ಅವರು ನೋಟು ಅಮಾನ್ಯೀಕರಣದಿಂದ ದೇಶದ ಅರ್ಥಿಕ ಪರಿಸ್ಥಿತಿ ಆಧೋಗತಿಗೆ ತಲುಪಿದೆ. ಎಫ್‍ಡಿಐ ಕಡಿಮೆ ಆಗಿ, ರೂಪಾಯಿ ಮೌಲ್ಯ ಕನಿಷ್ಠ ಮಟ್ಟದಲ್ಲಿದೆ. ಹಾಗಾಗಿ 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮೋದಿಯನ್ನೆ ಬದಲಾಯಿಸಬೇಕೆಂಬ ಕೂಗು ಕೇಳಿ ಬರುತ್ತಿದೆ ಎಂದು ಹೇಳಿದರು.

ದೇಶದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರೀಯವಾಗಿದೆ. ನೋಟು ಬ್ಯಾನ್ ನಿಂದ ಕಪ್ಪು ಹಣಕ್ಕೆ ಕಡಿವಾಣ ಹಾಕಲಾಗಿಲ್ಲ. ನೋಟು ಅಮಾನ್ಯೀಕರಣ ಕೂಡ ಕಪ್ಪು ಹಣವನ್ನು ಬಿಳಿ ಹಣ ಮಾಡುವ ಯೋಜನೆಯಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು.

ಪ್ರಧಾನಿ ನೆರೇಂದ್ರ ಮೋದಿ ನೇತೃತ್ವದ ಸರ್ಕಾರ ಭಾಷಣದ ಸರ್ಕಾರ. ಅದು ಕೇವಲ ಆಶ್ವಾಸನೆಗಳನ್ನು ಕೊಡುವ ಸರ್ಕಾರ ಎಂದು ಕಿಡಿ ಕಾರಿದರು.

ದೇಶದಲ್ಲಿನ ಕಪ್ಪುಹಣವನ್ನು ಹೊರತರುವ ದೃಷ್ಟಿಯಿಂದ ಮೋದಿ ನೇತೃತ್ವದ ಸರ್ಕಾರ ನೋಟು ಅಮಾನ್ಯೀಕರಣ ಮಾಡಿತು. ಆದರೆ ದೇಶದಲ್ಲಿ ಕಪ್ಪು ಹಣ ಈಗಲೂ ಹೆಚ್ಚಾಗುತ್ತಿದೆ. ಇನ್ನು ಸ್ವಿಸ್ ಬ್ಯಾಂಕಿನಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವುದಾಗಿ ಮೋದಿ ಹೇಳಿದ್ದರು. ಆದರೆ ಕಪ್ಪುಹಣ ತರುವ ಬದಲು ಮತ್ತೆ ದೇಶದಲ್ಲಿ ಕಪ್ಪುಹಣ ಹೆಚ್ಚಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Share This Article
1 Comment

Leave a Reply

Your email address will not be published. Required fields are marked *