ಬೆಂಗಳೂರು: ಯಾರೇ ಆಗಲಿ ವೈಯಕ್ತಿಕವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ಶಾಸಕ ಜಮೀರ್ ಅಹ್ಮದ್ ಅವರಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರೀಸ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಜಮೀರ್ ಗೆ ಎಐಸಿಸಿ ವಾರ್ನಿಂಗ್ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೇ ಆಗಲೀ ವೈಯಕ್ತಿಕವಾಗಿ ಮಾತನಾಡೋದು ಸರಿಯಲ್ಲ. ಇನ್ಮುಂದೆ ಯಾವುದು ಸಮಸ್ಯೆಯಾಗುವುದಿಲ್ಲ. ಎಲ್ಲರೂ ಒಟ್ಟಿಗೆ ಹೋಗ್ತೀವಿ. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಹೇಳಿದೆ ಎಂದರು.
ಯಾವುದೇ ಒಂದು ಸಮುದಾಯದಿಂದ ಯಾರೂ ಕೂಡ ಸಿಎಂ ಆಗೋಕೆ ಆಗಲ್ಲ. ಡಿಕೆ ಶಿವಕುಮಾರ್ ತಮ್ಮ ಕ್ಷೇತ್ರದಲ್ಲಿ ಒಕ್ಕಲಿಗರು ಬೆಂಬಲ ಕೊಡಿ ಅಂತಾ ಹೇಳಿರೋದು ಅಷ್ಟೇ. ಅವರ ಮೈಂಡ್ ಸೆಟ್ ಏನು ಅನ್ನೋದು ನಮಗೆ ಗೊತ್ತು. ನಮ್ಮಲ್ಲಿ ಯಾವುದೇ ಗೊಂದಲ ಸಂಘರ್ಷವಿಲ್ಲ ಎಂದು ಹೇಳಿದರು.
ಮುಸ್ಲಿಂ ಸಮುದಾಯದಿಂದ ಜಮೀರ್ ಸಿಎಂ ಆಗಬೇಕು ಅನ್ನೋದರ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ. ನಾನು ಸಮಾಜದ ಅಧ್ಯಕ್ಷ ಅಲ್ಲ, ಯೂತ್ ಕಾಂಗ್ರೆಸ್ ಅಧ್ಯಕ್ಷ ಅಷ್ಟೇ ಎಂದು ತಿಳಿಸಿದರು. ಇದನ್ನೂ ಓದಿ: ಹೌದು ನಾವು ಗಾಂಧಿ ಕುಟುಂಬದ ಗುಲಾಮರು, ಬಿಜೆಪಿಯವ್ರು ಸತ್ಯವನ್ನೇ ಹೇಳಿದ್ದಾರೆ: ಡಿಕೆಶಿ