Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

RSS ನಿಮ್ಮ ಜೊತೆ ಇದೆ: ದಲಿತ, ಹಿಂದುಳಿದ ವರ್ಗಗಳ ಮಠಾಧೀಶರೊಂದಿಗೆ ಮೋಹನ್‌ ಭಾಗವತ್‌ ಸಂವಾದ

Public TV
Last updated: July 12, 2022 6:01 pm
Public TV
Share
3 Min Read
mohan bhagwat
SHARE

ಚಿತ್ರದುರ್ಗ: ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್‌ ಭಾಗವತ್‌ ಅವರು ಇಂದು ದಲಿತ, ಹಿಂದುಳಿದ ವರ್ಗಗಳ 21 ಮಠಾಧೀಶರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸಂವಾದದಲ್ಲಿ ಅನೇಕ ಸ್ವಾಮೀಜಿಗಳು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರ ಕೊಟ್ಟರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋಹನ್‌ ಭಾಗವತ್, ಸಂಘಕ್ಕೆ ಹೆಚ್ಚು ಹೊಂದುವುದು ರಾಜಕೀಯ ಅಲ್ಲ. ಧಾರ್ಮಿಕತೆ ಮತ್ತು ಆಧ್ಯಾತ್ಮಿಕತೆ. ಹಾಗಾಗಿ ನಮಗೆ ಸಂಘಕ್ಕೆ ರಾಜಕೀಯದವರಿಗಿಂತ ಸ್ವಾಮೀಜಿಗಳೇ ಹೆಚ್ಚು ಹತ್ತಿರವಾಗುತ್ತಾರೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ನ. 11ರಿಂದ ಒಂದು ತಿಂಗಳ ಕಾಲ ಬೆಂಗಳೂರು ಡಿಸೈನ್ ಫೆಸ್ಟಿವಲ್: ಅಶ್ವಥ್ ನಾರಾಯಣ

chitradurga swamijis

ನಮ್ಮ ಸಮಾಜದಲ್ಲಿ ಕೆಲವು ಭಾಗ ಹಿಂದುಳಿದಿದ್ದರಿಂದ ಸಂಪರ್ಕ ಮುರಿದು ಹೋಯಿತು. ಹಿಂದೂ ಸಮಾಜದ ಎಲ್ಲಾ ಅಂಗಗಳನ್ನು ಸುಸ್ಥಿತಿಯಲ್ಲಿಡುವುದು ನಮ್ಮ ಕರ್ತವ್ಯ. ಮತ್ತೆ ಮತ್ತೆ ಸೇರುವುದರಿಂದ ಇದು ಸರಿಯಾಗುತ್ತದೆ, ಇದೇ ಸಮರಸತೆ. ಸಮಾಜದ ಎಲ್ಲಾ ಅಂಗಗಳ ಬಗ್ಗೆ ಸಂವೇದನೆ ಇರಬೇಕು. ಪರಸ್ಪರ ಆಗಾಗ ಸೇರುವುದರಿಂದ ನಮಗೆ ಪರಸ್ಪರರ ಬಗ್ಗೆ ಅರಿವು ಹೆಚ್ಚಾಗುತ್ತದೆ. ಅರಿವು ಹೆಚ್ಚಾದಾಗ ಸಂಶಯಗಳು, ಅಪನಂಬಿಕೆಗಳು ದೂರವಾಗುತ್ತವೆ. ಆಗ ಮನಸ್ಸುಗಳು ಒಂದಾಗುತ್ತವೆ. ಆರ್‌ಎಸ್‌ಎಸ್‌ ಮತ್ತು ಮಠಗಳು ಹಾಗೂ ಸ್ವಾಮೀಜಿಗಳೂ ಪರಸ್ಪರ ಮತ್ತೆ ಮತ್ತೆ ಭೇಟಿ ಮಾಡುತ್ತಿರಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಹಿಂದೂ ಸಮಾಜದ ಪ್ರಮುಖ ಸಮಸ್ಯೆಗಳಾದ ಅಸ್ಪೃಶ್ಯತೆ, ವಿಷಮತೆ, ಅಸಮಾನತೆ ಇವುಗಳು ಮುಖ್ಯವಾಗಿ ಇರುವುದು ನಮ್ಮ ಮನಸ್ಸಿನಲ್ಲಿ. ಶಾಸ್ತ್ರಗಳಲ್ಲಿ ಸಮಸ್ಯೆ ಇಲ್ಲ. ಈ ಸಮಸ್ಯೆಗಳು ಹಲವಾರು ಶತಮಾನಗಳಿಂದ ನಮ್ಮ ಮನಸ್ಸಿನಲ್ಲಿ ಉಳಿದಿವೆ. ಹಾಗಾಗಿ ಇದರ ಪರಿಹಾರಕ್ಕೂ ಸಮಯ ತಗುಲುವುದು. ನಿಧಾನವಾಗಿ ಇದನ್ನು ಮನಸ್ಸಿನಿಂದ ತೆಗೆಯುವ ಕೆಲಸವಾಗಬೇಕಿದೆ. ಅಲ್ಲಿಯವರೆಗೂ ಸಹನೆ ಮತ್ತು ಧೈರ್ಯವನ್ನು ನಾವು ಹೊಂದಬೇಕು. ಭಾರತ ಭಾರತವಾಗಿ ಉಳಿಯಬೇಕಾದರೆ, ನಾವು ನಾವಾಗಿ ಉಳಿಯಬೇಕು. ಇಲ್ಲದಿದ್ದರೆ ಭಾರತ ಭಾರತವಾಗಿ ಉಳಿಯುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಿಗಮ ಮಂಡಳಿ, ಪ್ರಾಧಿಕಾರದ ಅಧ್ಯಕ್ಷರ ನೇಮಕಾತಿ ವಾಪಸ್

ಧರ್ಮವು ಎಲ್ಲ ಕಡೆ ಒಮ್ಮತವಾಗಿ ಇರುವಂತಾಗಬೇಕು. ಮತಾಂತರ ನಮ್ಮಲ್ಲಿ ಪ್ರತ್ಯೇಕತೆಯನ್ನು ತರುತ್ತದೆ. ಹಾಗಾಗಿ ನಾವು ಮತಾಂತರವನ್ನು ತಡೆಯುವ ಪ್ರಯತ್ನ ಮಾಡಬೇಕು. ಆಧುನಿಕ ವಿದ್ಯಾಭ್ಯಾಸದೊಂದಿಗೆ ಶಿಕ್ಷಣ ಸಿಗುತ್ತಿದೆ. ಆದರೆ ಸಂಸ್ಕಾರ ಸ್ವಲ್ಪ ದೂರ ಆಗುತ್ತಿದೆ. ಸಂಸ್ಕಾರ, ನಿಷ್ಠೆ ದೃಢವಾಗಬೇಕು ಎಂದರೆ ಏನಾದರೂ ಒಂದು ರೀತಿಯ ಉಪಾಸನೆಯನ್ನು ಜೋಡಿಸಿಕೊಳ್ಳಬೇಕು. ನೀವು, ಸ್ವಾಮೀಜಿಗಳು. ಸಾಧನೆ, ನಿಯಮಿತ ತಪಸ್ಸನ್ನು ಮಾಡುವವರು. ನೀವು ಸಮಾಜವನ್ನು ಸಂಸ್ಕಾರವಂತ ಸಮಾಜವನ್ನಾಗಿ ಎಬ್ಬಿಸಿ ನಿಲ್ಲಿಸಬೇಕು ಎಂದು ಸಲಹೆ ನೀಡಿದರು.

ಎಲ್ಲರೂ ಒಟ್ಟಾಗಿ ಮುನ್ನಡೆಯಬೇಕು. ಸೇವೆ ಮತ್ತು ಸಂಸ್ಕಾರದ ಮೂಲಕ ನಾವು ಸಮಾಜವನ್ನು ಕಟ್ಟಿ ಬೆಳೆಸಬೇಕಿದೆ. ಸತ್ಯದ ಸಾಧನೆ ಮಾಡುತ್ತಾ ಸರ್ವರ ಸೇವೆ ಮಾಡಬೇಕಿದೆ. ಇಂದು ನೀವೆಲ್ಲಾ ಮಠಾಧೀಶರು ಮಾಡುತ್ತಿರುವ ಪ್ರಯತ್ನ ಬೀಜರೂಪದಲ್ಲಿದೆ. ಇದು ಖಂಡಿತವಾಗಿ ಹೆಮ್ಮರವಾಗಿ ಬೆಳೆಯುತ್ತದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಮ್ಮ ಜೊತೆ ಇದೆ. ನಮ್ಮದೇ ಒಂದು ಶೈಲಿ ಇದೆ. ನೀವು ಸಂಘವನ್ನು ತಿಳಿದುಕೊಳ್ಳುವ ಪ್ರಯತ್ನವನ್ನು ಮಾಡಿ. ನಾವೆಲ್ಲರೂ ಹಿಂದೂ ಸಮಾಜದ ಅವಿಭಾಜ್ಯ ಅಂಗ ಎಂದು ಹೇಳಿದರು.

ಸಂವಾದದಲ್ಲಿ ಬೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ, ಕುಂಚಿಟಿಗ ಮಠದ ಶಾಂತವೀರಶ್ರೀ, ಭಗೀರಥ ಮಠದ ಪುರುಷೋತ್ತಮಾನಂದ ಶ್ರೀ, ಹಡಪದ ಅಪ್ಪಣ್ಣ ಶ್ರೀ, ಈಡಿಗ ಮಠದ ರೇಣುಕಾನಂದ ಶ್ರೀ, ಶ್ರೀಕೃಷ್ಣ ಯಾದವ ಮಠದ ಯಾದವಾನಂದ ಶ್ರೀ, ಕುಂಬಾರ ಗುಂಡಯ್ಯಶ್ರೀ, ಚಲವಾದಿ ಮಠದ ಬಸವ ನಾಗಿದೇವ ಶ್ರೀ, ಹರಳಯ್ಯ ಶ್ರೀ, ಸೇವಾಲಾಲ್ ಶ್ರೀ ಸೇರಿದಂತೆ 20ಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗಿದ್ದರು. ಮಠಾಧೀಶರ ಭೇಟಿ ಬಳಿಕ ಭಾಗವತ್ ಅವರು ಸಂಜೆ ಬೆಂಗಳೂರಿಗೆ ಪಯಣ ಬೆಳೆಸಿದರು. ಇದನ್ನೂ ಓದಿ: ಮಳೆ ನಿಲ್ಲಲು ಶೃಂಗೇರಿ ಜಗದ್ಗುರುಗಳ ಮೊರೆ ಹೋದ ಬಿಜೆಪಿ, ಕಾಂಗ್ರೆಸ್

Live Tv
[brid partner=56869869 player=32851 video=960834 autoplay=true]

TAGGED:Chitradurgadalit swamiji'smohan bhagwatrssಆರ್‍ಎಸ್‍ಎಸ್ಚಿತ್ರದುರ್ಗದಲಿತ ಮಠಾಧೀಶರುಮೋಹನ್ ಭಾಗವತ್
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
1 hour ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
2 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
2 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
4 hours ago

You Might Also Like

KARWAR LAND SLIDE
Districts

ಉತ್ತರ ಕನ್ನಡ | ಕರ್ನಲ್‌ ಕಂಬದ ಬಳಿ ಗುಡ್ಡ ಕುಸಿತ – ಮಳೆಗೆ ಜಿಲ್ಲೆಯಲ್ಲಿ 5 ಮನೆಗಳು ಸಂಪೂರ್ಣ ನಾಶ

Public TV
By Public TV
37 minutes ago
Auto Driver Case
Bengaluru City

ಬೆಂಗಳೂರು | ಆಟೋ ಚಾಲಕನಿಗೆ ಹಿಂದಿಯಲ್ಲಿ ಯುವತಿಯ ಆವಾಜ್ – ಚಪ್ಪಲಿಯಲ್ಲಿ ಹಲ್ಲೆ ನಡೆಸಿ ಕ್ರೌರ್ಯ

Public TV
By Public TV
52 minutes ago
tumakuru outrage erupts against hemavati express link canal project work temporarily halted 1
Districts

ಹೇಮಾವತಿ ನೀರಿಗೆ 2 ಜಿಲ್ಲೆಗಳ ಕಿತ್ತಾಟ; ಡಿಕೆಶಿ ಒತ್ತಡಕ್ಕೆ ತುಮಕೂರು `ಕೈ’ ನಾಯಕರು ಮೌನ ಸಮ್ಮತಿ ಆರೋಪ

Public TV
By Public TV
2 hours ago
Rajastan Bomb Threat
Crime

ರಾಜಸ್ಥಾನದ ಮೂವರು ಸಚಿವರಿದ್ದ ಹೋಟೆಲ್‌ಗೆ ಬಾಂಬ್ ಬೆದರಿಕೆ ಸಂದೇಶ

Public TV
By Public TV
2 hours ago
chandra layout
Bengaluru City

ಬೆಂಗಳೂರು| ಬ್ಯಾಂಕ್ ಸಾಲ ಇದ್ದ ಕಟ್ಟಡವನ್ನ ಲೀಸ್‌ಗೆ ಪಡೆದು ಸಂಕಷ್ಟಕ್ಕೆ ಸಿಲುಕಿದ 17 ಕುಟುಂಬಗಳು

Public TV
By Public TV
3 hours ago
Mangaluru Landslide ASHWINI
Dakshina Kannada

Mangaluru Landslide | ಮಕ್ಕಳ ಅಗಲಿಕೆ ಮಧ್ಯೆ ಎರಡೂ ಕಾಲು ಕಳೆದುಕೊಂಡ ಅಶ್ವಿನಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?