Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಕ್ರಮ ಹಣ ವರ್ಗಾವಣೆ ಪ್ರಕರಣ – ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

Public TV
Last updated: August 2, 2022 5:02 pm
Public TV
Share
3 Min Read
DK SHIVAKUMAR
SHARE

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಯಲ್ಲಿರುವ ಇಡಿ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಪ್ರಕರಣ ಇತರೆ ಆರೋಪಿಗಳಾದ ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ, ಸುನಿಲ್ ಶರ್ಮಾ ಮತ್ತು ರಾಜೇಂದ್ರಗೂ ಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿತು. ಪ್ರತಿ ಆರೋಪಿಯೂ ತಲಾ ಒಂದು ಲಕ್ಷ ಶ್ಯೂರಿಟಿ ನೀಡಬೇಕು. ಅನುಮತಿ ಇಲ್ಲದೇ ವಿದೇಶ ಪ್ರವಾಸ ಮಾಡಬಾರದು ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು ಎಂದು ಕೋರ್ಟ್ ಷರತ್ತು ವಿಧಿಸಿದೆ.

DK SHIVAKUMAR

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಇತರೆ ಆರೋಪಿಗಳ ವಿರುದ್ಧ ದೂರು ದಾಖಲಿಸಿರುವ ಇಡಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ಜಾರ್ಜ್‍ಶೀಟ್ ಸಲ್ಲಿಕೆ ಮಾಡಿತ್ತು. ಜಾರ್ಜ್‍ಶೀಟ್ ಸಲ್ಲಿಕೆ ಹಿನ್ನೆಲೆ ಹೈಕೋರ್ಟ್‍ನಿಂದ ಪಡೆದ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಾಗಿ ಪರಿವರ್ತಿಸಲು ಡಿ.ಕೆ. ಶಿವಕುಮಾರ್ ಮತ್ತು ಹೊಸದಾಗಿ ಜಾಮೀನು ನೀಡುವಂತೆ ಇತರೆ ಆರೋಪಿಗಳು ಕೋರ್ಟ್‍ಗೆ ಮನವಿ ಮಾಡಿದ್ದರು.

ವಿಚಾರಣೆ ವೇಳೆ ವಾದ ಮಂಡಿಸಿದ್ದ ಇಡಿ ಪರ ವಕೀಲರು, ಬೇಲ್ ಕೊಡುವುದು, ಬಿಡುವುದು ನ್ಯಾಯಾಲಯದ ವಿವೇಚನೆಗೆ ಬಿಟ್ಟದ್ದು, ಆದರೆ ಬೇಲ್ ಕೊಡುವ ಪೂರ್ವದಲ್ಲಿ ಪಿಎಂಎಲ್‍ಎ ಕಾಯ್ದೆಯ ಸೆಕ್ಷನ್ 45ರ ಎರಡು ಷರತ್ತು ಪಾಲನೆಯಾಬೇಕು. ಆರೋಪಿ (ಡಿಕೆಶಿ) ಹಣಕಾಸು ಅವ್ಯವಹಾರ ಮಾಡಿಲ್ಲ ಅನ್ನೋದು ಮೇಲ್ನೋಟಕ್ಕೆ ದೃಢವಾಗಬೇಕು, ಇಲ್ಲವಾದಲ್ಲಿ ಬೇಲ್ ನೀಡಬಾರದು.

dk shivakumar temple

ಎರಡನೇಯದಾಗಿ ಬೇಲ್ ಸಿಕ್ಕ ನಂತರ ಇದೇ ತರಹದ ಇನ್ನೊಂದು ಅಪರಾಧ ಮಾಡುವುದಿಲ್ಲ ಎನ್ನುವುದನ್ನು ಕೋರ್ಟ್ ಕಂಡುಕೊಳ್ಳಬೇಕು. ಇತ್ತಿಚೇಗಿನ ಸುಪ್ರೀಂಕೋರ್ಟ್ ಕೂಡ ಟ್ವಿನ್ ಕಂಡಿಷನ್ ನ್ಯಾಯಾಲಯಕ್ಕೆ ತೃಪ್ತಿಯಾದಲ್ಲಿ ಬೇಲ್ ನೀಡಬಹುದು ಎಂದು ತೀರ್ಪು ನೀಡಿದೆ. ಪ್ರಕರಣವೊಂದನ್ನು ಮೇಲ್ನೋಟಕ್ಕೆ ಪರಿಶೀಲನೆ ಮಾಡಿ, ಚಾರ್ಜ್‍ಶೀಟ್ ಸಲ್ಲಿಕೆ ನಂತರ ಅಪರಾಧ ಎಸಗುವ ಸಾಧ್ಯತೆ ಕಡಿಮೆ ಎಂದರೆ ಬೇಲ್ ನೀಡಲು ಪರಿಗಣಿಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಪರಾಧ ಮಾಡಿರುವುದು ಸ್ಪಷ್ಟವಾಗಿದೆ. ಹೀಗಾಗಿ ಬೇಲ್ ನೀಡಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಆ.10 ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ

ed

ಇದಕ್ಕೆ ಡಿಕೆಶಿ ಮತ್ತು ಇತರೆ ಆರೋಪಿಗಳ ಪರ ವಾದ ಮಂಡಿಸಿದ್ದ ವಕೀಲರು, ಸುಪ್ರೀಂಕೋರ್ಟ್ ನ್ಯಾ. ಖಾನ್ವಿಲ್ಕರ್ ನೇತೃತ್ವದ ಪೀಠದ ಮುಂದೆ ಪಿಎಂಎಲ್‍ಎ ಕಾಯ್ದೆ ಎಲ್ಲಾ ಪ್ರಾವಿಷನ್‍ಗಳ ಮೇಲೆ ಚರ್ಚೆಯಾಗಿತ್ತು. ಕೇವಲ ಸೆಕ್ಷನ್ 45ರ ಬಗ್ಗೆ ಅಲ್ಲ, ಅಂತಿಲ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ಬಗ್ಗೆ ಸ್ಪಷ್ಟ ತೀರ್ಪು ನೀಡಿದ್ದನ್ನು ಪರಿಗಣಿಸಬೇಕು. ಎಲ್ಲಾ ಐಪಿಸಿ ಅಥವಾ ಬೇರೆ ಮಾದರಿಯ ಅಪರಾಧ ಆಗಿರಲಿ ಯಾವ ಹಂತದಲ್ಲಿ ಆರೋಪಿಗಳಿಗೆ ಬೇಲ್ ನೀಡಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ. ಪಿಎಂಎಲ್‍ಎ ಕೇಸ್‍ನಲ್ಲಿ ಆರೋಪಿ ತನಿಖೆ ಹಂತದಲ್ಲಿ ಬಂಧನವಾಗಿ ನಂತರ ಜಾಮೀನು ಸಿಕ್ಕಿದ್ದರೆ ಚಾರ್ಜ್‍ಶೀಟ್ ಸಲ್ಲಿಕೆ ಬಳಿಕ ಬಂಧಿಸುವುದರಲ್ಲಿ ಯಾವುದೇ ಲಾಜಿಕ್ ಇಲ್ಲ, ಚಾರ್ಜ್‍ಶೀಟ್ ಸಲ್ಲಿಕೆ ಸಂದರ್ಭದಲ್ಲಿ ಬಂಧನವಾಗಿಲ್ಲದಿದ್ದರೆ ಚಾರ್ಜ್‍ಶೀಟ್ ಆದ ಮೇಲೂ ಬಂಧಿಸಬಾರದು. ಬಂಧಿಸಿದರೆ ಅದು ಪ್ಯುನಿಟಿವ್ ಪನಿಶ್‍ಮೆಂಟ್ ಆಗುತ್ತದೆ ಎಂದು ವಾದಿಸಿದ್ದರು.

court hammer

ಕೋರ್ಟ್ ಆದೇಶದ ಬಳಿಕ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಅವರು, ನ್ಯಾಯ ಸಿಗುವ ವಿಶ್ವಾಸ ಇತ್ತು, ಸಿಕ್ಕಿದೆ. ಕೃಷಿ, ವ್ಯವಹಾರ, ರಾಜಕೀಯ ಮಾಡಿಕೊಂಡು ಇದ್ದವರು ನಾವು. ಗುಜರಾತ್ ರಾಜ್ಯಸಭಾ ಚುನಾವಣೆ ಬಳಿ ಐಟಿ ದಾಳಿ ಆಗಿತ್ತು. ಐಟಿ ದಾಳಿ ಆಗಿ ಐದು ವರ್ಷ ಆಗಿದೆ. ನನಗಿಂತ ಹೆಚ್ಚು ನನ್ನ ಜೊತೆ ಇದ್ದ ಸಹಪಾಠಿಗಳ ಯೋಚನೆ ಆಗಿತ್ತು. ಅವರಿಗೂ ಜಾಮೀನು ಸಿಕ್ಕಿರುವುದು ಹೆಚ್ಚು ಸಂತೋಷ ತಂದಿದೆ ಎಂದರು. ಇದನ್ನೂ ಓದಿ: ಮನೆಯಲ್ಲಿ ಸಿಕ್ಕಿದ ಹಣ ನನಗೆ ಸೇರಿದ್ದಲ್ಲ, ಯಾರೋ ಅಲ್ಲಿ ಇಟ್ಟಿದ್ದಾರೆ: ಅರ್ಪಿತಾ ಮುಖರ್ಜಿ

Live Tv
[brid partner=56869869 player=32851 video=960834 autoplay=true]

TAGGED:bailDK ShivakumarEDMoney laundering caseNew Delhiಅಕ್ರಮ ಹಣ ವರ್ಗಾವಣೆಕೋರ್ಟ್ಡಿಕೆ ಶಿವಕುಮಾರ್
Share This Article
Facebook Whatsapp Whatsapp Telegram

Cinema Updates

Shankar Mahadevan
IPL 2025 ಸಮಾರೋಪ ಸಮಾರಂಭದಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ – ಏನೆಲ್ಲಾ ವಿಶೇಷತೆ ಇರಲಿದೆ?
2 hours ago
anant nag
ಹಿರಿಯ ನಟ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
4 hours ago
shine shetty
ಯಶಸ್ಸಿಗಾಗಿ ‘ವಿಲನ್’ ಆದ ‘ಬಿಗ್ ಬಾಸ್’ ಶೈನ್ ಶೆಟ್ಟಿ
4 hours ago
Kamal Haasan
ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
6 hours ago

You Might Also Like

Sharan Pumpwell
Crime

ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಬಂಧನ

Public TV
By Public TV
9 minutes ago
Rishabh Pant 3
Cricket

7 ವರ್ಷಗಳ ಬಳಿಕ ಶತಕ ಸಿಡಿಸಿ ಪಲ್ಟಿ ಹೊಡೆದ ಪಂತ್‌

Public TV
By Public TV
25 minutes ago
Josh Hazlewood 1
Cricket

LSG vs RCB: ಜೋಶ್ ಹ್ಯಾಜಲ್‌ವುಡ್ ಇಂದು ಪಂದ್ಯಕ್ಕೆ ಮಿಸ್‌ ಆಗಿದ್ಯಾಕೆ?

Public TV
By Public TV
40 minutes ago
Kerala Rain 1
Latest

ದೇಶದಲ್ಲಿ ಮಾನ್ಸೂನ್ ಅಬ್ಬರ – ಕೇರಳದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Public TV
By Public TV
43 minutes ago
Rishabh Pant 1
Cricket

ಆರ್‌ಸಿಬಿಗೆ ರಿಷಭ್‌ ʻಪಂಚ್‌ʼ – ಗೆಲುವಿಗೆ 228 ರನ್‌ಗಳ ಕಠಿಣ ಗುರಿ ನೀಡಿದ ಲಕ್ನೋ

Public TV
By Public TV
1 hour ago
Rain Effect 1
Bengaluru City

ಜೂನ್ ತಿಂಗಳಲ್ಲಿ ವಾಡಿಕೆಗಿಂತ ಅತ್ಯಧಿಕ ಮಳೆ – ರಾಜ್ಯದಲ್ಲಿ ಎಲ್ಲೆಲ್ಲಿ ಏನಾಗಿದೆ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?