ಮುಂಬೈ: ಪತ್ರಾ ಚಾಲ್ ಯೋಜನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering Case) ಬಂಧನಕ್ಕೊಳಗಾಗಿದ್ದ ಶಿವಸೇನಾ (Shiv Sena) ನಾಯಕ ಸಂಜಯ್ ರಾವತ್ಗೆ (Sanjay Raut) ಬುಧವಾರ ಜಾಮೀನು (Bail) ದೊರಕಿದೆ. ಈ ಹಿಂದೆ ರಾವತ್ ಅವರನ್ನು ಜಾರಿ ನಿರ್ದೇಶನಾಲಯ (ED) 6 ಗಂಟೆಗಳ ಕಾಲ ವಿಚಾರಣೆ ನಡೆಸಿ, ಬಳಿಕ ಅವರನ್ನು ಬಂಧಿಸಿತ್ತು.
ಸಂಜಯ್ ರಾವತ್ ಅವರೊಂದಿಗೆ ಅವರ ಸಹಾಯಕ ಹಾಗೂ ಪ್ರಮುಖ ಆರೋಪಿಯಾಗಿರುವ ಪ್ರವೀಣ್ ರಾವತ್ ಅವರನ್ನೂ ಇಡಿ ಬಂಧಿಸಿದ್ದು, ಮುಂಬೈನ ವಿಶೇಷ ನ್ಯಾಯಾಲಯದಿಂದ ಅವರು ಕೂಡಾ ಜಾಮೀನು ಪಡೆದಿದ್ದಾರೆ. ಇದನ್ನೂ ಓದಿ: ನಕಲಿ ಪಿಸ್ತೂಲ್ ತೋರಿಸಿ ಲಕ್ಷಾಂತರ ರೂ. ದರೋಡೆ
- Advertisement 2
- Advertisement 3
ತಮ್ಮ ವಿರುದ್ಧದ ಪ್ರಕರಣ ಅಧಿಕಾರದ ದುರುಪಯೋಗ ಹಾಗೂ ರಾಜಕೀಯ ಸೇಡಿನ ಒಂದು ಪರಿಪೂರ್ಣ ಉದಾಹರಣೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ. ಇದನ್ನೂ ಓದಿ: ಮಳಲಿ ಮಸೀದಿ ವಿವಾದ – ವಿಹೆಚ್ಪಿ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು
- Advertisement 4
ಪತ್ರಾ ಚಾಲ್ ಪುನರಾಭಿವೃದ್ಧಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಹಾಗೂ ಅವರು ಕೇಸ್ನಿಂದ ತಪ್ಪಿಸಲು ಗುಪ್ತವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿ ರಾವತ್ ಅವರಿಗೆ ಜಾಮೀನು ಮಂಜೂರು ಮಾಡದಂತೆ ಇಡಿ ಮನವಿ ಮಾಡಿತ್ತು.