Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಮಲೆನಾಡನ್ನು ಬಿಟ್ಟು ಬಿಡದೆ ಕಾಡುತ್ತಿರುವ ಕೆಎಫ್‌ಡಿ – ಪ್ರಕೃತಿಯ ಮಡಿಲ ಮಕ್ಕಳ ಆತಂಕ ತಪ್ಪುವುದೆಂದು?

Public TV
Last updated: February 28, 2024 2:39 pm
Public TV
Share
3 Min Read
KFD
SHARE

ಮಲೆನಾಡಿಗರನ್ನು ಬಿಟ್ಟು ಬಿಡದೇ ಕಾಡುತ್ತಿರುವ ಕೆಎಫ್‌ಡಿ (Kyasanur Forest Diseas) ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಅದೇ ರೀತಿ ಈ ವರ್ಷವೂ ಮಲೆನಾಡಿನ ಜಿಲ್ಲೆಗಳಾದ ಉತ್ತರಕನ್ನಡ, ಶಿವಮೊಗ್ಗ (Shivamogga) ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಕೆಎಫ್‌ಡಿ ಹೆಚ್ಚಾಗುತ್ತಿದೆ. ಇದೀಗ ಕೆಎಫ್‌ಡಿ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಮಲೆನಾಡಿಗರನ್ನು ಮತ್ತೆ ಆತಂಕಕ್ಕೆ ಒಳಪಡಿಸಿದೆ.

ಕೇವಲ ಆರೋಗ್ಯದ ಮೇಲಷ್ಟೇ ಅಲ್ಲದೇ, ಮಲೆನಾಡಿಗರ ಆರ್ಥಿಕತೆ, ಕೃಷಿ ಸೇರಿದಂತೆ ದಿನನಿತ್ಯದ ಕೆಲಸಗಳ ಮೇಲೆ ಕೆಎಫ್‌ಡಿ ತನ್ನ ಕರಿ ನೆರಳನ್ನು ಚೆಲ್ಲಿದೆ. ಈ ಮೂಲಕ ನೆಮ್ಮದಿಯ ಮಲೆನಾಡಿಗೆ ಆತಂಕದ ಅಲೆಯೊಂದ ಬಂದು ಅಪ್ಪಳಿಸಿದಂತಾಗಿದೆ. ಈ ವರ್ಷ ಜನವರಿಯಿಂದ ಇಲ್ಲಿಯವರೆಗೂ ಶಿವಮೊಗ್ಗದಲ್ಲಿ 39, ಉತ್ತರ ಕನ್ನಡದಲ್ಲಿ 43, ಚಿಕ್ಕಮಗಳೂರಿನಲ್ಲಿ 36 ಹಾಗೂ ಉಡುಪಿಯಲ್ಲಿ 1 ಕೆಎಫ್‌ಡಿ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. 2019ರ ಬಳಿಕ ಇಳಿಮುಖವಾಗಿದ್ದ ಕೆಎಫ್‌ಡಿ ಸೋಂಕು ಈ ಬಾರಿ ಹಠಾತ್‌ ಏರಿಕೆ ಕಂಡಿದೆ. ಉಡುಪಿ ಜಿಲ್ಲೆಯಲ್ಲಿ ನಾಲ್ಕು ವರ್ಷಗಳ ಬಳಿಕ ಈ ಕಾಯಿಲೆ ಕಾಣಿಸಿಕೊಂಡಿದೆ. ಈ ಹಿಂದೆ 2019ರಲ್ಲಿ ಸಿದ್ದಾಪುರ ಹಾಗೂ ಬೈಂದೂರಲ್ಲಿ ಇಬ್ಬರಿಗೆ ಕಾಣಿಸಿಕೊಂಡಿತ್ತು.

ರಾಜ್ಯದಲ್ಲಿ 120 ಸಕ್ರಿಯ ಮಂಗನ ಕಾಯಿಲೆ ಪ್ರಕರಣಗಳಿದ್ದು, ಈ ಬಾರಿ ಇದುವರೆಗೆ ನಾಲ್ವರು ಸಾವಿಗೀಡಾಗಿದ್ದಾರೆ.  ಶಿವಮೊಗ್ಗ ಹಾಗೂ ಚಿಕ್ಕಮಗಳೂರಲ್ಲಿ ತಲಾ ಒಂದು ಹಾಗೂ ಉತ್ತರ ಕನ್ನಡದಲ್ಲಿ ಇಬ್ಬರು ರೋಗದಿಂದ ಮೃತಪಟ್ಟಿದ್ದಾರೆ.

KFD2

ಏನಿದು ಕೆಎಫ್‌ಡಿ?: ಮಂಗನ ಜ್ವರವನ್ನು ಕ್ಯಾಸನೂರು ಫಾರೆಸ್ಟ್‌ ಡಿಸೀಸಸ್‌ (ಕೆಎಫ್‌ಡಿ) ಎನ್ನಲಾಗುತ್ತದೆ. ಈ ರೋಗವು  ಕೆಎಫ್‌ಡಿ ಸೋಂಕಿತ ಉಣ್ಣೆಗಳ ಕಡಿತದಿಂದ ಮಂಗಗಳಿಗೆ, ವಿಶೇಷವಾಗಿ ಲಾಂಗರ್‌ಗಳು ಮತ್ತು ಬಾನೆಟ್ ಮಕಾಕ್‌ಗಳಿಗೆ ಅರಣ್ಯ ಪ್ರದೇಶಗಳಲ್ಲಿ ಹರಡುತ್ತದೆ. ಸೋಂಕಿತ ಮಂಗಗಳು ಅರಣ್ಯ ಪ್ರದೇಶಗಳ ಮೂಲಕ ಚಲಿಸಿದಾಗ ಅವು ವೈರಸ್ ಇತರ ಉಣ್ಣೆಗಳಿಗೆ ಸಹ ಹರಡುತ್ತವೆ.

ಈ ಸೋಂಕಿತ ಉಣ್ಣೆ ಕಚ್ಚುವುದರಿಂದ ಹಾಗೂ ಸೋಂಕಿತ ಪ್ರಾಣಿಗಳ ಸಂಪರ್ಕದಿಂದ ಮನುಷ್ಯನಿಗೆ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಕಲುಷಿತ ವಸ್ತುಗಳನ್ನು ಸ್ಪರ್ಶಿಸುವ ಮೂಲಕ ಅಥವಾ ಸೋಂಕಿತ ಪ್ರಾಣಿಗಳಿಂದ ಪಾಶ್ಚರೀಕರಿಸದ ಹಾಲನ್ನು ಸೇವಿಸುವ ಮೂಲಕವೂ ಸೋಂಕು ಸಂಭವಿಸಬಹುದು. ಆದರೆ ಮನುಷ್ಯರಿಂದ ಮನುಷ್ಯರಿಗೆ ರೋಗ ಹರಡುವುದು ಅಪರೂಪ.

KFD3

ಮಂಗನ ಕಾಯಿಲೆ ಲಕ್ಷಣಗಳು: ಚಳಿ ಜ್ವರ, ತಲೆನೋವು, ಸ್ನಾಯು ಸೆಳತ, ವಾಂತಿ ಮತ್ತು ರಕ್ತಸ್ರಾವ, ತೀವ್ರತರವಾದ ಪ್ರಕರಣಗಳಲ್ಲಿ, ನರಮಂಡಲದ ಸಮಸ್ಯೆಗಳು ಎದುರಾಗುತ್ತದೆ. ಈ ಹಂತದಲ್ಲಿ ಪ್ಯಾರಾಸಿಟಮಲ್ ಮಾತ್ರೆ ಹೊರತಾಗಿ ಸ್ಟಿರಾಯ್ಡ್, ಡೈಕ್ಲೋಫಿನ್ ಚುಚ್ಚುಮದ್ದು ತೆಗೆದುಕೊಳ್ಳಬಾರದು ಎಂಬುದು ವೈದ್ಯರ ಸಲಹೆ.

ಮೊದಲ ಹಂತದಲ್ಲಿ ಚೇತರಿಸಿಕೊಳ್ಳದ ರೋಗಿಗಳಿಗೆ ಎರಡನೇ ಹಂತದಲ್ಲಿ ಬಿಳಿರಕ್ತ ಕಣಗಳು ಕಡಿಮೆಯಾಗಿ ತೀವ್ರ ರಕ್ತಸ್ರಾವವಾಗುತ್ತದೆ. ಈ ಹಂತದಲ್ಲಿ ಕಾಯಿಲೆ ಉಲ್ಬಣಗೊಂಡರೆ ಕಿಡ್ನಿ ವೈಫಲ್ಯ ಸೇರಿದಂತೆ ಅಂಗಾಂಗಗಳು ವೈಫಲ್ಯವಾಗಿ ರೋಗಿ ಮರಣ ಹೊಂದುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. 

ಕೆಎಫ್‌ಡಿ ಕಬಂಧ ಬಾಹು: ಐದು ವರ್ಷಗಳಲ್ಲಿ 24 ಜನ ಕೆಎಫ್‌ಡಿಯಿಂದ ಸಾವಿಗೀಡಾಗಿದ್ದಾರೆ. 2019ರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 12 ಮಂದಿ ಕೆಎಫ್‌ಡಿ ಸೋಂಕಿಗೆ ಬಲಿಯಾಗಿದ್ದರು. ಅಲ್ಲದೇ 344 ಜನರಲ್ಲಿ ಸೋಂಕು ದೃಢಪಟ್ಟಿತ್ತು. ಉತ್ತರ ಕನ್ನಡ ಜಿಲ್ಲೆಯ 85 ಜನರಿಗೆ ಸೋಂಕು ಕಾಣಿಸಿಕೊಂಡಿತ್ತು. ಇದರಲ್ಲಿ 3 ಜನ ಸಾವಿಗೀಡಾಗಿದ್ದರು. ಉಡುಪಿಯಲ್ಲಿ ಇಬ್ಬರು, ಮೈಸೂರು, ಬೆಳಗಾವಿ, ಚಿಕ್ಕಮಗಳೂರು ಹಾಗೂ ಹಾವೇರಿಯಲ್ಲಿ ಕ್ರಮವಾಗಿ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇನ್ನೂ 2020ರಲ್ಲಿ ಶಿವಮೊಗ್ಗದಲ್ಲಿ 184 ಪ್ರಕರಣ ಕಾಣಿಸಿಕೊಂಡಿತ್ತು. ನಾಲ್ಕು ಜನ ಸಾವಿಗೀಡಾಗಿದ್ದರು.ಉತ್ತರ ಕನ್ನಡ ಜಿಲ್ಲೆಯಲ್ಲಿ 91 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಈ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದರು. ಚಿಕ್ಕಮಗಳೂರಿನಲ್ಲಿ 12 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. 2021ರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 13, ಚಿಕ್ಕಮಗಳೂರು ಜಿಲ್ಲೆಯಲ್ಲಿ 2, ಉತ್ತರ ಕನ್ನಡ ಜಿಲ್ಲೆಯಲ್ಲಿ 8 ಪ್ರಕರಣಗಳು ಪತ್ತೆಯಾಗಿದ್ದವು. 2022ರಲ್ಲಿ ಶಿವಮೊಗ್ಗದಲ್ಲಿ 35 ಪಾಸಿಟಿವ್ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 14 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿತ್ತು. ಎರಡೂ ಜಿಲ್ಲೆಗಳಲ್ಲಿ ಒಬ್ಬೊಬ್ಬರು ಸಾವನ್ನಪ್ಪಿದ್ದರು. 2023ರಲ್ಲಿ ಶಿವಮೊಗ್ಗ 15, ಚಿಕ್ಕಮಗಳೂರು 2 ಜನರಿಗೆ ಸೋಕು ಕಾಣಿಸಿಕೊಂಡಿತ್ತು.

ಇನ್ನೂ ಇತ್ತೀಚೆಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಅವರು, ಒಂದು ವರ್ಷದೊಳಗೆ ಸೂಕ್ತ ಔಷಧವನ್ನು ಸರ್ಕಾರ ಒದಗಿಸಲಿದೆ ಎಂದು ಭರವಸೆಯನ್ನು ನೀಡಿದ್ದರು.

TAGGED:dinesh gundu raohealthhealth departmentKFDKyasanur Forest Diseaseshivamoggaಕೆಎಫ್‍ಡಿಶಿವಮೊಗ್ಗ
Share This Article
Facebook Whatsapp Whatsapp Telegram

Cinema Updates

Madenur Manu 2
ನಮ್ಮ ಜಗಳ ನಮ್ಮಲ್ಲೇ ಇರಬೇಕಿತ್ತು, ನಾನು ಸತ್ತರೂ ಯಾರೂ ಕಾರಣರಲ್ಲ: ಸಹ ಕಲಾವಿದೆ
37 minutes ago
rishab shetty 2
‘ಕಾಂತಾರ ಚಾಪ್ಟರ್ 1’ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ: ಹೊಂಬಾಳೆ ಫಿಲಂಸ್ ಸ್ಪಷ್ಟನೆ
2 hours ago
madenur manu 4
ಅಪ್ಪಂಗೂ, ತಾತನಿಗೂ ಇಬ್ರೂ ಹೆಂಡ್ತಿರು, ನಿನ್ನ ಮದ್ವೆ ಆಗ್ತೀನಿ ಅಂತ ಕಥೆ ಕಟ್ಟಿದ್ದ- ಮನು ಕರ್ಮಕಾಂಡ ಬಿಚ್ಚಿಟ್ಟ ಸಂತ್ರಸ್ತೆ
1 hour ago
Darshan and Vijayalakshmi
ಯೂಟ್ಯೂಬ್‌ ಸಂದರ್ಶನ ನೀಡಿ ತಗಲಾಕಿಕೊಂಡ ದಾಸ – ಕೋರ್ಟ್‌ನಿಂದ ದರ್ಶನ್‌, ವಿಜಯಲಕ್ಷ್ಮಿಗೆ ಸಮನ್ಸ್‌
3 hours ago

You Might Also Like

Nikhil Kumaraswamy
Bengaluru City

ರಾಮನಗರ ಹೆಸರು ಬದಲಾವಣೆ ರಿಯಲ್ ಎಸ್ಟೇಟ್‌ನ ಕರಪತ್ರದಂತೆ: ನಿಖಿಲ್ ಕುಮಾರಸ್ವಾಮಿ

Public TV
By Public TV
39 minutes ago
M B Patil
Bengaluru City

ರಶ್ಮಿಕಾ, ಶ್ರೀಲೀಲಾ ಎಲ್ಲಾ ಬ್ಯುಸಿ ಇದ್ರು, ಅದಕ್ಕೇ ತಮನ್ನಾ ಆಯ್ಕೆ ಮಾಡಿದ್ವಿ: ಎಂ.ಬಿ ಪಾಟೀಲ್

Public TV
By Public TV
53 minutes ago
KRS Dam
Districts

ಕಾವೇರಿ ಜಲಾನಯನ ಪ್ರದೇಶದಲ್ಲಿ ಸುಳಿಯದ ಮಳೆ – ಕೆಆರ್‌ಎಸ್ ನೀರಿನ ಮಟ್ಟ 89 ಅಡಿಗೆ ಕುಸಿತ

Public TV
By Public TV
1 hour ago
DK Shivakumar and dk Suresh
Latest

ಡಿಕೆ ಬ್ರದರ್ಸ್‌ ಬುಡಕ್ಕೆ ಬಂತು ನ್ಯಾಷನಲ್‌ ಹೆರಾಲ್ಡ್‌ ಕೇಸ್‌

Public TV
By Public TV
2 hours ago
Bride Opposes Marriage In The Last Moment Wedding Cancelled in Hassana
Districts

ತಾಳಿ ಕಟ್ಟುವ ವೇಳೆ ಮುರಿದು ಬಿದ್ದ ಮದುವೆ – ನಂಗೆ ಮದ್ವೆ ಬೇಡ ಎಂದ ವಧು, ವರ ಶಾಕ್‌

Public TV
By Public TV
2 hours ago
Covid 19
Bengaluru City

ಬೆಂಗಳೂರಲ್ಲಿ 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ದೃಢ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?