Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಮಲೆನಾಡನ್ನು ಬಿಟ್ಟು ಬಿಡದೆ ಕಾಡುತ್ತಿರುವ ಕೆಎಫ್‌ಡಿ – ಪ್ರಕೃತಿಯ ಮಡಿಲ ಮಕ್ಕಳ ಆತಂಕ ತಪ್ಪುವುದೆಂದು?

Public TV
Last updated: February 28, 2024 2:39 pm
Public TV
Share
3 Min Read
KFD
SHARE

ಮಲೆನಾಡಿಗರನ್ನು ಬಿಟ್ಟು ಬಿಡದೇ ಕಾಡುತ್ತಿರುವ ಕೆಎಫ್‌ಡಿ (Kyasanur Forest Diseas) ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಅದೇ ರೀತಿ ಈ ವರ್ಷವೂ ಮಲೆನಾಡಿನ ಜಿಲ್ಲೆಗಳಾದ ಉತ್ತರಕನ್ನಡ, ಶಿವಮೊಗ್ಗ (Shivamogga) ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಕೆಎಫ್‌ಡಿ ಹೆಚ್ಚಾಗುತ್ತಿದೆ. ಇದೀಗ ಕೆಎಫ್‌ಡಿ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಮಲೆನಾಡಿಗರನ್ನು ಮತ್ತೆ ಆತಂಕಕ್ಕೆ ಒಳಪಡಿಸಿದೆ.

ಕೇವಲ ಆರೋಗ್ಯದ ಮೇಲಷ್ಟೇ ಅಲ್ಲದೇ, ಮಲೆನಾಡಿಗರ ಆರ್ಥಿಕತೆ, ಕೃಷಿ ಸೇರಿದಂತೆ ದಿನನಿತ್ಯದ ಕೆಲಸಗಳ ಮೇಲೆ ಕೆಎಫ್‌ಡಿ ತನ್ನ ಕರಿ ನೆರಳನ್ನು ಚೆಲ್ಲಿದೆ. ಈ ಮೂಲಕ ನೆಮ್ಮದಿಯ ಮಲೆನಾಡಿಗೆ ಆತಂಕದ ಅಲೆಯೊಂದ ಬಂದು ಅಪ್ಪಳಿಸಿದಂತಾಗಿದೆ. ಈ ವರ್ಷ ಜನವರಿಯಿಂದ ಇಲ್ಲಿಯವರೆಗೂ ಶಿವಮೊಗ್ಗದಲ್ಲಿ 39, ಉತ್ತರ ಕನ್ನಡದಲ್ಲಿ 43, ಚಿಕ್ಕಮಗಳೂರಿನಲ್ಲಿ 36 ಹಾಗೂ ಉಡುಪಿಯಲ್ಲಿ 1 ಕೆಎಫ್‌ಡಿ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. 2019ರ ಬಳಿಕ ಇಳಿಮುಖವಾಗಿದ್ದ ಕೆಎಫ್‌ಡಿ ಸೋಂಕು ಈ ಬಾರಿ ಹಠಾತ್‌ ಏರಿಕೆ ಕಂಡಿದೆ. ಉಡುಪಿ ಜಿಲ್ಲೆಯಲ್ಲಿ ನಾಲ್ಕು ವರ್ಷಗಳ ಬಳಿಕ ಈ ಕಾಯಿಲೆ ಕಾಣಿಸಿಕೊಂಡಿದೆ. ಈ ಹಿಂದೆ 2019ರಲ್ಲಿ ಸಿದ್ದಾಪುರ ಹಾಗೂ ಬೈಂದೂರಲ್ಲಿ ಇಬ್ಬರಿಗೆ ಕಾಣಿಸಿಕೊಂಡಿತ್ತು.

ರಾಜ್ಯದಲ್ಲಿ 120 ಸಕ್ರಿಯ ಮಂಗನ ಕಾಯಿಲೆ ಪ್ರಕರಣಗಳಿದ್ದು, ಈ ಬಾರಿ ಇದುವರೆಗೆ ನಾಲ್ವರು ಸಾವಿಗೀಡಾಗಿದ್ದಾರೆ.  ಶಿವಮೊಗ್ಗ ಹಾಗೂ ಚಿಕ್ಕಮಗಳೂರಲ್ಲಿ ತಲಾ ಒಂದು ಹಾಗೂ ಉತ್ತರ ಕನ್ನಡದಲ್ಲಿ ಇಬ್ಬರು ರೋಗದಿಂದ ಮೃತಪಟ್ಟಿದ್ದಾರೆ.

KFD2

ಏನಿದು ಕೆಎಫ್‌ಡಿ?: ಮಂಗನ ಜ್ವರವನ್ನು ಕ್ಯಾಸನೂರು ಫಾರೆಸ್ಟ್‌ ಡಿಸೀಸಸ್‌ (ಕೆಎಫ್‌ಡಿ) ಎನ್ನಲಾಗುತ್ತದೆ. ಈ ರೋಗವು  ಕೆಎಫ್‌ಡಿ ಸೋಂಕಿತ ಉಣ್ಣೆಗಳ ಕಡಿತದಿಂದ ಮಂಗಗಳಿಗೆ, ವಿಶೇಷವಾಗಿ ಲಾಂಗರ್‌ಗಳು ಮತ್ತು ಬಾನೆಟ್ ಮಕಾಕ್‌ಗಳಿಗೆ ಅರಣ್ಯ ಪ್ರದೇಶಗಳಲ್ಲಿ ಹರಡುತ್ತದೆ. ಸೋಂಕಿತ ಮಂಗಗಳು ಅರಣ್ಯ ಪ್ರದೇಶಗಳ ಮೂಲಕ ಚಲಿಸಿದಾಗ ಅವು ವೈರಸ್ ಇತರ ಉಣ್ಣೆಗಳಿಗೆ ಸಹ ಹರಡುತ್ತವೆ.

ಈ ಸೋಂಕಿತ ಉಣ್ಣೆ ಕಚ್ಚುವುದರಿಂದ ಹಾಗೂ ಸೋಂಕಿತ ಪ್ರಾಣಿಗಳ ಸಂಪರ್ಕದಿಂದ ಮನುಷ್ಯನಿಗೆ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಕಲುಷಿತ ವಸ್ತುಗಳನ್ನು ಸ್ಪರ್ಶಿಸುವ ಮೂಲಕ ಅಥವಾ ಸೋಂಕಿತ ಪ್ರಾಣಿಗಳಿಂದ ಪಾಶ್ಚರೀಕರಿಸದ ಹಾಲನ್ನು ಸೇವಿಸುವ ಮೂಲಕವೂ ಸೋಂಕು ಸಂಭವಿಸಬಹುದು. ಆದರೆ ಮನುಷ್ಯರಿಂದ ಮನುಷ್ಯರಿಗೆ ರೋಗ ಹರಡುವುದು ಅಪರೂಪ.

KFD3

ಮಂಗನ ಕಾಯಿಲೆ ಲಕ್ಷಣಗಳು: ಚಳಿ ಜ್ವರ, ತಲೆನೋವು, ಸ್ನಾಯು ಸೆಳತ, ವಾಂತಿ ಮತ್ತು ರಕ್ತಸ್ರಾವ, ತೀವ್ರತರವಾದ ಪ್ರಕರಣಗಳಲ್ಲಿ, ನರಮಂಡಲದ ಸಮಸ್ಯೆಗಳು ಎದುರಾಗುತ್ತದೆ. ಈ ಹಂತದಲ್ಲಿ ಪ್ಯಾರಾಸಿಟಮಲ್ ಮಾತ್ರೆ ಹೊರತಾಗಿ ಸ್ಟಿರಾಯ್ಡ್, ಡೈಕ್ಲೋಫಿನ್ ಚುಚ್ಚುಮದ್ದು ತೆಗೆದುಕೊಳ್ಳಬಾರದು ಎಂಬುದು ವೈದ್ಯರ ಸಲಹೆ.

ಮೊದಲ ಹಂತದಲ್ಲಿ ಚೇತರಿಸಿಕೊಳ್ಳದ ರೋಗಿಗಳಿಗೆ ಎರಡನೇ ಹಂತದಲ್ಲಿ ಬಿಳಿರಕ್ತ ಕಣಗಳು ಕಡಿಮೆಯಾಗಿ ತೀವ್ರ ರಕ್ತಸ್ರಾವವಾಗುತ್ತದೆ. ಈ ಹಂತದಲ್ಲಿ ಕಾಯಿಲೆ ಉಲ್ಬಣಗೊಂಡರೆ ಕಿಡ್ನಿ ವೈಫಲ್ಯ ಸೇರಿದಂತೆ ಅಂಗಾಂಗಗಳು ವೈಫಲ್ಯವಾಗಿ ರೋಗಿ ಮರಣ ಹೊಂದುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. 

ಕೆಎಫ್‌ಡಿ ಕಬಂಧ ಬಾಹು: ಐದು ವರ್ಷಗಳಲ್ಲಿ 24 ಜನ ಕೆಎಫ್‌ಡಿಯಿಂದ ಸಾವಿಗೀಡಾಗಿದ್ದಾರೆ. 2019ರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 12 ಮಂದಿ ಕೆಎಫ್‌ಡಿ ಸೋಂಕಿಗೆ ಬಲಿಯಾಗಿದ್ದರು. ಅಲ್ಲದೇ 344 ಜನರಲ್ಲಿ ಸೋಂಕು ದೃಢಪಟ್ಟಿತ್ತು. ಉತ್ತರ ಕನ್ನಡ ಜಿಲ್ಲೆಯ 85 ಜನರಿಗೆ ಸೋಂಕು ಕಾಣಿಸಿಕೊಂಡಿತ್ತು. ಇದರಲ್ಲಿ 3 ಜನ ಸಾವಿಗೀಡಾಗಿದ್ದರು. ಉಡುಪಿಯಲ್ಲಿ ಇಬ್ಬರು, ಮೈಸೂರು, ಬೆಳಗಾವಿ, ಚಿಕ್ಕಮಗಳೂರು ಹಾಗೂ ಹಾವೇರಿಯಲ್ಲಿ ಕ್ರಮವಾಗಿ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇನ್ನೂ 2020ರಲ್ಲಿ ಶಿವಮೊಗ್ಗದಲ್ಲಿ 184 ಪ್ರಕರಣ ಕಾಣಿಸಿಕೊಂಡಿತ್ತು. ನಾಲ್ಕು ಜನ ಸಾವಿಗೀಡಾಗಿದ್ದರು.ಉತ್ತರ ಕನ್ನಡ ಜಿಲ್ಲೆಯಲ್ಲಿ 91 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಈ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದರು. ಚಿಕ್ಕಮಗಳೂರಿನಲ್ಲಿ 12 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. 2021ರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 13, ಚಿಕ್ಕಮಗಳೂರು ಜಿಲ್ಲೆಯಲ್ಲಿ 2, ಉತ್ತರ ಕನ್ನಡ ಜಿಲ್ಲೆಯಲ್ಲಿ 8 ಪ್ರಕರಣಗಳು ಪತ್ತೆಯಾಗಿದ್ದವು. 2022ರಲ್ಲಿ ಶಿವಮೊಗ್ಗದಲ್ಲಿ 35 ಪಾಸಿಟಿವ್ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 14 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿತ್ತು. ಎರಡೂ ಜಿಲ್ಲೆಗಳಲ್ಲಿ ಒಬ್ಬೊಬ್ಬರು ಸಾವನ್ನಪ್ಪಿದ್ದರು. 2023ರಲ್ಲಿ ಶಿವಮೊಗ್ಗ 15, ಚಿಕ್ಕಮಗಳೂರು 2 ಜನರಿಗೆ ಸೋಕು ಕಾಣಿಸಿಕೊಂಡಿತ್ತು.

ಇನ್ನೂ ಇತ್ತೀಚೆಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಅವರು, ಒಂದು ವರ್ಷದೊಳಗೆ ಸೂಕ್ತ ಔಷಧವನ್ನು ಸರ್ಕಾರ ಒದಗಿಸಲಿದೆ ಎಂದು ಭರವಸೆಯನ್ನು ನೀಡಿದ್ದರು.

TAGGED:dinesh gundu raohealthhealth departmentKFDKyasanur Forest Diseaseshivamoggaಕೆಎಫ್‍ಡಿಶಿವಮೊಗ್ಗ
Share This Article
Facebook Whatsapp Whatsapp Telegram

Cinema Updates

Upendra
ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ
Cinema Latest Sandalwood
Pavithra Gowda Insta Profile
ಟೆನ್ಷನ್ ಹೊತ್ತಲ್ಲಿ ಬದಲಾಯ್ತು ಪವಿತ್ರಾ ಗೌಡ ಪ್ರೊಫೈಲ್
Cinema Latest Top Stories
S O Muttanna
ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
Cinema Latest Sandalwood Top Stories
Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood

You Might Also Like

Bidar rain
Bidar

ಬೀದರ್ | ಸತತ 1 ಗಂಟೆ ಧಾರಾಕಾರ ಮಳೆ – ರಸ್ತೆಗಳು ಸಂಪೂರ್ಣ ಜಲಾವೃತ

Public TV
By Public TV
3 hours ago
CRIME
Crime

ಮನೆಯಲ್ಲಿದ್ದ ಮಹಿಳೆಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆ; ಹಿಡಿದು ಪೊಲೀಸರಿಗೊಪ್ಪಿಸಿದ ಜನ

Public TV
By Public TV
3 hours ago
Hassan 3 Suspended For celebrating Birthday In Govt Office
Districts

ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ – ಮೂವರು ಸಾರಿಗೆ ಅಧಿಕಾರಿಗಳ ಅಮಾನತು

Public TV
By Public TV
3 hours ago
Davanagere Shruna Annual Fest
Davanagere

ದಾವಣಗೆರೆ ಶೃಂಗ ಸಮ್ಮೇಳನ – 15 ವರ್ಷಗಳ ಬಳಿಕ ಒಂದಾದ ಪಂಚಪೀಠಾಧೀಶರು

Public TV
By Public TV
3 hours ago
Maharashtra Murder
Crime

ʻದೃಶ್ಯಂʼ ಸಿನಿಮಾ ಸ್ಟೈಲ್‌ನಲ್ಲಿ ಕೊಲೆ – ಪ್ರಿಯಕರನ ಜೊತೆಗೂಡಿ ಗಂಡನನ್ನ ಕೊಂದು ಟೈಲ್ಸ್‌ ಕೆಳಗೆ ಹೂತಿದ್ದ ಪತ್ನಿ

Public TV
By Public TV
3 hours ago
Bengaluru Lady PSI Trapped In Lokayukta
Bengaluru City

1.25 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?