ದೇಶದಲ್ಲಿ ಮಾನ್ಸೂನ್ ಅಬ್ಬರ – ಕೇರಳದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Public TV
1 Min Read
Kerala Rain 1

– ಮುಂಬೈನಲ್ಲಿ 24 ಗಂಟೆಗಳಲ್ಲಿ 135.4 ಮಿ.ಮೀ ಮಳೆ
– ಹಿಮಾಚಲ ಪ್ರದೇಶದಲ್ಲಿ ಆಲಿಕಲ್ಲು ಮಳೆ

ನವದೆಹಲಿ: ದೇಶದಲ್ಲಿ ಮಾನ್ಸೂನ್ ಅಬ್ಬರ ಜೋರಾಗಿದ್ದು, ಕೇರಳದಲ್ಲೂ ಭಾರೀ ಮಳೆಯಾಗಿದೆ. ಕಣ್ಣೂರು, ವಯನಾಡ್, ಕೋಝಿಕ್ಕೋಡ್‌ನಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.

Mumbai Rain 1

ಕೊಚ್ಚಿಯ ಕಡಲತೀರದಲ್ಲಿ ಭಾರೀ ಗಾಳಿ ಬೀಸುತ್ತಿರುವುದರಿಂದ ತಿರುವನಂತಪುರಂ, ಕೊಲ್ಲಂ ಮತ್ತು ಆಲಪ್ಪುಳ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ವರುಣನ ಆರ್ಭಟಕ್ಕೆ ಸಮುದ್ರಗಳು ಪ್ರಕ್ಷುಬ್ದಗೊಂಡಿದೆ. ಭಾರೀ ಮಳೆಯಿಂದಾಗಿ ಜನ ತತ್ತರಿಸಿದ್ದಾರೆ. ಇದನ್ನೂ ಓದಿ: ಜೂನ್ ತಿಂಗಳಲ್ಲಿ ವಾಡಿಕೆಗಿಂತ ಅತ್ಯಧಿಕ ಮಳೆ – ರಾಜ್ಯದಲ್ಲಿ ಎಲ್ಲೆಲ್ಲಿ ಏನಾಗಿದೆ?

Himachal Pradesh Rain

ಮಹಾರಾಷ್ಟ್ರದ ಪುಣೆ, ಸತಾರಾ, ಸೋಲಾಪುರ, ರಾಯಗಢ ಮತ್ತು ಮುಂಬೈನಂತಹ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ರಾಯಗಢದಲ್ಲಿ ಸಿಡಿಲು ಬಡಿದು ಒಬ್ಬರು ಸಾವನ್ನಪ್ಪಿದರೇ, ಮುಂಬೈನಲ್ಲಿ ಮರ ಬಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ಮುಂಬೈ 24 ಗಂಟೆಗಳಲ್ಲಿ 135.4 ಮಿಮೀ ಮಳೆಯಾಗಿದೆ. ಹಿಮಾಚಲ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು, ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: 1200 ರೂ. ಬೆಲೆಯ ಟಿಕೆಟ್‌ 6000ಕ್ಕೆ ಸೇಲ್‌ – ಐಪಿಎಲ್‌ ಟಿಕೆಟ್‌ ಮಾರುತ್ತಿದ್ದ ಟೆಕ್ಕಿ ಬಂಧನ

Share This Article