ನವದೆಹಲಿ/ಬೆಂಗಳೂರು: ಈ ಬಾರಿಯ ಮುಂಗಾರು ಮಳೆ (Monsoon Rain) ಇಂದು ಕೇರಳ (Kerala) ಮತ್ತು ಈಶಾನ್ಯ ರಾಜ್ಯಗಳಿಗೆ (Northeast States) ಪ್ರವೇಶವಾಗಿದ್ದು, 2 ದಿನ ಮುನ್ನವೇ ಮುಂಗಾರು ಆರಂಭವಾಗಿದೆ.
ರೆಮಲ್ ಚಂಡಮಾರುತದ ಪರಿಣಾಮವಾಗಿ ಕೇರಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಈಗಾಗಲೇ ಜೋರಾಗಿ ಮಳೆ ಸುರಿಯುತ್ತಿದೆ. ಜುಲೈ 15ರ ಒಳಗಡೆ ಇಡೀ ಭಾರತದಲ್ಲಿ ಮುಂಗಾರು ಮಳೆ ಆಗಲಿದೆ.
- Advertisement -
- Advertisement -
#WATCH | Kerala: Rain lashes several parts of Kottayam district
As per IMD, Southwest Monsoon has set in over Kerala and advanced into most parts of Northeast India today, 30th May. pic.twitter.com/0ersoKXonI
— ANI (@ANI) May 30, 2024
- Advertisement -
ಹವಾಮಾನ ತಜ್ಞರ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕೇರಳ ಮತ್ತು ಈಶಾನ್ಯ ಭಾರತದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಸಾಧಾರಣ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಹಗುರ ಮಳೆ ಆಗಲಿದೆ. ಕೇರಳದ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಾಗಿದೆ. ಇದನ್ನೂ ಓದಿ: ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ನೀಡುವ ಯೋಜನೆ – ಏನು ಷರತ್ತುಗಳು ಹಾಕ್ತಾರೋ ಗೊತ್ತಿಲ್ಲ ಎಂದ ಡಿಕೆಶಿ
- Advertisement -
ಕರ್ನಾಟಕದಲ್ಲಿ (Karnataka) ಮುಂದಿನ 7 ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದ ಜೊತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಅತ್ತ, ಮಣಿಪುರದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ 3 ಮಂದಿ ಬಲಿಯಾಗಿದ್ದಾರೆ.