Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮಧೂರು ಮಹಾಗಣಪತಿಗೆ 33 ವರ್ಷಗಳ ಬಳಿಕ ಇಂದು ಮೂಡಪ್ಪ ಸೇವೆ

Public TV
Last updated: April 5, 2025 7:41 pm
Public TV
Share
3 Min Read
Kerala
SHARE

ಮಧೂರು (ಕಾಸರಗೋಡು): ಭಕ್ತರೆಲ್ಲರ ನಿರೀಕ್ಷೆಯ ಆ ಕ್ಷಣ ಬಂದೇ ಬಿಟ್ಟಿದೆ. ಕಾಸರಗೋಡು (Kasaragod) ಜಿಲ್ಲೆಯ ಪ್ರಸಿದ್ಧ ದೇವಾಲಯ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ (Madanantheshwara-Siddhivinayaka Temple) ಶತಮಾನದ ಮೊದಲ ಮೂಡಪ್ಪಸೇವೆ 33 ವರ್ಷಗಳ ಬಳಿಕ ಇಂದು ಜರಗಲಿದೆ.

ಕಳೆದ 14 ವರ್ಷಗಳಿಂದ ನವೀಕರಣ ಜೀರ್ಣೋದ್ಧಾರ ಪ್ರಕ್ರಿಯೆ ಪೂರ್ತಿಗೊಂಡಿದ್ದು, ಪುನಃ ಪ್ರತಿಷ್ಟಾ ಬ್ರಹ್ಮಕಲಶ ಸಮಾಪ್ತಿಯಾಗಿದೆ. ಕುಂಬಳೆ ಸೀಮೆಯ ಅತೀ ದೊಡ್ಡ ಸಂಭ್ರಮವಾಗಿ ಮೂಡಪ್ಪ ಸೇವೆಗೆ ಮಧೂರು ದೇವಸ್ಥಾನ ಅಣಿಯಾಗಿದ್ದು, ಮಹಾ ಉತ್ಸವಕ್ಕೆ ಲಕ್ಷಾಂತರ ಮಂದಿ ಭಕ್ತಾದಿಗಳು ಮಧೂರಿಗೆ ಬರುತ್ತಿದ್ದಾರೆ. ಇದನ್ನೂ ಓದಿ: ಕೊಲ್ಲೂರಲ್ಲಿ ಚಂಡಿಕಾ ಹೋಮದಿಂದ ಸಂಗ್ರಹವಾಯ್ತು 1.77 ಕೋಟಿ ರೂ

Kerala 5

ಮೂಡಪ್ಪ ಸೇವೆಗೆ ಮಧೂರು (Madhur) ಕ್ಷೇತ್ರ ಸಜ್ಜುಗೊಂಡಿದ್ದು, ಅಕ್ಕಿ ಮುಹೂರ್ತ ನಿನ್ನೆ ನೆರವೇರಿತು. ಬೆಳಿಗ್ಗೆ ದೀಪದ ಬಲಿ, ಶತರುದ್ರಾಭಿಷೇಕ, 128 ಕಾಯಿ ಅಷ್ಟದ್ರವ್ಯ ಮಹಾಗಣಪತಿ ಯಾಗ ನೆರವೇರಿತು. ಪಾರಂಪರಿಕ ಒನಕೆ ಹಾಗೂ ಬೀಸುವ ಕಲ್ಲಿನ ಮೂಲಕ ಅಕ್ಕಿ ಹುಡಿಮಾಡುವ ಪ್ರಕ್ರಿಯೆ ನಡೆಯಿತು. ಗಣೇಶ ದೇವರ ನಡೆಯಲ್ಲಿ ಅರೆಯುವ ಕಲ್ಲು, ಒನಕೆ ಹಾಗೂ ಬೀಸುವ ಕಲ್ಲಿಗೆ ಪೂಜೆ ನಡೆಸಲಾಯಿತು.

ಏನಿದು ಮೂಡಪ್ಪ ಸೇವೆ?: ಇಂದು ಬೆಳಗ್ಗೆ ಪೂಜೆ ನೆರವೇರಿಸಿ ಅಪ್ಪ ತಯಾರಿಯೂ ಆರಂಭವಾಗಿದೆ. ಮಹಾಗಣಪತಿಯನ್ನು ಅಪ್ಪದಿಂದ ಮುಚ್ಚುವ ಅತೀ ವಿಶಿಷ್ಟ, ಪ್ರಧಾನ ಸೇವೆಯನ್ನು ಮೂಡಪ್ಪ ಸೇವೆ ಎಂದು ಕರೆಯುತ್ತಾರೆ. ಇದನ್ನೂ ಓದಿ: ಒಳ ಮೀಸಲಾತಿ ಜಾರಿ ಮಾಡಿಯೇ ಮಾಡ್ತೀವಿ, ಯಾರಿಗೂ ಅನ್ಯಾಯ ಮಾಡಲ್ಲ: ಸಿದ್ದರಾಮಯ್ಯ

Kerala 3

ದೇಗುಲದಲ್ಲಿರುವ ಗಣಪತಿ ವಿಗ್ರಹದ ಸುತ್ತ ಸುಮಾರು ಆರೂವರೆ ಅಡಿ ಎತ್ತರದಲ್ಲಿ ಕಬ್ಬಿನಿಂದ ಬೇಲಿ ತಯಾರಿಸಿ ಅದರೊಳಗೆ ಅಷ್ಟದ್ರವ್ಯಗಳ ಸಹಿತ 144 ಸೇರು ಅಕ್ಕಿಯಿಂದ ಅಪ್ಪ ಹಾಗೂ 11 ಸೇರು ಅಕ್ಕಿಯಿಂದ ತಯಾರಿಸಿದ ಪಚ್ಚಪ್ಪ ತಯಾರಿಸಿ ಶ್ರೀ ಮಹಾಗಣಪತಿಯ ಕತ್ತಿನ ಭಾಗದವರೆಗೆ ತುಂಬುತ್ತಾರೆ. ಇದೇ ಸಂದರ್ಭ ಶ್ರೀ ಮದನಂತೇಶ್ವರ ದೇವರಿಗೆ ಮೂರು ಮುಡಿ ಅಕ್ಕಿಯಿಂದ ತಯಾರಿಸಿದ ಅಪ್ಪ ಹಾಗೂ ಒಂದು ಮುಡಿ ಅಕ್ಕಿಯ ನೈವೇದ್ಯ ಸಮರ್ಪಿಸಲಾಗುವುದು.

ಇಂದು ಬೆಳಿಗ್ಗೆ ಶ್ರೀ ದೇವರ ದೀಪದ ಬಲಿ, ದರ್ಶನಬಲಿ, ಶತರುದ್ರಾಭಿಷೇಕ, 128 ಕಾಯಿ ಅಷ್ಟದ್ರವ್ಯ ಮಹಾಗಣಪತಿಯಾಗ ನಡೆಯಿತು. ಇದನ್ನೂ ಓದಿ: ಹಸುವಿಗೆ ಲಕ್ಷಾಂತರ ರೂ. ಖರ್ಚು ಮಾಡಿ ಸೀಮಂತ – ಹಳ್ಳಿಕಾರ್‌ ತಳಿ ಉಳಿಸಲು ಉದ್ಯಮಿಯಿಂದ ವಿಶೇಷ ಜಾಗೃತಿ!

Kerala 2

ನಂತರ ಮೂಡಪ್ಪ ತಯಾರಿಯ ಅರಿಕೊಟ್ಟಿಗೆಯ ಮುಹೂರ್ತ ನಡೆಯಿತು. ಉಳಿಯತ್ತಾಯ ವಿಷ್ಣು ಆಸ್ರ ಬೆಳಗ್ಗಿನ ಜಾವ ಗಣಪತಿ ದೇವರಿಗೆ ಕಲಶಾಭಿಷೇಕ ನಡೆಸಿ, ಅರಿಕೊಟ್ಟಿಗೆ ಪ್ರವೇಶಿಸಿ ದ್ವಿಜರಿಗೆ ಮುಹೂರ್ತ ದಾನ ದಕ್ಷಿಣೆ ಕೊಟ್ಟು, ಸರ್ವಾಪ್ಪಣೆ ಪಡೆದು ಅಪ್ಪ ತಯಾರಿಗೆ ನಾಂದಿ ಹಾಡಿದರು.

ಸಂಜೆ 5ಕ್ಕೆ ಮಧೂರಿನಲ್ಲಿ ಉತ್ಸವ ಬಲಿ ನಡೆದು ಬಳಿಕ ದೇವರ ಮೂಲಸ್ಥಾನಕ್ಕೆ ಸವಾರಿ ಹೊರಡಲಿದೆ. ರಾತ್ರಿ ಮೂಲಸ್ಥಾನದ ಬೆಡಿಕಟ್ಟೆಯಲ್ಲಿ ಸುಡುಮದ್ದು ಪ್ರದರ್ಶನ ನಡೆಯಲಿದೆ. ಬಳಿಕ ದೇವರು ಕ್ಷೇತ್ರಕ್ಕೆ ನಿರ್ಗಮಿಸುವ ಯಾತ್ರೆ, ನಂತರ ದೇವಳದಲ್ಲಿ ಶ್ರೀ ಭೂತಬಲಿ ನಡೆದು ಮಹಾ ಮೂಡಪ್ಪಾಧಿವಾಸ ಹೋಮ ಜರಗಲಿದೆ. ಇದನ್ನೂ ಓದಿ: ಕಾಪು ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭೇಟಿ

Kerala 4

ನಾಳೆ ಏನೇನು ನಡೆಯಲಿದೆ?: ಏಪ್ರಿಲ್‌ 6ರಂದು ನಾಳೆ ಬೆಳಿಗ್ಗೆ 6.20ಕ್ಕೆ ಕವಾಟೋದ್ಘಾಟನೆ, ಅಪೂಪ ಪರ್ವತದ ಮಧ್ಯದಿಂದ ಮೂಡಿ ಬರುವ ಬೊಡ್ಡಜ್ಜ ಶ್ರೀ ಮಧೂರು ಸಿದ್ಧಿವಿನಾಯಕ ದೇವರ ದಿವ್ಯದರ್ಶನ, ವಿಶೇಷಾಭಿಷೇಕ, ಪ್ರಸನ್ನಪೂಜೆ, ಅಪೂಪಪ್ರಸಾದ ವಿತರಣೆ ಬಳಿಕ 128 ಕಾಯಿ ಅಷ್ಟದ್ರವ್ಯ ಮಹಾಗಣಪತಿಯಾಗ, ಮಹಾಪೂಜೆ, ಸಂಜೆ 6ಕ್ಕೆ ಜಳಕದ ಬಲಿ, ಕಟ್ಟೆಪೂಜೆ, ಶ್ರೀ ದೇವರ ಕೆರೆಯಲ್ಲಿ ಅವಭೃತ ಸ್ನಾನ, ದರ್ಶನ ಬಲಿ, ರಾಜಾಂಗಣ ಪ್ರಸಾದ ಬಳಿಕ ಧ್ವಜಾವರೋಹಣ ನಡೆಯಲಿರುವುದು.

ಅಪ್ಪ ತಯಾರಿ ಜವಾಬ್ದಾರಿ: ಈ ಬಾರಿ ಮಧೂರಿನ ದೇವನರ್ತಕ ಧನಂಜಯರಿಗೆ ಮೂಡಪ್ಪ ಅಪ್ಪ ಸೇವಾ ನಿರ್ಮಾಣ ಜವಾಬ್ದಾರಿ ವಹಿಸಲಾಗಿದೆ. ಇವರು ಮಧೂರಿನ ಪಡು ಕಕ್ಕೆಪ್ಪಾಡಿ ಮನೆಯವರು. ಈ ಹಿಂದೆ 1962ರಲ್ಲಿ ಮಧೂರಿನಲ್ಲಿ ನಡೆದ ಮೂಡಪ್ಪ ಸೇವೆ ಮತ್ತು 1992ರ ಮೂಡಪ್ಪ ಸೇವೆಯಲ್ಲಿ ಆ ಕಾಲದಲ್ಲಿ ಪ್ರಸಿದ್ಧ ದೇವನರ್ತಕರಾಗಿದ್ದ ಪಡುಕಕ್ಕೆಪ್ಪಾಡಿ ರಾಮಕೃಷ್ಣ ಭಟ್ರ ಪುತ್ರ.

Kerala 6

ಏಪ್ರಿಲ್‌ 6 ಭಾನುವಾರವಾಗಿರುವ ಹಿನ್ನೆಲೆಯಲ್ಲಿ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆಯಿದೆ. ಇಂದು ಕೂಡಾ ದೇವಳದಲ್ಲಿ ಭಾರೀ ಜನಸಂದಣಿಯಿದ್ದು, ಉಳಿಯತ್ತಡ್ಕದಲ್ಲೇ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಏರಿಕೆಯಾಗುತ್ತಿದ್ದ ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

TAGGED:Ganapathi UtsavakasaragodMadhur TempleSiddhi Vinayaka Templeಕಾಸರಗೋಡುಗಣಪತಿ ಉತ್ಸವಮಧೂರು ದೇವಸ್ಥಾನ
Share This Article
Facebook Whatsapp Whatsapp Telegram

Cinema News

S O Muthanna
ಮಲಯಾಳಂಗೆ ದೇವರಾಜ್ ಪುತ್ರನ ‘S/O ಮುತ್ತಣ್ಣ’ ಸಿನಿಮಾ
Cinema Latest Sandalwood
Sindhu Loknath
`ಅಪರಿಚಿತೆ’ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾದ ಸಿಂಧೂ ಲೋಕನಾಥ್
Cinema Latest Sandalwood Top Stories
Vikram Ravichandran
ಹುಟ್ಟು ಹಬ್ಬಕ್ಕೆ ಮುಧೋಳ್ ಚಿತ್ರದ ಅಪ್ಡೇಟ್‌ ಕೊಟ್ಟ ವಿಕ್ರಂ ರವಿಚಂದ್ರನ್
Cinema Latest Sandalwood
DARSHAN 5
ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
Bengaluru City Cinema Karnataka Latest Main Post Sandalwood States
Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories

You Might Also Like

DK Shivakumar 9
Bengaluru City

ಬಿಜೆಪಿಯವ್ರು ರಾಜಕೀಯಕ್ಕಾಗಿ ಧರ್ಮಸ್ಥಳದ ಹೆಸರು ಬಳಕೆ ಮಾಡ್ತಿದ್ದಾರೆ – ಡಿಕೆಶಿ

Public TV
By Public TV
14 minutes ago
DK Shivakumar 4
Bengaluru City

ಹೆಬ್ಬಾಳ ಫ್ಲೈಓವರ್ ಉದ್ಘಾಟಿಸಿದ ಡಿಸಿಎಂ – ಮೇಲ್ಸೇತುವೆಯಲ್ಲಿ ಡಿಕೆಶಿ ಬೈಕ್ ಓಡಿಸಿದ ಸ್ಟೈಲ್ ನೋಡಿ

Public TV
By Public TV
21 minutes ago
Sharnbaswappa Appa
Bidar

ಲಿಂಗೈಕ್ಯರಾದ ಶರಣಬಸಪ್ಪ ಅಪ್ಪ ಅಂತಿಮ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

Public TV
By Public TV
23 minutes ago
KH Muniyappa
Bengaluru City

ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಮುನಿಯಪ್ಪ

Public TV
By Public TV
24 minutes ago
BOMB BLAST KERALA
Crime

ಪಶ್ಚಿಮ ಬಂಗಾಳ | ಶಾಲೆಯ ಬಳಿಯೇ ಬಾಂಬ್‌ ಸ್ಫೋಟ – ಓರ್ವ ಸಾವು

Public TV
By Public TV
26 minutes ago
Mumbai Rains 2
Latest

ರಣ ಮಳೆಗೆ ನಡುಗಿದ ಮುಂಬೈ – ಹಲವೆಡೆ ಟ್ರಾಫಿಕ್‌ ಜಾಮ್‌, ಶಾಲಾ-ಕಾಲೇಜುಗಳಿಗೆ ರಜೆ, ರೆಡ್‌ ಅಲರ್ಟ್‌ ಘೋಷಣೆ

Public TV
By Public TV
28 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?