ಚಿತ್ರದುರ್ಗ: ಮದುವೆ ಊಟ ಸೇವಿಸಿದ್ದ 100ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿರುವ (Food Poison) ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಸದುರ್ಗ (Hosadurga) ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೋಮವಾರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಿಹಳ್ಳಿ ಗ್ರಾಮದ ಪ್ರಭುಲಿಂಗಪ್ಪ ಪುತ್ರನ ವಿವಾಹ ಸಂಭ್ರಮದಲ್ಲಿ ಘಟನೆ ನಡೆದಿದೆ. ಗವಿರಂಗಾಪುರ ಬೆಟ್ಟದಲ್ಲಿ ಭಾನುವಾರ ಮದುವೆ ನಡೆದಿತ್ತು. ಸೋಮವಾರ ಬೆಳಗ್ಗೆಯಿಂದ ಮದುವೆ ಹಾಜರಾದವರಿಗೆ ರಾತ್ರಿಯಿಂದಲೇ ಹೊಟ್ಟೆನೋವು ಶುರುವಾಗಿದೆ. ಬೆಳಗ್ಗೆ ವಾಂತಿಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಏರ್ಸ್ಟ್ರೈಕ್ಗೆ ಪಾಕ್ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ವ್ಯವಹಾರವೇ ಸ್ಥಗಿತ
ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳು ದಾಖಲಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಡ್ಗಳು ಭರ್ತಿ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಮಲ್ಲಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿಕಿತ್ಸಾ ಶಿಬಿರ ಆಯೋಜನೆ ಮಾಡಲಾಗಿದೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸೈನಿಕರಿಗೆ ಮೋದಿ ಆತ್ಮಸ್ಥೈರ್ಯ, ಉಗ್ರರಿಗೆ ಇದು ಎಚ್ಚರಿಕೆ: ಬಿ.ವೈ ವಿಜಯೇಂದ್ರ