Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಯಶಸ್ವಿ; 20 ಸಾವಿರ ಜನ ಭಾಗಿ, 11,000 ಅರ್ಜಿ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಯಶಸ್ವಿ; 20 ಸಾವಿರ ಜನ ಭಾಗಿ, 11,000 ಅರ್ಜಿ ಸಲ್ಲಿಕೆ

Bengaluru City

ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಯಶಸ್ವಿ; 20 ಸಾವಿರ ಜನ ಭಾಗಿ, 11,000 ಅರ್ಜಿ ಸಲ್ಲಿಕೆ

Public TV
Last updated: February 8, 2024 6:07 pm
Public TV
Share
5 Min Read
janaspandana siddaramaiah
SHARE

– ಇಡೀ ದಿನ ಜನರ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
– ಒಂದು‌ ತಿಂಗಳೊಳಗೆ ಸಮಸ್ಯೆ ಪರಿಹಾರಕ್ಕೆ ಸಿಎಂ ಡೆಡ್‌ಲೈನ್

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆದ ‘ಜನಸ್ಪಂದನ’ (Janaspandana) ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ. ಸುಮಾರು 11 ಸಾವಿರ ಅರ್ಜಿಗಳು ಸ್ವೀಕಾರವಾಗಿದ್ದು, ಒಂದೇ ತಿಂಗಳಲ್ಲಿ ಜನರಿಗೆ ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳಿಗೆ ಡೆಡ್‌ಲೈನ್ ನೀಡಿದ್ದಾರೆ.

ಮೊಟ್ಟ ಮೊದಲ ಬಾರಿಗೆ ವಿಧಾನಸೌಧದಲ್ಲಿ‌ ನಡೆದ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಸಾವಿರಾರು ಜನರ ಸಮಸ್ಯೆ ಆಲಿಸಿದ ಸಿಎಂ ಸ್ಥಳದಲ್ಲಿ ಪರಿಹಾರ ಕೊಟ್ಟರು. ಉಳಿದ ಅರ್ಜಿಗಳಿಗೆ ಒಂದು ತಿಂಗಳಲ್ಲಿ ಪರಿಹಾರ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಮಂಗಳೂರಿಗೆ CGHS ವೆಲ್‌ನೆಸ್ ಸೆಂಟರ್ ಮಂಜೂರು: ನಳಿನ್ ಹರ್ಷ

siddaramaiah janaspandana 1

ಬೆಳಗ್ಗೆ 11:30 ಕ್ಕೆ ಪ್ರಾರಂಭವಾದ ಜನ ಸ್ಪಂದನ ಕಾರ್ಯಕ್ರಮ ಸಂಜೆ 4:30 ವರೆಗೆ ನಡೆಯಿತು. ಪ್ರತಿ ಇಲಾಖಾವಾರು ಕೌಂಟರ್‌ಗಳನ್ನ ಸಿದ್ದಪಡಿಸಲಾಗಿತ್ತು. ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಹೊತ್ತು ಜನರು ಕೌಂಟರ್‌ಗಳಲ್ಲಿ ಕೂತಿದ್ದರು. ಖುದ್ದು ಜನರ ಬಳಿ ಸಿಎಂ ತೆರಳಿ ಅರ್ಜಿ ಸ್ವೀಕಾರ ಮಾಡಿದರು. ಸಮಚಿತ್ತದಿಂದ ಎಲ್ಲರ ಸಮಸ್ಯೆ ಆಲಿಸಿದರು. 150 ಕ್ಕೂ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕೊಟ್ಟರು. ಒಟ್ಟು 20 ಸಾವಿರಕ್ಕೂ ಹೆಚ್ಚು ಮಂದಿ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸುಮಾರು 11 ಸಾವಿರ ಅರ್ಜಿಗಳು ಸಮಸ್ಯೆ ಪರಿಹಾರಕ್ಕೆ ಸಲ್ಲಿಕೆಯಾದವು.

ಯೋಧನಿಂದ ತ್ರಿಚಕ್ರ ವಾಹನಕ್ಕೆ ಬೇಡಿಕೆ
ಮಗನಿಗೆ ಕೆಲಸಬೇಕು. ಮನೆ ಮಾಲೀಕ ಕಿರುಕುಳ ಕೊಡ್ತಿದ್ದಾನೆ. ಗೃಹಲಕ್ಷ್ಮಿ ಹಣ ಬಂದಿಲ್ಲ. ಯೋಧನಿಂದ ತ್ರಿಚಕ್ರ ವಾಹನಕ್ಕೆ ಡಿಮ್ಯಾಂಡ್. ನನ್ನ ಜಮೀನಿನ ದಾಖಲೆ ಬೇರೆಯವರಿಗೆ ಅಧಿಕಾರಿಗಳು ದಾಖಲಾತಿ ಮಾಡಿಕೊಟ್ಟಿದ್ದಾರೆ. ಹೀಗೆ ಹತ್ತು ಹಲವು ಸಮಸ್ಯೆ ಹೊತ್ತು ಸಾವಿರಾರು ಜನರು ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದರು. ಕಂದಾಯ ಇಲಾಖೆ, ವಸತಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ದೂರುಗಳೇ ಜನಸ್ಪಂದನದಲ್ಲಿ ಹೆಚ್ಚಾಗಿ‌ ಕಂಡು ಬಂದವು. ಇದನ್ನೂ ಓದಿ: ಪರಶುರಾಮ ಥೀಂ ಪಾರ್ಕ್ ಬಗ್ಗೆ ಸಿಐಡಿ ತನಿಖೆ ನಡೆಸುವುದನ್ನು ಸ್ವಾಗತಿಸುತ್ತೇನೆ: ಸುನಿಲ್ ಕುಮಾರ್

janaspandana

ಖುದ್ದು ಸಿಎಂ ಸಿದ್ದರಾಮಯ್ಯ ಪ್ರತಿ ಕೌಂಟರ್‌ಗೆ ತೆರಳಿ ಅರ್ಜಿ ಸ್ವೀಕಾರ ಮಾಡಿದರು. ಸ್ಥಳದಲ್ಲಿ ಪರಿಹಾರ ಆಗುವ ಸಮಸ್ಯೆಗೆ ಪರಿಹಾರವನ್ನು ಘೋಷಣೆ ಮಾಡಿದರು. ಡಬಲ್ ಡಿಗ್ರಿ ಮುಗಿಸಿರುವ ಬೆಂಗಳೂರಿನ ನಿವಾಸಿ ವಿಶೇಷಚೇತನ ನವ್ಯಶ್ರೀ ಅವರು ತಾಯಿ ರಮಾಮಣಿ ಅವರ ಜತೆ ಬಂದು ಉದ್ಯೋಗಕ್ಕಾಗಿ CM ಗೆ ಮನವಿ ಮಾಡಿದರು. ಉದ್ಯೋಗ ಮೇಳದ ವೇಳೆ ಈ ಅರ್ಜಿಯನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ವಿಶೇಷಚೇತನ ಸತ್ಯನಾರಾಯಣ ಅವರು ತಮ್ಮ ಡಯಾಲಿಸಿಸ್‌ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೊಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಅರ್ಜಿ ಪರಿಶೀಲಿಸಿ ಚಿಕಿತ್ಸೆಗೆ ನೆರವು ನೀಡುವಂತೆ ಸೂಚಿಸಿದರು. ಬೆಂಗಳೂರಿನ ಜೆ.ಜೆ ನಗರ ನಿವಾಸಿ ಎಂ.ಶ್ರೀಧರ್ ಅವರ ಎರಡೂ ಮೂತ್ರಪಿಂಡಗಳು ವಿಫಲವಾಗಿದ್ದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಕೋರಿ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಇವರ ಸಮಸ್ಯೆಗೆ ಕೂಡಲೇ ಸ್ಪಂದಿಸಿ ಪರಿಹಾರ ನೀಡುವ ಭರವಸೆ ನೀಡಿದರು.

ರಾಯಚೂರಿನ ಮೂರು ವರ್ಷದ ಶುಶಾಂತ್, ಥಲೆಸ್ಸೆಮಿಯಾ ಕಾಯಿಲೆಗೆ ತುತ್ತಾಗಿದ್ದಾನೆ. ಈತನನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಕರೆತಂದ ತಾಯಿ ಲಲಿತಾ ಅವರು ಆರ್ಥಿಕ ಸಹಾಯವನ್ನು ಕೋರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಪರಿಹಾರ ನಿಧಿಯಿಂದ ನೆರವು ಒದಗಿಸಲಾಗುವುದು ಎಂದು ಅರ್ಜಿಯನ್ನು ಸ್ವೀಕರಿಸಿ ಭರವಸೆ ನೀಡಿದರು. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಬಂತಹಳ್ಳಿ ಗ್ರಾಮದ 50 ವರ್ಷದ ನಾರಾಯಣಸ್ವಾಮಿ ಖಾತೆ ಬದಲಾವಣೆ ಮಾಡಲಾಗಿದ್ದು ಸರಿಪಡಿಸಿಕೊಡಿ ಎಂದು ಮುಖ್ಯಮಂತ್ರಿಗಳನ್ನು ಕೋರಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಪ್ರಕರಣದ ಕುರಿತು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದರು. ತುಮಕೂರಿನ ಮಾಡಗಶಿರಾ ಗ್ರಾಮದ ಶಾಂತಿಬಾಯಿ ಅವರ ಬುದ್ಧಿಮಾಂದ್ಯ ಮಗುವಿಗೆ ಚಿಕಿತ್ಸೆ ಮಾಡಿಸಲು ನೆರವು ಕೋರಿ ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸಿದ್ದರು. ಮಗುವಿನ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಮರುಗಿದ ಮುಖ್ಯಮಂತ್ರಿಗಳು ನೆರವು ನೀಡುವ ಅಭಯ ನೀಡಿದರು. ನೆಲಮಂಗಲದ ಕ್ಯಾನ್ಸರ್ ರೋಗಿ ಚೌಡೇಶ್ವರಿಗೆ ಶಸ್ತ್ರಚಿಕಿತ್ಸೆಗೆ ಆರ್ಥಿಕ ನೆರವಿನ ಅಗತ್ಯವಿದ್ದು, ಆರ್ಥಿಕ ನೆರವು ಕೋರಿ ಮನವಿ ಸಲ್ಲಿಸಿದರು. ತಾವು ಸ್ವೀಕರಿಸಿದ ಮನವಿಯನ್ನು ಮುಖ್ಯಮಂತ್ರಿಗಳು ಪರಿಹಾರ ನಿಧಿ ಶಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಇದನ್ನೂ ಓದಿ: ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಸಿಐಡಿ ತನಿಖೆಗೆ

janaspandana 2

ಮೈಸೂರು ಸರ್ಕಾರಿ ಆಯುರ್ವೇದ ಕಾಲೇಜಿನ ರಾಜೇಶ್ ಎನ್. ಅವರು ಕೆಲಸ ಕಾಯಂಗೊಳಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಗಳು ಈ ಕುರಿತು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಶರಣ ಬಸವ ಕುಮಾರ್ ಅವರಿಗೆ ಎರಡೂ ಕಣ್ಣುಗಳು ಕಾಣದಾಗಿದ್ದು ಸ್ವಂತ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಕೋರಿದರು. ಸಮಸ್ಯೆ ಆಲಿಸಿದ ಮುಖ್ಯ ಮಂತ್ರಿಗಳು ಪರಿಹಾರ ನಿಧಿಯಿಂದ ನೆರವು ನೀಡುವುದಾಗಿ ಅಭಯವನ್ನಿತ್ತರು. ಬೆಂಗಳೂರಿನ ಮಹಾಭೋದಿ ಸಂಶೋಧನಾ ಕೇಂದ್ರ ಇವರು ಬೌದ್ಧ ಜನಾಂಗದ ಆಧ್ಯಾತ್ಮಿಕ ಗ್ರಂಥಾಲಯದ ನವೀಕರಣಕ್ಕಾಗಿ 20 ಲಕ್ಷ ರೂ. ಅನುದಾನ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬೆಂಗಳೂರಿನ ಮಹಾಬೋಧಿ ಲುಂಬಿನಿ ಬುದ್ಧ ವಿಹಾರ ಸಂಸ್ಥೆಯವರು 2024-25 ನೇ ಆಯವ್ಯಯದಲ್ಲಿ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ನೀಡಿ, ಬೌದ್ಧ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸುವುದಾಗಿ ಭರವಸೆ ನೀಡಿದರು. ಬೆಳಗಾವಿ ಜಿಲ್ಲೆಯ ಸುರೇಶ್ ತುಕಾರಾಂ ಫೋಂಡೆ ತಮ್ಮ ಜಮೀನಿನಲ್ಲಿ ದೀಪಕ್ ಪಾಟೀಲ್ ಎಂಬುವರು ಮಣ್ಣು ತೆಗೆತ್ತಿಯುದ್ದು, ಕಳವು ಪ್ರಕರಣ ದಾಖಲಿಸಿಲ್ಲ ಎಂದು ದೂರಿದರು. ಸ್ಥಳದಲ್ಲಿಯೇ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪ್ರಕರಣ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ದಯಾನಂದ್ ಅವರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸ್ಥಳದಲ್ಲಿಯೇ ಮಾತನಾಡಿ ಕ್ರಮ ವಹಿಸಿಲು ಸೂಚಿಸಿದರು. ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ನಾಗರಾಜಯ್ಯ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಶಿರಾಸಲ್ಲಿ ರೂಢಿದಾರಿಯನ್ನು ಕತ್ತರಿಸಿರುವುದರಿಂದ 5 ಕಿ.ಮೀ ಬಳಸಿಕೊಂಡು ಓಡಾಡಬೇಕಿದೆ. ಇದನ್ನು ಸರಿಪಡಿಸುವಂತೆ ಕೋರಿದರು. ಅರ್ಜಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

10 ಲಕ್ಷ ರೂ. ಪರಿಹಾರ ಘೋಷಣೆ
ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ. ಪರಿಹಾರವನ್ನ ಸಿಎಂ ಘೋಷಿಸಿದರು. ರಾಮನಗರ ಜಿಲ್ಲೆಯ ವಿಜಯಕುಮಾರ್‌ ಬಿನ್‌ ನರಸಿಂಹಮೂರ್ತಿ ಎಂಬವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ 4 ಲಕ್ಷ ರೂ. ಧನಸಹಾಯವನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್‌ ಬೋನ್‌ ಮ್ಯಾರೋ ಕಸಿಗಾಗಿ 4 ಲಕ್ಷ ರೂ. ಧನಸಹಾಯವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿದರು. ತುಮಕೂರು ಜಿಲ್ಲೆಯ 8 ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ 50 ಸಾವಿರ ರೂ. ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು. ಬೆಂಗಳೂರಿನ ನೂರ್ ಫಾತಿಮಾ ಬಿನ್ ಇಬ್ರಾಹಿಂ ಇವರಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಕಝಾಕಿಸ್ಥಾನದಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸಕ್ಕಾಗಿ 10 ಲಕ್ಷ ರೂ. ಮಂಜೂರಾತಿ ಪತ್ರವನ್ನು ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯ ತಂದೆಗೆ ಹಸ್ತಾಂತರ ಮಾಡಿದರು. ಇದನ್ನೂ ಓದಿ: ಮೋದಿ ಒಬಿಸಿಯಲ್ಲಿ ಹುಟ್ಟಿಲ್ಲ, ಜನರ ದಾರಿ ತಪ್ಪಿಸುತ್ತಿದ್ದಾರೆ: ರಾಹುಲ್‌ ಗಾಂಧಿ

TAGGED:bengaluruJanaspandana Programsiddaramaiah
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
5 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
5 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
6 hours ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
7 hours ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
7 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?