ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ಸೊಂದು ತೋಟಕ್ಕೆ ನುಗ್ಗಿದೆ.
ಈ ಅಪಘಾತ ಇಂದು ಬೆಳಗ್ಗೆ ಸುಮಾರು 9 ಗಂಟೆಗೆ ನಡೆದಿದ್ದು, ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ಆಂಧ್ರ ಪ್ರದೇಶದ ಹಿಂದೂಪುರಕ್ಕೆ ಹೋಗುತ್ತಿತ್ತು. ಆದರೆ ಬಸ್ಸಿನ ಆಕ್ಸೆಲ್ ಕಟ್ ಆಗಿದ್ದ ಪರಿಣಾಮ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದೆ.
ಹಿಂದೂಪುರಕ್ಕೆ ಬಸ್ಸಿನಲ್ಲಿ 50 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಈ ಅವಘಡದಿಂದ ಬಸ್ಸಿನಲ್ಲಿದ್ದ 25-30 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.