ಬೆಂಗಳೂರು: ಪಬ್ಲಿಕ್ ಟಿವಿ (PUBLiC TV) ಆಯೋಜಿಸಿದ್ದ ಆರನೇ ಆವೃತ್ತಿಯ ವಿದ್ಯಾಪೀಠ (Vidhyapeetha) ಶೈಕ್ಷಣಿಕ ಮೇಳ ಯಶಸ್ವಿಯಾಗಿ ಮುಕ್ತಾಯವಾಗಿದೆ.
ಶನಿವಾರದಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ವಿದ್ಯಾಪೀಠಕ್ಕೆ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಕೊನೆಯ ದಿನವಾದ ಇಂದು 10 ಸಾವಿರಕ್ಕೂ ಹೆಚ್ಚು ಮಕ್ಕಳು, ಪೋಷಕರು ಆಗಮಿಸಿ ಶೈಕ್ಷಣಿಕ ಮೇಳದ ಪ್ರಯೋಜನವನ್ನು ಪಡೆದುಕೊಂಡರು.
ಒಟ್ಟು ಎರಡು ದಿನದಲ್ಲಿ 15ಸಾವಿರಕ್ಕೂ ಹೆಚ್ಚು ಮಂದಿ ಎಕ್ಸ್ಪೋದಲ್ಲಿ ಪಾಲ್ಗೊಂಡಿದ್ದರು. ಹ್ಯಾಂಡ್ರೈಟಿಂಗ್ ತಜ್ಞ ಡಾ.ರಫೀಉಲ್ಲಾ ಬೇಗ್ ಉಪನ್ಯಾಸ ಎಲ್ಲರ ಗಮನ ಸೆಳೆಯಿತು. ಕಾಮೆಡ್ಕೆ ಮತ್ತು ಸಿಇಟಿ ಕುರಿತ ವಿಶೇಷ ಉಪನ್ಯಾಸಕ್ಕೆ ಮಕ್ಕಳು ಫಿದಾ ಆದರು. ಮಹಿಳಾ ಕಾಲೇಜು ಪ್ರಾಂಶುಪಾಲ ರವಿ ಅವರು ಸಿಇಟಿ ಸೀಟು ಆಯ್ಕೆ, ಶುಲ್ಕ ಮತ್ತಿತರ ವಿಚಾರಗಳ ಬಗೆಗೆ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಕುಸಿದೇ ಬಿಡ್ತು 1,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ
ಹಲವು ಸ್ಪರ್ಧೆಗಳಲ್ಲಿ ಗೆದ್ದವರಿಗೆ ಗಿಫ್ಟ್ ನೀಡಲಾಯ್ತು. ಸಮಾರೋಪ ಕಾರ್ಯಕ್ರಮದಲ್ಲಿ ಎಕ್ಸ್ಪೋದಲ್ಲಿ ಪಾಲ್ಗೊಂಡಿದ್ದ ವಿದ್ಯಾಸಂಸ್ಥೆಗಳಿಗೆ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್ ಆರ್ ರಂಗನಾಥ್ (HR Ranganath) ಸ್ಮರಣಿಕೆ ನೀಡಿ ಗೌರವಿಸಿದರು. 15 ಅದೃಷ್ಟಶಾಲಿಗಳಿಗೆ ಸೈಕಲ್, ನಾಲ್ವರು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದರು.