ಬಳ್ಳಾರಿ: ಕಳೆದ ಎರಡು ದಿನಗಳ ಹಿಂದೆ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಬಳ್ಳಾರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ನೂರಾರು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ತಾಲೂಕಿನ ತಿರುಮಲನಗರ ಕ್ಯಾಂಪ್, ಧನಲಕ್ಷ್ಮಿ ಕ್ಯಾಂಪ್, ವಿಘ್ನೇಶ್ವರ ಕ್ಯಾಂಪ್, ಕಮ್ಮರಚೇಡು, ಶಂಕರಬಂಡೆ, ರೂಪನಗುಡಿ ಸೇರಿದಂತೆ ಹಲವೆಡೆ ಸರಿಸುಮಾರು 150ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಹೀಗಾಗಿ ತಾಲೂಕಿನ ಈ ಎಲ್ಲ ಗ್ರಾಮಗಳಲ್ಲಿ ವಿದ್ಯುತ್ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
- Advertisement 2
- Advertisement 3
ವಿದ್ಯುತ್ ಸಂಪರ್ಕವಿಲ್ಲದೆ, ಜನರು ಪರದಾಡುತ್ತಿದ್ದಾರೆ. ಆದರೆ ಜೆಸ್ಕಾಂ ಅಧಿಕಾರಿಗಳು ಮಾತ್ರ ಈವೆರೆಗೂ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯವನ್ನ ಪ್ರಾರಂಭಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.