ಮಂಡ್ಯ: ಕೌಟುಂಬಿಕ ಕಲಹದಿಂದ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹಾಗಲಹಳ್ಳಿಯಲ್ಲಿ ನಡೆದಿದೆ.
ಸವಿತಾ (29) ಹಾಗೂ ತರುಣ್ (9), ತೇಜಶ್ರೀ (7) ಮೃತಪಟ್ಟ ತಾಯಿ ಮಕ್ಕಳು. ಮದ್ದೂರು ತಾಲೂಕಿನ ಮರಕಾರದೊಡ್ಡಿ ಗ್ರಾಮದ ಸವಿತಾಳನ್ನು ಕೆ. ಹಾಗಲಹಳ್ಳಿ ಗ್ರಾಮದ ಸುಂದರ್ ಎಂಬವರ ಜೊತೆ ಕಳೆದ 10 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು.
ಮದುವೆ ದಿನದಿಂದಲೂ ಇಬ್ಬರು ಖುಷಿಯಾಗಿದ್ದರು. ಆದರೆ ಕಳೆದ ಒಂದು ವರ್ಷಗಳಿಂದ ಸಣ್ಣಪುಟ್ಟ ವಿಷಯಗಳಿಗೆ ಮನಸ್ಥಾಪ ಇತ್ತು. ರಾತ್ರಿ ಇದ್ದಕ್ಕಿದ್ದ ಹಾಗೇ ಸವಿತಾ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದ್ದಾರೆ.
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡು ಬರುತ್ತಿದೆ. ಅದರೆ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಇದಲ್ಲದೇ ಸವಿತಾ ಪತಿ ಸುಂದರ್ ಈಗ ಕಣ್ಮರೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.