ಕೋಲಾರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ ತನ್ನ ಮೂವರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ತೋಟಗಾನಹಳ್ಳಿ ಬಳಿ ಈ ಘಟನೆ ನಡೆದಿದೆ.
ಪಾರ್ವತಮ್ಮ(25), ಚಂದನ(5), ಅಕ್ಷಯ್(3) ಹಾಗೂ ಜೀವನ್(7) ಮೃತ ದುರ್ದೈವಿಗಳು. ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ನಕ್ಕನಹಳ್ಳಿ ನಿವಾಸಿ ಪಾರ್ವತಮ್ಮ ಹಾಗೂ ಆಕೆಯ ಮೂವರು ಮಕ್ಕಳು ಗುರುವಾರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಯಿ ಪಾರ್ವತಮ್ಮ ಹಾಗೂ ಮಗ ಅಕ್ಷಯ್ ಕುಮಾರ್ ಮೃತದೇಹಗಳು ಪತ್ತೆಯಾಗಿತ್ತು. ಇಂದು ಮುಂಜಾನೆ ಇನ್ನಿಬ್ಬರು ಮಕ್ಕಳಾದ ಚಂದನ ಹಾಗೂ ಜೀವನ್ ಅವರ ಮೃತದೇಹಗಳು ಪತ್ತೆಯಾಗಿವೆ. ಇನ್ನು ಮೃತರು ನುಕ್ಕನಹಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಪತ್ನಿ ಮಕ್ಕಳು ಎನ್ನಲಾಗಿದೆ.
ಸದ್ಯ ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.