ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಆತ್ಮಹತ್ಯೆ

Public TV
1 Min Read
Ane Suicide

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ.

ಸರ್ಕಾರ್ ಗುಟ್ಟಹಳ್ಳಿ ನಿವಾಸಿ 40 ವರ್ಷದ ಲಕ್ಷ್ಮಮ್ಮ, 4 ವರ್ಷದ ಮೋನಿಷ, 6 ವರ್ಷದ ಮೋಹಿತ್‍ರನ್ನ ಪೆತ್ತನಹಳ್ಳಿ ಗೇಟ್‍ನಲ್ಲಿರುವ ಕೃಷಿ ಹೊಂಡಕ್ಕೆ ತಳ್ಳಿ ಕೊಲೆ ಮಾಡಿ ನಂತ್ರ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ತಿರುಮಲಶೆಟ್ಟಿ ಹಳ್ಳಿ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತ ದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಹೊಸಕೋಟೆಯ ಎಂವಿಜೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಸಾವಿಗೆ ಕೌಟುಂಬಿಕ ಕಲಹವೆಂದು ಹೇಳಲಾಗುತ್ತಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಗಂಡ-ಹೆಂಡತಿ ಜಗಳದಲ್ಲಿ ಜಗತ್ತನ್ನ ಅರಿಯದ ಮುಗ್ಧ ಮಕ್ಕಳು ಸಾವನ್ನಪ್ಪಿರೋದು ದುರಂತ. ಈ ಸಂಬಂಧ ತಿರುಮಲಶೆಟ್ಟಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *