Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಉಡುಪಿಯಲ್ಲಿ ಸರ್ಕಾರಿ ಸ್ವಾಮ್ಯದ ಕ್ವಾರಿಗೆ ಬಿದ್ದು ತಾಯಿ-ಮಗ ಸಾವು!

Public TV
Last updated: April 25, 2017 5:32 pm
Public TV
Share
2 Min Read
UDP DEATH 3
SHARE

– ಮುಗಿಲುಮುಟ್ಟಿದ ತಂದೆಯ ಆಕ್ರಂದನ

ಉಡುಪಿ: ಬೆಳಗಾವಿಯ ಅಥಣಿಯಲ್ಲಿ ಕೊಳವೆ ಬಾವಿಗೆ 6 ವರ್ಷದ ಬಾಲಕಿ ಬಿದ್ದು ಮೃತಪಟ್ಟ ಘಟನೆ ಮಾಸುವ ಮುನ್ನವೇ ಉಡುಪಿಯಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ. ಬಟ್ಟೆ ಒಗೆಯಲು ಹೋಗಿದ್ದ ತಾಯಿ ಮಗುವನ್ನು ಕಲ್ಲು ಕ್ವಾರಿ ಬಲಿ ಪಡೆದಿದೆ.

UDP DEATH 4

ನಡೆದಿದ್ದೇನು?: ಉಡುಪಿಯ ಅಲೆವೂರಿನ ಪೆರುಪಾದೆ ಸರ್ಕಾರಿ ಸ್ವಾಮ್ಯದ ಕಲ್ಲಿನ ಕ್ವಾರಿ ಬಾಗಲಕೋಟೆ ಮೂಲದ ದ್ಯಾಮವ್ವ ಮತ್ತು ಹನುಮಂತ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ. ಬಟ್ಟೆ ಒಗೆಯಲು ಹೋದ ದ್ಯಾಮವ್ವ ನಾಲ್ಕು ವರ್ಷದ ಮಗನನ್ನು ಬಂಡೆಯ ಮೇಲೆ ಆಟವಾಡಲು ಬಿಟ್ಟಿದ್ದರು. ಹನುಮಂತ ಆಟವಾಡುತ್ತಾ ಕಲ್ಲಿನ ಕ್ವಾರಿಗೆ ಬಿದ್ದಿದ್ದಾನೆ. ಮಗ ನೀರಿಗೆ ಬಿದ್ದ ತಕ್ಷಣ ರಕ್ಷಿಸಲು ಹೋದ ತಾಯಿ ಕೂಡಾ ಮುಳುಗಿದ್ದಾರೆ. ತಾಯಿ-ಮಗು ಮುಳುಗುವುದನ್ನು ಕಂಡು ರಕ್ಷಿಸಲು ಸ್ಥಳೀಯರು ಹೋಗುವಷ್ಟರಲ್ಲಿ ಸಂಪೂರ್ಣ ಮುಳುಗಿ ಮೃತಪಟ್ಟಿದ್ದಾರೆ.

vlcsnap 2017 04 25 17h27m48s82

ಘಟನೆ ನಡೆದು ಸುಮಾರು 1 ಗಂಟೆ ಬಿಟ್ಟು ಅಗ್ನಿಶಾಮಕ ದಳ ಬೋಟ್ ಜೊತೆ ಬಂತು. ಆ ತಂಡದಲ್ಲಿ ಮುಳುಗು ತಜ್ಞರೇ ಇರಲಿಲ್ಲ. ಗರುಡಪಾತಾಳ ಹಾಕಿ ಮೃತದೇಹ ಹುಡುಕಲು ಯತ್ನಿಸಿದಾಗ ಅದು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ಅಧಿಕಾರಿಗಳ ಅಸಹಾಯಕತೆ ಕಂಡು ಸ್ಥಳೀಯ ಮುಳುಗು ತಜ್ಞರನ್ನು ಕರೆಸಲಾಯ್ತು. ಮೂವರು ಮುಳುಗು ತಜ್ಞರು ಬಂದು ಸುಮಾರು 15 ನಿಮಿಷಗಳ ಕಾಲ ಹುಡುಕಾಟ ನಡೆಸಿದರು. ಕ್ವಾರಿಯಲ್ಲಿ ಪಾಚಿ ತುಂಬಿಕೊಂಡಿದೆ. ಹಳೆಯ ಬಟ್ಟೆಗಳ ರಾಶಿಯೇ ಇದೆ. ಆಳದಲ್ಲಿ ಎರಡು ಮೃತದೇಹಗಳು ಸಿಲುಕಿದ್ದು, ಸದ್ಯ ಮೃತದೇಹಗಳನ್ನ ಮೇಲಕ್ಕೆತ್ತಿದ್ದೇವೆ ಅಂತಾ ಮುಳುಗು ತಜ್ಞರಾದ ಅಶೋಕ್ ಶೆಟ್ಟಿ, ನಿತೇಶ್, ಪ್ರಭಾಕರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ರು.

UDP DEATH 2

ಅಗ್ನಿಶಾಮಕದಳದ ಅಸಹಾಯಕತೆಗೆ ಸ್ಥಳೀಯರು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ತಂಡದಲ್ಲಿ 10-15 ಮಂದಿ ಇದ್ದರು. ಅದರಲ್ಲಿ ಒಬ್ಬನೂ ಈಜುಗಾರ ಇರಲಿಲ್ಲ ಎಂಬುದು ವಿಪರ್ಯಾಸ. ಇವರು ದೋಣಿಯಲ್ಲಿ ಕಬ್ಬಿಣದ ಸಲಾಕೆಗಳನ್ನು ಎಸೆದು ಹುಡುಕಾಟ ಮಾಡಿದರು. ಒಬ್ಬ ಸಿಬ್ಬಂದಿಯೂ ನೀರಿಗೆ ಇಳಿಯಲಿಲ್ಲ. ಈಜಲು- ಮುಳುಗಲು ಬಾರದವರನ್ನು ಅಗ್ನಿಶಾಮಕ ಇಲಾಖೆಗೆ ಆಯ್ಕೆ ಮಾಡಿದ್ದು ಯಾಕೆ?, ಸರ್ಕಾರ ಕೂಡಲೇ ಈ ಬಗ್ಗೆ ಗಮನ ಹರಿಸಬೇಕು. ಪರಿಣತರನ್ನು ಇಲಾಖೆಗೆ ಸೇರಿಸಬೇಕು ಎಂದು ಸ್ಥಳೀಯ ಅಲೆವೂರು ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಸೇರಿಗಾರ್ ಆಕ್ರೋಶ ವ್ಯಕ್ತಪಡಿಸಿದರು.

vlcsnap 2017 04 25 17h27m35s205

ಮುಗಿಲುಮುಟ್ಟಿದ ಆಕ್ರಂದನ: ದ್ಯಾಮವ್ವನ ಗಂಡ ಯಮುನಪ್ಪ ಹಾಸಂಗಿಗೆ ಮಾತು ಬರಲ್ಲ. ಕಿವಿನೂ ಕೇಳಿಸಲ್ಲ. ಮೃತದೇಹಗಳ ಪಕ್ಕ ಯಮುನಪ್ಪ ಕುಳಿತು ರೋಧಿಸುತ್ತಿದ್ದುದ್ದು ನೆರೆದವರ ಮನ ಕಲಕುವಂತಿತ್ತು. ಕಳೆದ ಮೂವತ್ತು ವರ್ಷಗಳಿಂದ ಇಬ್ಬರ ಕುಟುಂಬ ಉಡುಪಿಯಲ್ಲಿ ಕೂಲಿ ಕೆಲಸಕ್ಕೆಂದು ಬಂದಿತ್ತು. ಇಬ್ಬರಿಗೂ ಇಲ್ಲೇ ಮದುವೆಯಾಗಿತ್ತು. ಎರಡೂ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು.

UDP DEATH 1

ಜಿಲ್ಲೆಯಾದ್ಯಂತ ಸರ್ಕಾರ ನೂರಾರು ಬಂಡೆ ಕಲ್ಲು ಕ್ವಾರಿಗಳಿಗೆ ಪರವಾನಿಗೆ ನೀಡಿದೆ. ಕಲ್ಲು ತೆಗೆದು ಖಾಲಿಯಾದಾಗ ಕ್ವಾರಿಯನ್ನು ಹಾಗೆಯೇ ಬಿಟ್ಟು ಹೋಗಲಾಗುತ್ತದೆ. ಸುತ್ತಲೂ ತಡೆಗೋಡೆ ನಿರ್ಮಾಣ ಮಾಡಿಲ್ಲ. ಯಾವುದೇ ಮುನ್ನೆಚ್ಚರಿಕಾ ಬೋರ್ಟ್ ಅಳವಡಿಸಿಲ್ಲ. ಜಿಲ್ಲೆಯಾದ್ಯಂತ ನೂರಾರು ಕಲ್ಲುಕ್ವಾರಿಗಳಿದ್ದು ಎಲ್ಲವೂ ಹೀಗೆಯೇ ತೆರೆದುಕೊಂಡಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಜವಾಬ್ದಾರಿ ಇದು. ನಿದ್ದೆ ಮಾಡುತ್ತಿರುವ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಮಳೆಗಾಲ ಆರಂಭಕ್ಕೆ ಮುನ್ನ ಸೂಕ್ತ ಕ್ರಮ ಕೈಗೊಳ್ಳಬೇಕು ಅಂತಾ ಸ್ಥಳೀಯರು ಒತ್ತಾಯಿಸಿದ್ದಾರೆ.

UDP DEATH 5

TAGGED:BabymotherpublictvQuarryudupiಉಡುಪಿಕಲ್ಲಿನ ಕ್ವಾರಿತಾಯಿಪಬ್ಲಿಕ್ ಟಿವಿಮಗು ಸಾವು
Share This Article
Facebook Whatsapp Whatsapp Telegram

You Might Also Like

Shivamogga
Crime

ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ – ಇಬ್ಬರು ಅರೆಸ್ಟ್‌

Public TV
By Public TV
25 minutes ago
Siddaramaiah mallikarjun kharge
Bengaluru City

ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?

Public TV
By Public TV
48 minutes ago
Majestic bus stand
Bengaluru City

ಹೈಟೆಕ್ ಆಗಲಿದೆ ಮೆಜೆಸ್ಟಿಕ್ ಬಸ್ ನಿಲ್ದಾಣ – 40 ಎಕರೆ ಜಾಗದಲ್ಲಿ ಬಹುಮಾದರಿ ಟ್ರಾನ್ಸ್‌ಪೋರ್ಟ್‌ ಹಬ್!

Public TV
By Public TV
49 minutes ago
Shivamogga
Bengaluru City

ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

Public TV
By Public TV
56 minutes ago
PSI NAGARAJAPPA 1
Crime

ಕೌಟುಂಬಿಕ ಕಲಹಕ್ಕೆ ಬೇಸತ್ತು ಪಿಎಸ್‍ಐ ಆತ್ಮಹತ್ಯೆ – ಡೆತ್‍ನೋಟ್‍ನಲ್ಲಿ ಲಾಡ್ಜ್ ಮಾಲೀಕರ ಕ್ಷಮೆಯಾಚನೆ

Public TV
By Public TV
1 hour ago
Muslim UP
Latest

ಆರ್ಥಿಕ ನೆರವು, ವಿವಾಹದ ಭರವಸೆ ನೀಡಿ ಹಿಂದೂಗಳನ್ನ ಇಸ್ಲಾಂಗೆ ಮತಾಂತರ – ಮಾಸ್ಟರ್‌ ಮೈಂಡ್‌ ಸೇರಿ ಇಬ್ಬರು ಅರೆಸ್ಟ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?